ಮಲ್ಲಿಕಾರ್ಜುನ್ ಖೂಬಾಗೆ ಬಿಜೆಪಿ ಟಿಕೆಟ್ ಸಿಗಲಿದೆಯೇ?
ಬೀದರ್, ಏಪ್ರಿಲ್ 02 : ಬಸವಕಲ್ಯಾಣದ ಜೆಡಿಎಸ್ ಶಾಸಕ ಮಲ್ಲಿಕಾರ್ಜುನ ಖೂಬಾ ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ, ಬಿಜೆಪಿ ಸೇರಿದ ತಕ್ಷಣ ಟಿಕೆಟ್ ಸಿಗಲಿದೆಯೇ? ಎಂಬ ಪ್ರಶ್ನೆ ಎದ್ದಿದೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು
ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಟಿಕೆಟ್ಗೆ ಹಲವು ಆಕಾಂಕ್ಷಿಗಳಿದ್ದಾರೆ. ಮಾಜಿ ಸಚಿವ ಬಸವರಾಜ್ ಪಾಟೀಲ್ ಅಟೂರ್, ಮಾಜಿ ಶಾಸಕ ಮಾರುತಿರಾವ್ ಮೂಳೆ, ಸಂಜಯ್ ಪಟವಾರಿ, ಯುವ ಮುಖಂಡ ಸುನಿಲ್ ಪಾಟೀಲ್ ಹಲವಾರು ಜನರು ಟಿಕೆಟ್ ಆಕಾಂಕ್ಷಿಗಳಪಟ್ಟಿಯಲ್ಲಿದ್ದಾರೆ.
ಈ ಎಲ್ಲಾ ನಾಯಕರು ಬಿಜೆಪಿ ಪ್ರಭಲ ನಾಯಕರುಗಳೇ ಆಗಿದ್ದರಿಂದ ಜೆಡಿಎಸ್ ತೊರೆದು ಬಿಜೆಪಿ ಸೇರುವ ಮಲ್ಲಿಕಾರ್ಜುನ್ ಖೂಬಾ ಅವರಿಗೆ ಟಿಕೆಟ್ ಸಿಗುವುದು ಮಾತ್ರ ಕಷ್ಟ ಸಾಧ್ಯ. ಖೂಬಾ ಇವರು ಬಿಜೆಪಿ ಸೇರುವುದು ಪಕ್ಷದ ಕಾರ್ಯಕರ್ತರಿಗೆ ಕೊಂಚ ಅಸಮಾಧಾನ ಉಂಟುಮಾಡಿದೆ.

ಈ ಕ್ಷೇತ್ರದಲ್ಲಿ ಬಿಜೆಪಿಗೆ ಬೆಳೆಸಿ, ಉಳಿಸಿದ ಕೀರ್ತಿ ನಮಗೆ ಸಲ್ಲಬೇಕು ಅದಲ್ಲದೆ ಚುನಾವಣೆ ಸಂದರ್ಭದಲ್ಲಿ ಭ್ರಷ್ಟಾಚಾರಿಗಳಿಗೆ ಟಿಕೆಟ್ ನೀಡಿದರೆ ನಾವೇನು ಮಾಡಬೇಕು? ಎಂದು ಕಾರ್ಯಕರ್ತರು ಪ್ರಶ್ನೆ ಮುಂದಿಟ್ಟಿದ್ದಾರೆ.
2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಎರಡೂ ಬಾರಿ ಜೆಡಿಎಸ್ ಪಕ್ಷದಿಂದ ಆಯ್ಕೆಯಾಗಿರುವ ಖೂಬಾ ಒಬ್ಬ ಅಧಿಕಾರ ದಾಹಿ ಮನುಷ್ಯ. ಅಧಿಕಾರವನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಾನೆ. ಅದಲ್ಲದೆ ರಾಜ್ಯ ಸಭಾ ಚುನಾವಣೆಯಲ್ಲಿ ಮತ ನೀಡಲು 5 ಕೋಟಿ ಡಿಮ್ಯಾಂಡ್ ಮಾಡಿದ್ದ ಆರೋಪ ಅವರ ಮೇಲೆ ಇದ್ದು ಇನ್ನು ಸಿಬಿಐ ತನಿಖೆ ನಡೆಸುತ್ತಿದೆ ಎಂದು ಕಾರ್ಯರ್ತರು ಆರೋಪ ಮಾಡಿದ್ದಾರೆ.
ಕಳೆದ ಬಾರಿ ಸೋಲುವ ಸಂದರ್ಭದಲ್ಲಿ ಗೆದ್ದ ಖೂಬಾ ಅವರಿಗೆ ಬಿಜೆಪಿ ಮೇಲೆ ಇಷ್ಟೂಂದು ಒಲವು ಏಕೆ?, ಬಿಜೆಪಿಯ ನಾಯಕರು ಅವರ ಬಗ್ಗೆ ಏಕೆ ಪ್ರೀತಿ ತೋರಿಸುತ್ತಿದ್ದಾರೆ? ಎಂದು ಬಿಜೆಪಿ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ.
ಟಿಕೆಟ್ ಕೈ ತಪ್ಪಿದರೆ ಬಸವರಾಜ್ ಪಾಟೀಲ್ ಅಟೂರ, ಮಾರುತಿರಾವ್ ಮೂಳೆ ಅವರು ಸುಮ್ಮನಿರುವುದಿಲ್ಲ. ಅವರು ಪ್ರಬಲ ಅಭ್ಯರ್ಥಿಗಳಾಗಿದ್ದು ಸ್ವತಂತ್ರ ಪಕ್ಷದಿಂದ ಗೆಲ್ಲುವ ಭರವಸೆ ಅವರಿಗಿದೆ ಎನ್ನುತ್ತಿದ್ದಾರೆ ಕಾರ್ಯಕರ್ತರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications