ಅಥಣಿಯಲ್ಲಿ ಲಕ್ಷ್ಮಣ ಸವದಿ ಭರ್ಜರಿ ಗೆಲುವು... ಜಾರಕಿಹೊಳಿಗೆ ಮುಖಭಂಗ
ಅಥಣಿ: ರಾಜ್ಯ ಚುನಾವಣಾ ಅಖಾಡದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಕ್ಷೇತ್ರಗಳಲ್ಲಿ ಅಥಣಿ ಕೂಡ ಒಂದು. ಮೂರು ಬಾರಿ ಬಿಜೆಪಿಯಿಂದ ಗೆದ್ದು, ಈ ಬಾರಿ ಬಂಡೆದ್ದು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ ಸವದಿ, ಭರ್ಜರಿ ಅಂತರದಲ್ಲಿ ಬಿಜೆಪಿಗೆ ಸೆಡ್ಡು ಹೊಡೆದು ಗೆದ್ದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಬರೋಬ್ಬರಿ 30 ಸಾವಿರ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಗೆ ಸೆಡ್ಡು ಹೊಡೆದಿದ್ದು, ಜಾರಕಿಹೊಳಿಗೆ ಮುಖಭಂಗವಾದಂತಾಗಿದೆ. ಈ ಹಿಂದೆ 2004, 2008, 2013 ರಲ್ಲಿ ಬಿಜೆಪಿಯಿಂದ ಮೂರು ಬಾರಿ ಗೆದ್ದಿದ್ದರು. ಬಳಿಕ ಕಳೆದ ಚುನಾವಣೆಯಲ್ಲಿ ಸೋತಿದ್ದ ಕಾರಣ ಈ ಬಾರಿ ಟಿಕೆಟ್ ನೀಡಿಲ್ಲ. ಹಾಗೆಯೇ ಜಾರಕಿಹೊಳಿ ಮಹೇಶ್ ಕುಮಟಳ್ಳಿಗೆ ಬಿಜೆಪಿ ಟಿಕೆಟ್ ಕೊಡಿಸಿದ್ದರು.

ಕಳೆದ ಬಾರಿ ಸೋತರೂ ಕೂಡ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ವಿಧಾನಪರಿಷತ್ಗೆ ಆಯ್ಕೆಯಾಗುವ ಮೂಲಕ ಡಿಸಿಎಂ ಆಗಿದ್ದರು. ಆದರೆ ಈ ಬಾರಿಯ ವಿಧಾನಸಭಾ ಚುನಾವಣೆಗೆ ಟಿಕೆಟ್ ನೀಡದ ಕಾರಣ ಮುನಿಸಿಕೊಂಡು ಬಂಡೆದ್ದದ್ದರು. ಕಾಂಗ್ರೆಸ್ ಸೇರುವ ಮೂಲಕ ಬಿಜೆಪಿಗೆ ನೇರವಾಗಿ ಸವಾಲ್ ಹಾಕಿದ್ದರು.
ಲಕ್ಷ್ಮಣ ಸವದಿಯವರು ಬಿಜೆಪಿಯ ಕಟ್ಟಾಳು ಎಂದೇ ಹೇಳಲಾಗುತ್ತದೆ. ಆದರೆ, ಸವದಿ ಪಕ್ಷಬಿಟ್ಟು ಹೊರಟು ಈಗ ಜಯಭೇರಿ ಭಾರಿಸಿರುವುದು ಕಮಲ ನಾಯಕರಿಗೆ ನುಂಗಲಾಗದ ತುತ್ತಾಗಿ ಪರಿಣಮಿಸಿದೆ. ಹಲವು ರಾಜಕೀಯ ತಂತ್ರಗಾರಿಕೆಗಳ ಮಧ್ಯೆ ಲಕ್ಷ್ಮಣ ಸವದಿ ಕೊನೆಗೂ ಗೆಲುವು ಸಾಧಿಸಿದ್ದಾರೆ. ಬಿಜೆಪಿ ವಿರುದ್ಧ ಸೆಟೆದು ನಿಂತು, ಮುಖ್ಯವಾಗಿ ತನಗೆ ಟಿಕೆಟ್ ಬಾರದಿರಲು ಕಾರಣವಾಗಿದ್ದ ಜಾರಕಿಹೊಳಿ ವಿರುದ್ಧ ಗೆದ್ದು ಬೀಗಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications