ವಿಜಯಪುರ ಬಾಲಕಿ ಅತ್ಯಾಚಾರ ವಿರೋಧಿಸಿ ಕಲಬುರಗಿ ಬಂದ್
ಕಲಬುರಗಿ, ಡಿಸೆಂಬರ್ 28 : ವಿಜಯಪುರದಲ್ಲಿ ನಡೆದ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಗುರುವಾರ ಕರೆ ನೀಡಲಾದ ಕಲಬುರಗಿ ಬಂದ್ ಹಿನ್ನೆಲೆಯಲ್ಲಿ ನಗರ ಸಂಪೂರ್ಣ ಸ್ತಬ್ಧವಾಗಿದೆ.
ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಘಟನೆ ಖಂಡಿಸಿ ದಲಿತ ಸಮನ್ವಯ ಸಮಿತಿ ಮತ್ತು ನಾನಾ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕಲಬುರಗಿ ಬಂದ್ಗೆ ಉತ್ತಮ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 500ಕ್ಕೂ ಅಧಿಕ ಬೈಕ್ ಗಳಲ್ಲಿ ಯುವಕರಿಂದ ಜಾಥಾ ನಡೆಯಿತು.

ನಗರದಾದ್ಯಂತ ಪ್ರತಿಭಟನೆ ಜೋರಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ನಡುವೆಯೂ ಹೊಸ ಹಾಗೂ ಹಳೆ ಜೇವರ್ಗಿ ರಸ್ತೆಯಲ್ಲಿರುವ ರೈಲ್ವೆ ಓವರ್ ಮತ್ತು ಅಂಡರ್ ಬ್ರಿಡ್ಜ್ ಸಂಚಾರವನ್ನು ಪ್ರತಿಭಟನಾಕಾರರು ತಡೆ ಕಾರಣ ವಾಹನ ಸವಾರರು ಪರದಾಡಿದರು.
ಕಾಂಗ್ರೆಸ್ ಕಾರ್ಯಕರ್ತರು ಸಹ ಬಂದ್ ಗೆ ಬೆಂಬಲ ಸೂಚಿಸಿದರು. ಈ ವೇಳೆ ಸಚಿವ ಅನಂತಕುಮಾರ ರಾಜೀನಾಮೆಗೆ ಆಗ್ರಹಿಸಿ ಟೌನ್ ಹಾಲ ಬಳಿ ಪ್ರತಿಭಟಿಸಿದರು. ಅಂಗಡಿ ಮುಂಗಟ್ಟು ವಹಿವಾಟು ಬಂದ್ ಮಾಡಿ ವ್ಯಾಪಾರಸ್ಥರು ಬೆಂಬಲ ಸೂಚಿಸಿದರು.
ರೈತ ಪರ ಸಂಘಟನೆಗಳು ಮತ್ತು ಎಪಿಎಂಸಿಯಲ್ಲಿ ವರ್ತಕರು ವಹಿವಾಟು ಸಂಪೂರ್ಣ ಸ್ಥಗಿತಗೊಳಿಸಿ ಬೆಂಬಲ ನೀಡಿದರು. ನಗರದ ಹೊರವಲಯದಲ್ಲಿ ಪ್ರತಿಭಟನೆ ಕಾವು ಜೋರಾಗಿರುವುದರಿಂದ ವಾಹನಗಳ ಓಡಾಟ ಸಂಪೂರ್ಣ ಸ್ಥಗಿತಗೊಂಡಿದೆ. ಬೇರೆ ಊರಿನಿಂದ ಬಂದ ಪ್ರಯಾಣಿಕರು ನಡು ರಸ್ತೆಯಲ್ಲೇ ಪರದಾಡುತ್ತಿದ್ದಾರೆ.
ದಲಿತ ಮತ್ತು ಕನ್ನಡಪರ ಸಂಘಟನೆಗಳಿಂದ ಪರಿಸ್ಥಿತಿ ಕೈ ಮೀರದಂತೆ ನಾನಾ ಮುಖಂಡರ ನೇತೃತ್ವದಲ್ಲಿ 10ಕ್ಕೂ ಅಧಿಕ ಮೇಲುಸ್ತುವಾರಿ ಸಮಿತಿ ರಚನೆಗೊಂಡಿದೆ. ದಲಿತ ಮುಖಂಡರಾದ ವಿಠ್ಠಲ್ ದೊಡ್ಮನಿ, ಸೂಯ೯ಕಾಂತ ನಿಂಬಾಳ್ಕರ್, ನ್ಯಾಯವಾದಿ ಹಾಗೂ ದಲಿತ ಸೇನೆ ರಾಜ್ಯ ಉಪಾಧ್ಯಕ್ಷ ಹಣಮಂತ ಯಳಸಂಗಿ, ಸುರೇಶ್ ಹಾದಿಮನಿ, ಸಂತೋಷ್ ಮೇಲ್ಮನಿ, ವಿಠ್ಠಲ್ ವಗ್ಗನ್, ಮಲ್ಲಪ್ಪ ಎಂ.ಹೊಸ್ಮನಿ, ಜಿಲ್ಲಾ ನ್ಯಾಯವಾದಿಗಳ ಸಂಘದ ವೀರಶೈವ, ಲಿಂಗಾಯತ.
ಎಸ್ಸಿ-ಎಸ್ಟಿ, ಅಲ್ಪಸಂಖ್ಯಾತರ ಘಟಕಗಳ ಮುಖಂಡರು, ಕನ್ಡಡಪರ ಸಂಘಟನೆಗಳ ಮುಖಂಡರಾದ ಶಿವಕುಮಾರ ನಾಟಿಕಾರ್, ಅರುಣಕುಮಾರ್ ಪಾಟೀಲ್, ಸಚಿನ್ ಫರಹತಾಬಾದ್, ಮಂಜುನಾಥ ನಾಲವಾರಕರ್ , ಮಾದಿಗ ದಂಡೋರ ಸಮಿತಿಯ ದಶರಥ ಕಲಗುತಿ೯ ಸೇರಿದಂತೆ ಇನ್ನಿತರರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ.
ಜಿಲ್ಲೆಯ ಎಲ್ಲ 11 ತಾಲೂಕು ಹಾಗೂ ಹೋಬಳಿ ಕೇಂದ್ರಗಳಿಂದ ಸಾವಿರಾರು ಕಾರ್ಯಕರ್ತರು ಆಗಮಿಸಿದ್ದು, ಅಹಿತಕರ ಘಟನೆಗೆ ಮುಂದಾಗದಂತೆ ಪ್ರತಿಭಟನಾಕಾರರಿಗೆ ಬಂದ್ ಸಂಚಾಲಕರು ಹಾಗೂ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
ಇನ್ನು ಕೇಂದ್ರ ಬಸ್ ನಿಲ್ದಾಣದ ಬಳಿ ಟೈರ್ ಗೆ ಬೆಂಕಿ ಹಚ್ಚುವ ವಿಷಯಕ್ಕೆ ಸಂಬಂಧಿಸಿದಂತೆ ಪೊಲೀಸರು ಹಾಗೂ ಪ್ರತಿಭಟನಾಕಾರರ ಮಧ್ಯೆ ವಾಗ್ವಾದ ನಡೆಯಿತು. ಟೈರಿಗೆ ಬೆಂಕಿ ಹಚ್ಚುವುದಾಗಿ ಹಠ ಹಿಡಿದ ಪ್ರತಿಭಟನಾಕಾರರು ಪೊಲಿಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿ ಬಂದ್ ಬಿಸಿ ಶವಕ್ಕೂ ತಟ್ಟಿದೆ. ನಗರದ ಆರ್ ಟಿ ಓ ಕಚೇರಿ ಬಳೀ ಶವ ಸಾಗಿಸುತ್ತಿದ್ದ ಟಂಟಂನ್ನು ಪ್ರತಿಭಟನಾಕಾರರು ತಡೆಹಿಡಿದರು. ಸುಮಾರು ಅರ್ಧಗಂಟೆಗೂ ಹೆಚ್ಚು ಸಮಯ ಟಂಟಂ ತಡೆ ಹಿಡಿದಿದ್ದರು. ನಂತರ ಮೃತನ ಸಂಬಂಧಿಕರಿಂದ ಮನವೊಲಿಸಿ ಶವವನ್ನು ಸಾಗಿಸಲಾಯಿತು.
ನಗರದಲ್ಲಿ ಆಟೋ, ಬಸ್ಗಳು ರಸ್ತೆಗೆ ಇಳಿದಿಲ್ಲ. ಒಳರಸ್ತೆಗಳಿಗೂ ಬಂದ್ ಬಿಸಿ ತಟ್ಟಿದ್ದರಿಂದ ಜನರು ಮನೆಯಿಂದ ಹೊರಬರುತ್ತಿಲ್ಲ. ಒಟ್ಟಾರೆ ಕಲಬುರಗಿ ಬಂದ್ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ ಎನ್ನಬಹುದು.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications