ಮಲ್ಲಿಕಾರ್ಜುನ್ ಖೂಬಾಗೆ ಬಿಜೆಪಿ ಟಿಕೆಟ್ ಸಿಗಲಿದೆಯೇ?
ಬೀದರ್, ಏಪ್ರಿಲ್ 02 : ಬಸವಕಲ್ಯಾಣದ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ, ಬಿಜೆಪಿ ಸೇರಿದ ತಕ್ಷಣ ಟಿಕೆಟ್ ಸಿಗಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಟಿಕೆಟ್ಗೆ ಹಲವು ಆಕಾಂಕ್ಷಿಗಳಿದ್ದಾರೆ. ಮಾಜಿ ಸಚಿವ ಬಸವರಾಜ್ ಪಾಟೀಲ್ ಅಟೂರ್, ಮಾಜಿ ಶಾಸಕ ಮಾರುತಿರಾವ್ ಮೂಳೆ, ಸಂಜಯ್ ಪಟವಾರಿ, ಯುವ ಮುಖಂಡ ಸುನಿಲ್ ಪಾಟೀಲ್ ಹಲವಾರು ಜನರು ಟಿಕೆಟ್ ಆಕಾಂಕ್ಷಿಗಳಪಟ್ಟಿಯಲ್ಲಿದ್ದಾರೆ.
ಈ ಎಲ್ಲಾ ನಾಯಕರು ಬಿಜೆಪಿ ಪ್ರಭಲ ನಾಯಕರುಗಳೇ ಆಗಿದ್ದರಿಂದ ಜೆಡಿಎಸ್ ತೊರೆದು ಬಿಜೆಪಿ ಸೇರುವ ಮಲ್ಲಿಕಾರ್ಜುನ್ ಖೂಬಾ ಅವರಿಗೆ ಟಿಕೆಟ್ ಸಿಗುವುದು ಮಾತ್ರ ಕಷ್ಟ ಸಾಧ್ಯ. ಖೂಬಾ ಇವರು ಬಿಜೆಪಿ ಸೇರುವುದು ಪಕ್ಷದ ಕಾರ್ಯಕರ್ತರಿಗೆ ಕೊಂಚ ಅಸಮಾಧಾನ ಉಂಟುಮಾಡಿದೆ.

ಈ ಕ್ಷೇತ್ರದಲ್ಲಿ ಬಿಜೆಪಿಗೆ ಬೆಳೆಸಿ, ಉಳಿಸಿದ ಕೀರ್ತಿ ನಮಗೆ ಸಲ್ಲಬೇಕು ಅದಲ್ಲದೆ ಚುನಾವಣೆ ಸಂದರ್ಭದಲ್ಲಿ ಭ್ರಷ್ಟಾಚಾರಿಗಳಿಗೆ ಟಿಕೆಟ್ ನೀಡಿದರೆ ನಾವೇನು ಮಾಡಬೇಕು? ಎಂದು ಕಾರ್ಯಕರ್ತರು ಪ್ರಶ್ನೆ ಮುಂದಿಟ್ಟಿದ್ದಾರೆ.
2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಎರಡೂ ಬಾರಿ ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿರುವ ಖೂಬಾ ಒಬ್ಬ ಅಧಿಕಾರ ದಾಹಿ ಮನುಷ್ಯ. ಅಧಿಕಾರವನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಾನೆ. ಅದಲ್ಲದೆ ರಾಜ್ಯ ಸಭಾ ಚುನಾವಣೆಯಲ್ಲಿ ಮತ ನೀಡಲು 5 ಕೋಟಿ ಡಿಮ್ಯಾಂಡ್ ಮಾಡಿದ್ದ ಆರೋಪ ಅವರ ಮೇಲೆ ಇದ್ದು ಇನ್ನು ಸಿಬಿಐ ತನಿಖೆ ನಡೆಸುತ್ತಿದೆ ಎಂದು ಕಾರ್ಯರ್ತರು ಆರೋಪ ಮಾಡಿದ್ದಾರೆ.
ಕಳೆದ ಬಾರಿ ಸೋಲುವ ಸಂದರ್ಭದಲ್ಲಿ ಗೆದ್ದ ಖೂಬಾ ಅವರಿಗೆ ಬಿಜೆಪಿ ಮೇಲೆ ಇಷ್ಟೂಂದು ಒಲವು ಏಕೆ?, ಬಿಜೆಪಿಯ ನಾಯಕರು ಅವರ ಬಗ್ಗೆ ಏಕೆ ಪ್ರೀತಿ ತೋರಿಸುತ್ತಿದ್ದಾರೆ? ಎಂದು ಬಿಜೆಪಿ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ.
ಟಿಕೆಟ್ ಕೈ ತಪ್ಪಿದರೆ ಬಸವರಾಜ್ ಪಾಟೀಲ್ ಅಟೂರ, ಮಾರುತಿರಾವ್ ಮೂಳೆ ಅವರು ಸುಮ್ಮನಿರುವುದಿಲ್ಲ. ಅವರು ಪ್ರಬಲ ಅಭ್ಯರ್ಥಿಗಳಾಗಿದ್ದು ಸ್ವತಂತ್ರ ಪಕ್ಷದಿಂದ ಗೆಲ್ಲುವ ಭರವಸೆ ಅವರಿಗಿದೆ ಎನ್ನುತ್ತಿದ್ದಾರೆ ಕಾರ್ಯಕರ್ತರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications