ಕಲಬುರಗಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದ ಪ್ರತಿ ಜಿಲ್ಲೆಯಲ್ಲೂ ಟ್ರಕ್ ಟರ್ಮಿನಲ್ ನಿರ್ಮಾಣ

|
Google Oneindia Kannada News

ಕಲಬುರಗಿ, ಮಾರ್ಚ್ 06; "ಸಿಮೆಂಟ್ ನಗರಿಯಾಗಿರುವ ಕಲಬುರಗಿಯಲ್ಲಿ ಲಾರಿಗಳ ಸಂಚಾರ ದಟ್ಟಣೆ ಹೆಚ್ಚಿದೆ. ಇಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ ಅತ್ಯಗತ್ಯವಾಗಿದೆ. ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಜಮೀನು ಗುರುತಿಸಲು ನಿರ್ದೇಶನ ನೀಡಿದ್ದೇನೆ" ಎಂದು ಡಿ. ಎಸ್. ವೀರಯ್ಯ ಹೇಳಿದರು.

ಶನಿವಾರ ಕಲಬುರಗಿಯಲ್ಲಿ ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಿಗಮದ ಅಧ್ಯಕ್ಷ ಡಿ. ಎಸ್. ವೀರಯ್ಯ ಪತ್ರಿಕಾಗೋಷ್ಠಿ ನಡೆಸಿದರು. "ಸಂಚಾರ ದಟ್ಟಣೆ ನಿಯಂತ್ರಣ ಮಾಡಲು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಿಗಮದಿಂದ ಎಲ್ಲಾ ಮೂಲ ಸೌಕರ್ಯವುಳ್ಳ ಟ್ರಕ್ ಟರ್ಮಿನಲ್ ನಿರ್ಮಿಸುವ ಉದ್ದೇಶವಿದೆ" ಎಂದರು.

ಏಪ್ರಿಲ್ 5ರಿಂದ ರಾಷ್ಟ್ರವ್ಯಾಪಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರಏಪ್ರಿಲ್ 5ರಿಂದ ರಾಷ್ಟ್ರವ್ಯಾಪಿ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

"ನಿಗಮದಲ್ಲಿ ಹೆಚ್ಚಿನ ಅನುದಾನ ಇಲ್ಲದ ಕಾರಣ ಟ್ರಕ್ ಟರ್ಮಿನಲ್ ನಿರ್ಮಾಣವನ್ನು ಪಿಪಿಪಿ ಅಥವಾ ಜಂಟಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಲು ಚಿಂತಿಸಲಾಗುತ್ತಿದೆ. ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡಿದಲ್ಲಿ ನಿಗಮದಿಂದಲೇ ನಿರ್ಮಾಣ ಮಾಡಲಾಗುತ್ತದೆ" ಎಂದು ತಿಳಿಸಿದರು.

Truck Terminal To Come Up In All Districts Of Karnataka

"ಯಶವಂತಪುರ, ಧಾರವಾಡ ಹಾಗೂ ಮೈಸೂರು-ನಂಜನಗೂಡು ರಸ್ತೆಯಲ್ಲಿ ಈಗಾಗಲೇ ಟ್ರಕ್ ಟರ್ಮಿನಲ್‍ಗಳನ್ನು ನಿರ್ಮಾಣ ಮಾಡಲಾಗಿದೆ. ಬೆಂಗಳೂರಿನ ದಾಸನಪುರದಲ್ಲಿ 46 ಎಕರೆ ಪ್ರದೇಶದಲ್ಲಿ ಟರ್ಮಿನಲ್ ಇದೆ. ಹುಬ್ಬಳ್ಳಿಯಲ್ಲಿ 56 ಎಕರೆ, ಹೊಸಪೇಟೆಯಲ್ಲಿ 48 ಎಕರೆ ಜಮೀನು ಟರ್ಮಿನಲ್ ನಿರ್ಮಿಸಲು ಲಭ್ಯವಿದೆ" ಎಂದು ವಿವರಣೆ ನೀಡಿದರು.

ಶಿವಮೊಗ್ಗ; ತೀರ್ಥಹಳ್ಳಿ ಬಳಿ ಲಾರಿ ಪಲ್ಟಿ; 10 ಹಸು ಸಾವು ಶಿವಮೊಗ್ಗ; ತೀರ್ಥಹಳ್ಳಿ ಬಳಿ ಲಾರಿ ಪಲ್ಟಿ; 10 ಹಸು ಸಾವು

"ಮಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ನಿವೇಶನ ಮೀಸಲಿಡಲಾಗಿದೆ. ಕಲಬುರಗಿಯಲ್ಲಿ ಟರ್ಮಿನಲ್ ನಿರ್ಮಾಣ ಮಾಡಲು ಕಮಲಾಪುರದ ಮತ್ತು ಕಲಬುರಗಿ-ಶಹಾಬಾದ ರಸ್ತೆಯ ನಂದೂರ ಬಳಿ ನಿವೇಶನವಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 40 ರಿಂದ 50 ಎಕರೆ ಪ್ರದೇಶದಲ್ಲಿ ಮಾದರಿ ಟ್ರಕ್ ಟರ್ಮಿನಲ್ ನಿರ್ಮಿಸಲಾಗುತ್ತದೆ" ಎಂದು ಡಿ. ಎಸ್. ವೀರಯ್ಯ ತಿಳಿಸಿದರು.

ಬೀಡಿ ಎಲೆ ಸಾಗಿಸುತ್ತಿದ್ದ ಲಾರಿ ಬೆಂಕಿಗೆ ಆಹುತಿ: ಲಕ್ಷಾಂತರ ರೂ. ನಷ್ಟಬೀಡಿ ಎಲೆ ಸಾಗಿಸುತ್ತಿದ್ದ ಲಾರಿ ಬೆಂಕಿಗೆ ಆಹುತಿ: ಲಕ್ಷಾಂತರ ರೂ. ನಷ್ಟ

"ರಾಜ್ಯ ಹಾಗೂ ಅಂತರ ರಾಜ್ಯ ವಾಹನಗಳು ದಿನನಿತ್ಯ ಸಂಚಾರದ ಮೇಲಿರುವುದರಿಂದ ಹಾಗೂ ವಾಹನ ಚಾಲಕರಿಗೆ ತಂಗಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು ಅವಶ್ಯಕವಾಗಿದೆ. ಆದ್ದರಿಂದ, ಟ್ರಕ್ ಟರ್ಮಿನಲ್ ಬಳಿ ಕುಡಿಯುವ ನೀರು, ಶೌಚಾಲಯ, ಲಾಡ್ಜ್, ರೀಕ್ರಿಯೇಷನ್ ಕ್ಲಬ್, ಹೋಟೆಲ್ ಸ್ಥಾಪಿಸಲಾಗುತ್ತದೆ" ಎಂದರು.

English summary
Devaraj Urs truck terminals limited will set up truck terminals in all district of the Karnataka said D. S. Veeraiah president of the limited.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X