Belagavi south Constituency: ಬಿಜೆಪಿ ಶಾಸಕ ಅಭಯ್ ಪಾಟೀಲ್ಗೆ ಟಕ್ಕರ್ ನೀಡುವುದೇ ಕಾಂಗ್ರೆಸ್?
ಬೆಳಗಾವಿ, ಮಾರ್ಚ್ 23: ಬೆಳಗಾವಿಯು ಕರ್ನಾಟಕದ ಎರಡನೇ ರಾಜಧಾನಿ ಎಂದೇ ಖ್ಯಾತವಾಗಿದೆ. ಹೀಗಾಗಿ, ರಾಜ್ಯದ ಪ್ರತಿಷ್ಠಿತ ವಿಧಾನಸಭೆ ಕ್ಷೇತ್ರಗಳಲ್ಲಿ 'ಬೆಳಗಾವಿ ದಕ್ಷಿಣ ವಿಧಾನಸಭೆ ಕ್ಷೇತ್ರ'ವೂ ಒಂದು. ಈ ಕ್ಷೇತ್ರವು 2008 ರಲ್ಲಿ ಅಸ್ತಿತ್ವಕ್ಕೆ ಬಂದಿತು. ಈ ಕ್ಷೇತ್ರವು ಪ್ರತಿಷ್ಠಿತ ವಿದ್ಯಾಸಂಸ್ಥೆಗಳಿಗೆ ಹೆಸರು ವಾಸಿಯಾಗಿದೆ.
ಮರಾಠಿ ಭಾಷಿಗರು ಅಧಿಕವಾಗಿರುವ ಈ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಎಂಇಎಸ್ ಪಕ್ಷಗಳು ಗೆಲುವು ಸಾಧಿಸಿವೆ. 2008ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಅಭಯ್ ಪಾಟೀಲ್ ಅವರು ಶಾಸಕರಾಗಿ ಆಯ್ಕೆಯಾದರು. 2013ರಲ್ಲಿ ಎಂಇಎಸ್ನ ಸಂಭಾಜಿ ಲಕ್ಷ್ಮಣ ಪಾಟೀಲ್ ಅವರು ಶಾಸಕರಾಗಿ ಆಯ್ಕೆಯಾದರು. 2018ರಲ್ಲಿ ಬಿಜೆಪಿಯಿಂದ ಮತ್ತೆ ಅಭಯ ಪಾಟೀಲ್ ಅವರ ಜಯಭೇರಿ ಭಾರಿಸಿದರು.

ಈ ಕ್ಷೇತ್ರದಲ್ಲಿ ನಡೆದ ಮೂರು ವಿಧಾನಸಭೆ ಚುನಾವಣೆಗಳಲ್ಲಿ ಎರಡರಲ್ಲಿ ಬಿಜೆಪಿಯ ಅಭಯ್ ಪಾಟೀಲ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಭಯ್ ಪಾಟೀಲ್ ಅವರು 2004 ರಿಂದ 2008 ರ ವರೆಗೆ ಭಾರತೀಯ ಜನತಾ ಪಕ್ಷದ ಶಾಸಕರಾಗಿದ್ದರು. ಅವರು ಬಾಗೇವಾಡಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2008 ರಿಂದ 2013ರ ವರೆಗೆ ಅವರು ಬೆಳಗಾವಿ ದಕ್ಷಿಣದಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರು 35 ನೇ ವಯಸ್ಸಿನಲ್ಲಿ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದರು. ಅವರು ಭಾರತದ ಕಿರಿಯ ಹಾಗೂ ಮೊದಲ ತಲೆಮಾರಿನ ಶಾಸಕರಲ್ಲಿ ಒಬ್ಬರಾಗಿದ್ದಾರೆ.
2008 ರಲ್ಲಿ ನಡೆದ ಬೆಳಗಾವಿ ದಕ್ಷಿಣ ವಿಧಾನಸಭಾ ಚುನಾವಣೆಯಲ್ಲಿ 12,990 ಮತಗಳ ಮುನ್ನಡೆಯೊಂದಿಗೆ ಗೆಲುವು ಸಾಧಿಸಿದರು. 2013ರಲ್ಲಿ ಬಿಜೆಪಿ ಪಕ್ಷದಲ್ಲಿನ ಒಡಕಿನಿಂದಾಗಿ ಅಭಯ್ ಪಾಟೀಲ್ ಸೋತರು ಎಂಬ ಅಭಿಪ್ರಾಯಗಳು ಕೇಳಿಬಂದಿವೆ. 2013ರಲ್ಲಿ ಸಂಭಾಜಿ ಲಕ್ಷ್ಮಣ ಪಾಟೀಲ್ ಅವರು 54,426 ಮತಗಳನ್ನು ಪಡೆದು ಜಯಭೇರಿ ಬಾರಿಸಿದರು. ಬಿಜೆಪಿಗೆ 48,116 ಮತಗಳು ಬಂದವು. ಕಾಂಗ್ರೆಸ್ನ ಅನಿಲ್ ಎಂ ಪೋತದಾರ್ ಅವರು ಕೇವಲ 20,536 ಮತಗಳನ್ನು ಪಡೆಯುವಲ್ಲಿ ಸಫಲರಾದರು.

2018ರ ಚುನಾವಣೆಯಲ್ಲಿ ಮತ್ತೆ ಅಭಯ್ ಪಾಟೀಲ್ ಅವರು ಈ ಕ್ಷೇತ್ರದಿಂದ ಆಯ್ಕೆಯಾದರು. ಅವರು 84,498 ಮತಗಳನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯಶಸ್ವಿ ಆದರು. ಕಾಂಗ್ರಸ್ ಎಂಡಿ ಲಕ್ಷ್ಮಿನಾರಾಯಣ ಅವರಿಗೆ 25,806 ಮತಗಳು ದೊರೆತವು. ಎಂಇಎಸ್ನ ಪ್ರಕಾಶ್ ಅಪ್ಪಾಜಿ ಮರಗಲೆ ಅವರಿಗೆ 21,537 ಮತಗಳು ದೊರೆತವು.
ಬೆಳಗಾವಿ ದಕ್ಷಿಣ ಕ್ಷೇತ್ರದ ಆಕಾಂಕ್ಷಿಗಳು
ಈ ಬಾರಿ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆಯಲು ಅಭಯ್ ಪಾಟೀಲ್ ಹಾಗೂ ಕಿರಣ್ ಜಾದವ್ ಯುತ್ನ ನಡೆಸಿದ್ದಾರೆ. ಕಾಂಗ್ರೆಸ್ನಿಂದ ರಮೇಶ್ ಕುಡಚಿ ಹಾಗೂ ಸರಳಾ ಸಾತಪುತೆ ಅವರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಎಂಇಎಸ್ನಿಂದ ಶುಭಂ ಸೆಳಕೆ ಹಾಗೂ ರಮಾಕಾಂತ್ ಕಂಡೂಸ್ಕರ್ ಅವರು ಟಿಕೆಟ್ಗಾಗಿ ಯತ್ನ ನಡೆಸಿದ್ದಾರೆ.
ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಜಾತಿ ಲೆಕ್ಕಾಚಾರ
ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ 14, 000 ಲಿಂಗಾಯತ ಮತಗಳಿಗೆ. 70, 000 ಮರಾಠಿ ಸಮುದಾಯದ ಮತಗಳಿವೆ. 40, 000 ನೇಕಾರ ಸಮುದಾಯದ ಮತಗಳಿವೆ. 15, 000 ಜೈನ್ ಸಮುದಾಯದ ಮತಗಳಿವೆ. ಹತ್ತು ಸಾವಿರಕ್ಕೂ ಅಧಿಕ ಹಿಂದೂಳಿದ ವರ್ಗಕ್ಕೆ ಸೇರಿದ ಮತಗಳಿವೆ. ಎರಡು ಭಾರಿ ಈ ಕ್ಷೇತ್ರದಿಂದ ಆಯ್ಕೆಯಾಗಿರುವ ಅಭಯ್ ಪಾಟೀಲ್ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications