ಅಥಣಿಯಲ್ಲಿ ಲಕ್ಷ್ಮಣ ಸವದಿ ಭರ್ಜರಿ ಗೆಲುವು... ಜಾರಕಿಹೊಳಿಗೆ ಮುಖಭಂಗ
ಅಥಣಿ: ರಾಜ್ಯ ಚುನಾವಣಾ ಅಖಾಡದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳಲ್ಲಿ ಅಥಣಿ ಕೂಡ ಒಂದು. ಮೂರು ಬಾರಿ ಬಿಜೆಪಿಯಿಂದ ಗೆದ್ದು, ಈ ಬಾರಿ ಬಂಡೆದ್ದು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ ಸವದಿ, ಭರ್ಜರಿ ಅಂತರದಲ್ಲಿ ಬಿಜೆಪಿಗೆ ಸೆಡ್ಡು ಹೊಡೆದು ಗೆದ್ದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬರೋಬ್ಬರಿ 30 ಸಾವಿರ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಗೆ ಸೆಡ್ಡು ಹೊಡೆದಿದ್ದು, ಜಾರಕಿಹೊಳಿಗೆ ಮುಖಭಂಗವಾದಂತಾಗಿದೆ. ಈ ಹಿಂದೆ 2004, 2008, 2013 ರಲ್ಲಿ ಬಿಜೆಪಿಯಿಂದ ಮೂರು ಬಾರಿ ಗೆದ್ದಿದ್ದರು. ಬಳಿಕ ಕಳೆದ ಚುನಾವಣೆಯಲ್ಲಿ ಸೋತಿದ್ದ ಕಾರಣ ಈ ಬಾರಿ ಟಿಕೆಟ್ ನೀಡಿಲ್ಲ. ಹಾಗೆಯೇ ಜಾರಕಿಹೊಳಿ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ಕೊಡಿಸಿದ್ದರು.

ಕಳೆದ ಬಾರಿ ಸೋತರೂ ಕೂಡ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ವಿಧಾನಪರಿಷತ್ಗೆ ಆಯ್ಕೆಯಾಗುವ ಮೂಲಕ ಡಿಸಿಎಂ ಆಗಿದ್ದರು. ಆದರೆ ಈ ಬಾರಿಯ ವಿಧಾನಸಭಾ ಚುನಾವಣೆಗೆ ಟಿಕೆಟ್ ನೀಡದ ಕಾರಣ ಮುನಿಸಿಕೊಂಡು ಬಂಡೆದ್ದದ್ದರು. ಕಾಂಗ್ರೆಸ್ ಸೇರುವ ಮೂಲಕ ಬಿಜೆಪಿಗೆ ನೇರವಾಗಿ ಸವಾಲ್ ಹಾಕಿದ್ದರು.
ಲಕ್ಷ್ಮಣ ಸವದಿಯವರು ಬಿಜೆಪಿಯ ಕಟ್ಟಾಳು ಎಂದೇ ಹೇಳಲಾಗುತ್ತದೆ. ಆದರೆ, ಸವದಿ ಪಕ್ಷಬಿಟ್ಟು ಹೊರಟು ಈಗ ಜಯಭೇರಿ ಭಾರಿಸಿರುವುದು ಕಮಲ ನಾಯಕರಿಗೆ ನುಂಗಲಾಗದ ತುತ್ತಾಗಿ ಪರಿಣಮಿಸಿದೆ. ಹಲವು ರಾಜಕೀಯ ತಂತ್ರಗಾರಿಕೆಗಳ ಮಧ್ಯೆ ಲಕ್ಷ್ಮಣ ಸವದಿ ಕೊನೆಗೂ ಗೆಲುವು ಸಾಧಿಸಿದ್ದಾರೆ. ಬಿಜೆಪಿ ವಿರುದ್ಧ ಸೆಟೆದು ನಿಂತು, ಮುಖ್ಯವಾಗಿ ತನಗೆ ಟಿಕೆಟ್ ಬಾರದಿರಲು ಕಾರಣವಾಗಿದ್ದ ಜಾರಕಿಹೊಳಿ ವಿರುದ್ಧ ಗೆದ್ದು ಬೀಗಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications