ಕಲಬುರಗಿ: ಚಂದಾಪೂರ ಅರಣ್ಯ ಪ್ರದೇಶದಲ್ಲಿ ಹುಲಿ ಪ್ರತ್ಯಕ್ಷ
ಕಲಬುರಗಿ, ಫೆಬ್ರವರಿ 22 : ಜನ ಓಡಾಡೋ ರಸ್ತೆಯಲ್ಲಿ ಹುಲಿ ಓಡಾಡುತ್ತಿದ್ದರೆ ಯಾರಾದರೂ ಬೆವತು ಹೋಗುತ್ತಾರೆ. ಅಂಥಹದರಲ್ಲಿ ನಟ್ಟ ನಡುರಾತ್ರಿ ಚಿಂಚೋಳಿ ತಾಲೂಕಿನ ಚಂದಾಪುರ ಅರಣ್ಯ ಪ್ರದೇಶದ ಹತ್ತಿರದಲ್ಲಿರುವ ಗ್ರಾಮದಲ್ಲಿ ಹುಲಿ ಪ್ರತ್ಯಕ್ಷವಾಗಿದೆ.
ತಡರಾತ್ರಿ ಗ್ರಾಮದ ಹೊರವಲಯದಲ್ಲಿ ಹುಲಿ ಓಡಾಡುತ್ತಿದ್ದುದನ್ನು ಕೆಲವರು ಕಂಡಿದ್ದಾರೆ. ಅದರ ಫೋಟೋ ತೆಗೆದು, ಸಾಮಾಜಿಕ ಜಾಲ ತಾಣದಲ್ಲಿ ಹರಿಬಿಟ್ಟಿದ್ದಾರೆ. ಇದರಿಂದ ಹುಲಿ ಕಂಡೋರಷ್ಟೇ ಅಲ್ಲದೆ, ಫೋಟೋ ನೋಡಿದೋರು ಕೂಡ ಹುಲಿ ಇದೆ ಅಂತ ಭಯಗೊಂಡು ಮನೆ ಬಿಟ್ಟು ಆಚೆ ಬಂದಿಲ್ಲ. ರಾತ್ರಿ ಇಡೀ ಸುತ್ತಮುತ್ತಲ ಗ್ರಾಮಸ್ಥರು ಮನೆಗೆ ಬೀಗ ಹಾಕಿಕೊಂಡು ಕಾಲ ಕಳೆದಿದ್ದಾರೆ.
ಇನ್ನೂ, ಹುಲಿ ಪ್ರತ್ಯಕ್ಷವಾಗಿದ್ದರ ಬಗ್ಗೆ ಮಾಹಿತಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಬೆಳಗಿನ ಜಾವದವರೆಗೆ ಚಿಂಚೋಳಿ-ಚಂದಾಪುರ ರಸ್ತೆ ಬಂದ್ ಮಾಡಿದ್ದರು. ಆದರೆ, ಅವರಿಗೆ ಎಲ್ಲೂ ಹುಲಿ ಕಾಣಿಸಿಕೊಂಡಿಲ್ಲ.

'ಹುಲಿ ಪ್ರತ್ಯಕ್ಷ ಕೇವಲ ವದಂತಿ'
ಇದಾದ ಬಳಿಕ ಹುಲಿ ಕಂಡಿದ್ದರ ಬಗ್ಗೆ ಸ್ಪಷ್ಟನೆ ನೀಡಿರುವ ಚಿಂಚೋಳಿ ಆರ್ಎಫ್ಒ ಸುನೀಲ್ ಕುಮಾರ್, ಅರಣ್ಯ ಪ್ರದೇಶದಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು ಕೇವಲ ವದಂತಿ. ಚಿಂಚೋಳಿ-ಚಂದಾಪುರ ರಸ್ತೆಯ ಜಬ್ಬಾರ್ ಪೆಟ್ರೋಲ್ಬಂಕ್ ಬಳಿ ಹುಲಿ ಪ್ರತ್ಯಕ್ಷವಾಗಿದೆ ಎಂದು ಮಾಹಿತಿ ಬಂದಿತ್ತು.
ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಹುಲಿ ಹೆಜ್ಜೆ ಗುರುತು ಪತ್ತೆಯಾಗಿಲ್ಲ. ಒಂದು ವೇಳೆ ಅಲ್ಲಿ ಹುಲಿ ಓಡಾಡಿದ್ದರೆ ಹೆಜ್ಜೆ ಗುರುತು ಇರುತ್ತಿತ್ತು. ಬೇರೆ ಯಾವುದೋ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಹೀಗಾಗಿ ಸಾರ್ವಜನಿಕರು ಭಯಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications