ಬಾಗಲಕೋಟೆ ಅಥವಾ ವಿಜಯಪುರದಿಂದ ಸ್ಪರ್ಧೆ ಖಚಿತ : ಯಡಿಯೂರಪ್ಪ
ಕಲಬುರಗಿ, ಸೆಪ್ಟೆಂಬರ್ 18: ಕ್ಷೇತ್ರ ಬದಲಾವಣೆಯ ಗಾಳಿ ಸುದ್ದಿಗಳಿಗೆ ಯಡಿಯೂರಪ್ಪ ಅಧಿಕೃತ ಮುದ್ರೆ ಒತ್ತಿದ್ದಾರೆ.
"ಕಾರ್ಯಕರ್ತರು ವಿಜಯಪುರ ಅಥವಾ ಬಾಗಲಕೋಟೆಯಿಂದ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ. ಜತೆಗೆ ಹೈಕಮಾಂಡ್ ಕೂಡಾ ಕ್ಷೇತ್ರ ಬದಲಾವಣೆಗೆ ಸೂಚಿಸಿದೆ. ಹೀಗಾಗಿ ಈ ಬಾರಿ ವಿಜಯಪುರ ಅಥವಾ ಬಾಗಲಕೋಟೆಯಿಂದ ಸ್ಪರ್ಧಿಸುತ್ತೇನೆ," ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಖಚಿತಪಡಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಗೆ ಸವಾಲೆಸೆದರು. "ನನ್ನ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ರಮೇಶ ಜಾರಕಿಹೊಳಿ ಯಾರು ಬೇಕಾದರೂ ಸ್ಪರ್ಧಿಸಬಹುದು," ಎಂದರು.

4-5 ದಿನದಲ್ಲಿ ದಾಖಲೆ ಬಿಡುಗಡೆ
ಕಳೆದ ಹಲವು ದಿನಗಳಿಂದ ದಾಖಲೆ ಬಿಡುಗಡೆಯ ಜಪ ಮಾಡುತ್ತಿರುವ ಯಡಿಯೂರಪ್ಪ, ಇನ್ನು 4-5 ದಿನಗಳೊಳಗೆ ಸಿದ್ದರಾಮಯ್ಯ ಆಪ್ತರು, ಕುಟುಂಬ ಸದಸ್ಯರು, ಸಚಿವರು, ಶಾಸಕರು ಹಾಗೂ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆ ಬಿಡುಗಡೆ ಮಾಡುತ್ತೇನೆ ಎಂದು ಪುನರುಚ್ಛರಿಸಿದ್ದಾರೆ.
ಕೆಲವು ದಾಖಲೆಗಳು ಸಿಗುವುದು ತಡವಾಗಿದ್ದರಿಂದ ಬಿಡುಗಡೆ ಮುಂದೂಡಿಕೆಯಾಗಿತ್ತು. ಆದರೆ ಈಗ ಎಲ್ಲಾ ದಾಖಲೆಗಳು ಸಂಗ್ರಹವಾಗಿವೆ ಎಂದು ಅವರು ಹೇಳಿದ್ದಾರೆ.

ನ. 1 ರಂದು ಮೋದಿ ಬೆಂಗಳೂರಿಗೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ನವೆಂಬರ್ 1ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಬಿಜೆಪಿ ಪಕ್ಷದ 'ವಿಧಾನಸಭಾ ಕ್ಷೇತ್ರದೆಡೆಗೆ ನಮ್ಮ ನಡಿಗೆ' ಕಾರ್ಯಕ್ರಮಕ್ಕೆ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿ ಪ್ರಚಾರದ ನೀಲನಕ್ಷೆ
ರಾಜ್ಯ ಸರಕಾರದ ನೀರಾವರಿ ಯೋಜನೆಗಳ ವೈಫಲ್ಯ ಖಂಡಿಸಿ ಸೆಪ್ಟೆಂಬರ್ 20ರಂದು ಕೊಪ್ಪಳ, 23ರಂದು ವಿಜಯಪುರದಲ್ಲಿ ಹೋರಾಟ ಮಾಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಸೆಪ್ಟೆಂಬರ್ 22ರಂದು ಬೀಳಗಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಬೃಹತ್ ಸಮಾವೇಶ, ಅಕ್ಟೋಬರ್ 8ರಂದು ಬೆಂಗಳೂರಿನಲ್ಲಿ ವಿಶ್ವಕರ್ಮ ಜಯಂತಿ ಆಚರಿಸಲಾಗುವುದು ಎಂದು ಅವರು ಕಾರ್ಯಕ್ರಮಗಳ ವಿವರ ನೀಡಿದ್ದಾರೆ.

ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ
ಎಂದಿನಂತೆ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಸಿದ್ದರಾಮಯ್ಯ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಯುತ್ತಿರುವುದರಿಂದ ಸಿದ್ದರಾಮಯ್ಯ ಕೂಡಲೇ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ಪಡೆಯಬೇಕು ಎಂದು ವಾಗ್ದಾಳಿ ನಡೆಸಿದರು.
ಯಡಿಯೂರಪ್ಪನವರ ಜತೆ ಬಿಜೆಪಿ ನಾಯಕರು ಇದೇ ವೇಳೆ ಉಪಸ್ಥಿತರಿದ್ದರು.
-
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು?












Click it and Unblock the Notifications