ಕಲಬುರಗಿ : ಬಿಆರ್ ಪಾಟೀಲ್, ಯಡಿಯೂರಪ್ಪ ಏಟು, ಎದಿರೇಟು!
ಕಲಬುರಗಿ, ಡಿಸೆಂಬರ್ 04 : 'ಅಳಂದ ಶಾಸಕ ಬಿ.ಆರ್.ಪಾಟೀಲ್ ಒಬ್ಬ ನಂಬಿಕೆ ದ್ರೋಹಿ, ವಿಶ್ವಾಸ ದ್ರೋಹಿ. ಯಡಿಯೂರಪ್ಪ ಹೆಸರಿನಲ್ಲಿ ಚುನಾವಣೆ ಗೆದ್ದು, ಇಂದು ಸಿದ್ದರಾಮಯ್ಯ ಬಾಲಂಗೋಚಿಯಾಗಿ ಓಡಾಡುತ್ತಿದ್ದಾರೆ' ಎಂದು ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು.
ನವ ಕರ್ನಾಟಕ ಪರಿವರ್ತನಾ ಯಾತ್ರೆಯ 23ನೇ ದಿನ ಕಲಬುರಗಿ ಜಿಲ್ಲೆಯ ಅಳಂದಲ್ಲಿ ಬಿಜೆಪಿಯ ಬೃಹತ್ ಸಮಾವೇಶ ನಡೆಯಿತು. ಸಮಾವೇಶ ಉದ್ದೇಶಿಸಿ ಮಾತನಾಡಿದ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ವಿರುದ್ಧ ಗುಡುಗಿದರು.
'ಯಡಿಯೂರಪ್ಪ ಹೆಸರಲ್ಲಿ ಚುನಾವಣೆ ಗೆದ್ದು, ಇಂದು ಸಿದ್ದರಾಮಯ್ಯನ ಬಾಲಂಗೋಚಿಯಾಗಿ ಓಡಾಡುತ್ತಿದ್ದಾರೆ. ಬಿ.ಆರ್.ಪಾಟೀಲ್ ಅವರಿಗೆ ಇನ್ನು ಮುಂದೆ ಮತ ಕೊಡಬೇಡಿ' ಎಂದು ಸಮಾವೇಶದಲ್ಲಿ ಯಡಿಯೂರಪ್ಪ ಕರೆ ನೀಡಿದ್ದರು.
ಯಡಿಯೂರಪ್ಪ ಆರೋಪಕ್ಕೆ ತಿರುಗೇಟು ಕೊಟ್ಟಿರುವ ಶಾಸಕ ಬಿ.ಆರ್.ಪಾಟೀಲ್, 'ಮೋಸಗಾರ ನಾನಲ್ಲ ಬದಲಾಗಿ ಯಡಿಯೂರಪ್ಪ' ಎಂದು ಹೇಳಿದ್ದಾರೆ. ಮೊದಲು ಕೆಜೆಪಿಯಿಂದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಬಿ.ಆರ್.ಪಾಟೀಲ್ ನಂತರ ಕಾಂಗ್ರೆಸ್ ಸೇರಿದ್ದಾರೆ.

ಸುಭಾಷ ಗುತ್ತೇದಾರ್ ಪರ ಬ್ಯಾಟಿಂಗ್
ಬಿಜೆಪಿ ಪರಿವರ್ತನಾ ಯಾತ್ರೆಯ 23ನೇ ದಿನದ ಸಮಾವೇಶ ಅಳಂದ ಪಟ್ಟಣದಲ್ಲಿ ಭಾನುವಾರ ನಡೆಯಿತು. ಶ್ರೀರಾಮ್ ಮಾರ್ಕೇಟ್ ಪ್ರದೇಶದಲ್ಲಿ ನಡೆದ ಸಮಾವೇಶ ಉದ್ದೇಶಿಸಿ ಮಾತನಾಡಿ ಯಡಿಯೂರಪ್ಪ ಅಳಂದ ಶಾಸಕ ಬಿ.ಆರ್.ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸುಭಾಷ ಗುತ್ತೇದಾರ ಪರ ಬ್ಯಾಟಿಂಗ್ ನಡೆಸಿದ್ದರು.

ವಿಶ್ವಾಸ ದ್ರೋಹಿಗೆ ಮತ ನೀಡಬೇಡಿ
'ಬಿ.ಆರ್.ಪಾಟೀಲ್ ಒಬ್ಬ ನಂಬಿಕೆ ದ್ರೋಹಿ, ವಿಶ್ವಾಸ ದ್ರೋಹಿ. ಯಡಿಯೂರಪ್ಪ ಹೆಸರಿನಲ್ಲಿ ಚುನಾವಣೆಯಲ್ಲಿ ಗೆದ್ದು, ಇಂದು ಸಿದ್ದರಾಮಯ್ಯನ ಬಾಲಂಗೋಚಿಯಾಗಿ ಓಡಾಡುತ್ತಿದ್ದಾರೆ' ಎಂದು ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದರು.

ಬಿ.ಆರ್.ಪಾಟೀಲ್ ದಿಟ್ಟ ಉತ್ತರ
ಬಿ.ಆರ್.ಪಾಟೀಲ್ ಯಡಿಯೂರಪ್ಪ ಅವರಿಗೆ ತಿರುಗೇಟು ಕೊಟ್ಟಿದ್ದಾರೆ. 'ಈ ಹಿಂದೆ ಇದೇ ಯಡಿಯೂರಪ್ಪ, ನಮಗೆಲ್ಲಾ ಬಿಜೆಪಿ ಪಕ್ಷದವರು ನನ್ನನ್ನು ಜೈಲಿಗೆ ಕಳಿಸಿದರು. ಅವರನ್ನು ಸುಮ್ಮನೆ ಬಿಡಬಾರದು ಎಂದು ಹೇಳಿ ಕೆಜೆಪಿ ಕಟ್ಟಿದರು. ಆದರೆ, ನಂತರ ನಮಗೆ ಮೋಸ ಮಾಡಿ ಕೆಜೆಪಿ ಬಿಟ್ಟು ಬಿಜೆಪಿ ಸೇರಿದರು. ಮೋಸಗಾರ ಯಾರು? ಯಡಿಯೂರಪ್ಪನವರೇ ಎಂದು ಪ್ರಶ್ನೆ ಮಾಡಿದ್ದಾರೆ'.

ಕೆಜೆಪಿಯಿಂದ ಗೆಲುವು ಸಾಧಿಸಿದ್ದರು
2013ರ ವಿಧಾನಸಭೆ ಚುನಾವಣೆಯಲ್ಲಿ ಬಿ.ಆರ್.ಪಾಟೀಲ್ ಅವರು ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 67,085 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ನಂತರ ನಡೆದ ಬೆಳವಣಿಗೆಯಲ್ಲಿ ಯಡಿಯೂರಪ್ಪ ಅವರು ಬಿಜೆಪಿಗೆ ವಾಪಸ್ ಆಗಿದ್ದರು.

ಕಾಂಗ್ರೆಸ್ ಸೇರಿದ ಬಿ.ಆರ್.ಪಾಟೀಲ್
ಯಡಿಯೂರಪ್ಪ ಬಿಜೆಪಿಗೆ ಮರಳಿದರೂ ಬಿ.ಆರ್.ಪಾಟೀಲ್ ಕೆಜೆಪಿ ಪಕ್ಷದ ಶಾಸಕರಾಗಿಯೇ ಗುರುತಿಸಿಕೊಂಡಿದ್ದರು. 2017ರ ಜೂನ್ನಲ್ಲಿ ಅವರು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿಯೇ ಅವರು 2018ರ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications