Periyapatna Elections: ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ನೇರ ಹಣಾಹಣಿ
ಮೈಸೂರು, ಮಾರ್ಚ್ 27: ಪಿರಿಯಾಪಟ್ಟಣ ಇದು ಮೈಸೂರು ಜಿಲ್ಲೆಯ ಒಂದು ತಾಲೂಕು ಕೇಂದ್ರವಾಗಿದ್ದು ಮಂಗಳೂರು ಮತ್ತು ಮೈಸೂರು ಹೆದ್ದಾರಿಯಲ್ಲಿ ಮೈಸೂರಿನಿಂದ 70ಕಿ. ಮೀ ದೂರದಲ್ಲಿರುವ ಒಂದು ಪಟ್ಟಣ ಪಂಚಾಯತಿ ಆಗಿದೆ. ಮೈಸೂರು -ಬಂಟ್ವಾಳ-ಬೆಂಗಳೂರು ಹೆದ್ದಾರಿಯಲ್ಲಿರುವ ಪಿರಿಯಾಪಟ್ಟಣ ಗಡಿಭಾಗದ ಕ್ಷೇತ್ರವಾಗಿದೆ. ಕೇರಳದ ಗಡಿ, ಕೊಡಗಿನ ಗೋಣಿಕೊಪ್ಪಲು, ಸಿದ್ದಾಪುರಕ್ಕೆ ಸಂಪರ್ಕ ಹೊಂದಿದೆ.
ಪಿರಿಯಾಪಟ್ಟಣದಲ್ಲಿ ಪ್ರಸಿದ್ಡ ಮಸಣಿಕಮ್ಮ ದೇವಾಲಯವಿದೆ. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪುಟ್ಟಣ ಕಣಗಾಲ್, ಜಾನಪದ ವಿದ್ವಾಂಸರಾದ ಪಿ.ಕೆ.ರಾಜಶೇಖರ್ ಹಾಗೂ ಲೇಖಕಿ, ಜಾನಪದ ಸಂಶೋಧಕಿಯಾದ ವಿಜಯಲಕ್ಷ್ಮಿ ಮನಾಪುರ ಅವರ ಊರು ಈ ಪಿರಿಯಾಪಟ್ಟಣ.

ತಂಬಾಕು ಬೆಳೆ, ಶುಂಠಿ ಸೇರಿದಂತೆ ವಾಣಿಜ್ಯ ಬೆಳೆಗಳನ್ನು ಈ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಮಂಗಳೂರು ಮತ್ತು ಮೈಸೂರು ನಡುವೆ ಇರು ಪ್ರದೇಶವಾಗಿರುವುದರಿಂದ ಇಲ್ಲಿ ನಗರಗಳಿಗೆ ಹೋಲಿಸಿದರೆ ಹಿತಕರವಾದ ವಾತಾವರಣವಿದೆ. ಸದ್ಯ ಅಭಿವೃದ್ಧಿಯತ್ತ ಸಾಗುತ್ತಿರುವ ಪಿರಿಯಾಪಟ್ಟಣ ವಿಧಾನಸಭಾಕ್ಷೇತ್ರದ ರಾಜಕೀಯ ವಿಶ್ಲೇಷಣೆ ಇಲ್ಲಿದೆ.
| ಪಿರಿಯಾಪಟ್ಟಣ ಕ್ಷೇತ್ರದ ಮತದಾರರ ವಿವರ |
| ಒಟ್ಟು ಮತದಾರರು - 1,77,072 |
| ಪುರುಷ ಮತದಾರರು - 89,469 |
| ಮಹಿಳಾ ಮತದಾರರು - 87,551 |
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ಜಿದ್ದಾಜಿದ್ದಿಯ ಪೈಪೋಟಿ ಇದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ನೇರಾ ಹಣಾಹಣಿಯಿದ್ದು, ಈ ಬಾರಿ ಬಿಜೆಪಿ ಕೂಡ ಕ್ಷೇತ್ರದಲ್ಲಿ ತನ್ನ ಖಾತೆ ತೆರೆಯ ಬೇಕು ಎನ್ನುವ ಪ್ರಯತ್ನದಲ್ಲಿದೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಎಂ.ಎಸ್ ಮರಿಯಪ್ಪ ಈ ಕ್ಷೇತ್ರ ಮೊದಲ ಶಾಸಕರಾಗಿದ್ದಾರೆ.
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ರಾಜಕೀಯ ಇತಿಹಾಸ
1952ರಿಂದ ಈವರೆಗೆ ನಡೆದ ಚುನಾವಣೆಯಲ್ಲಿ ಆರು ಬಾರಿ ಕಾಂಗ್ರೆಸ್ ಅಭ್ಯರ್ಥಿ, ಮೂರು ಬಾರಿ ಜೆಡಿಎಸ್ ಅಭ್ಯರ್ಥಿ ಹಾಗೂ ಎರಡು ಬಾರಿ ಪಕ್ಷೇತರ ಅಭ್ಯರ್ಥಿ,ಒಂದ ಬಾರಿ ಜನತಾ ಪಕ್ಷದ ಅಭ್ಯರ್ಥಿ ಹಾಗೂ ಒಂದು ಬಾರಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಎಂ.ಎಸ್ ಮರಿಯಪ್ಪ, ಎನ್.ಆರ್ ಸೋಮಣ್ಣ, ಕೆ.ಎಂ ದೇವಯ್ಯ, ಎಚ್.ಎಂ ಚನ್ನಬಸಪ್ಪ, ಕೆ.ವೆಂಕಟೇಶ್, ಎಚ್.ಸಿ ಬಸವರಾಜು, ಕೆ.ಮಹದೇವ್ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಅಧಿಕಾರ ನಡೆಸಿದ್ದಾರೆ.

ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಕೆ.ವೆಂಕಟೇಶ್ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಜೆಡಿಎಸ್ನಿಂದ ಸ್ಪರ್ಧಿಸಿದ್ದ ಅವರು ಬಳಿಕ ಕಾಂಗ್ರೆಸ್ ಸೇರ್ಪಡೆಗೊಂಡು ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆ ಮಾಡಿದ್ದರು. ಆದರೆ 2018ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಕೆ.ಮಹದೇವ್ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿ, ಕೆ.ವೆಂಕಟೇಶ್ ಅವರ ಸತತ ಗೆಲುವಿಗೆ ಬ್ರೇಕ್ ಹಾಕಿದರು. 2018ರ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಕೆ.ಮಹದೇವ್ ಕ್ಷೇತ್ರವನ್ನು ಜೆಡಿಎಸ್ ತೆಕ್ಕೆಗೆ ತಂದರು.
| ವರ್ಷ | ವಿಜೇತರು | ಮತಗಳು | ಸೋತವರು | ಮತಗಳು |
| 2008 | ಕೆ. ವೆಂಕಟೇಶ್ (ಕಾಂಗ್ರೆಸ್) | 38,453 | ಕೆ. ಮಹದೇವ್ (ಜೆಡಿಎಸ್) | 37,574 |
| 2013 | ಕೆ. ವೆಂಕಟೇಶ್ (ಕಾಂಗ್ರೆಸ್) | 62,045 | ಕೆ. ಮಹದೇವ್ (ಜೆಡಿಎಸ್) | 59,957 |
| 2018 | ಕೆ. ಮಹದೇವ್ (ಜೆಡಿಎಸ್) | 77,770 | ಕೆ. ವೆಂಕಟೇಶ್ (ಕಾಂಗ್ರೆಸ್) | 70,277 |
ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಪ್ರಸ್ತುತ ರಾಜಕೀಯ
ಸಾಲು ಸಾಲು ಗೆಲುವಿನಿಂದ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರನಂತೆ ಮೆರೆಯುತ್ತಿದ್ದ ಕೆ.ವೆಂಕಟೇಶ್ ಅವರಿಗೆ ಕಳೆದ ಚುನಾವಣೆ ಸೋಲಿನ ಕಹಿ ತೋರಿಸಿದ್ದು, ಈ ಬಾರಿ ಶತಾಯಗತಾಯ ಗೆಲುವು ಸಾಧಿಸಲೇ ಬೇಕು ಎನ್ನುವ ಹಠಕ್ಕೆ ಬಿದ್ದಿದ್ದಾರೆ. ಹೀಗಾಗಿ ಕ್ಷೇತ್ರದಲ್ಲಿ ಎರಡೂ ಪಕ್ಷಗಳು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಆರಂಭಿಸಿದ್ದು, ಅಭಿವೃದ್ಧಿ ಮಂತ್ರ ಜಪಿಸುತ್ತಿದೆ. ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಿದ್ದು, ಕಾಂಗ್ರೆಸ್ನಿಂದ ಕೆ.ವೆಂಕಟೇಶ್, ಜೆಡಿಎಸ್ನಿಂದ ಕೆ.ಮಹದೇವ್ ಹಾಗೂ ಆಮ್ ಆದ್ಮಿ ಪಕ್ಷದಿಂದ ರಾಜಶೇಖರ್ ದೊಡ್ಡಣ್ಣ ಈ ಬಾರಿಯ ಚುನಾವಣಾ ಕಣದಲ್ಲಿದ್ದಾರೆ.
ಇನ್ನು ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಖಾತೆ ತೆರೆಯಲು ಬಿಜೆಪಿ ಕೂಡ ಚುನಾವಣೆ ತಯಾರಿ ಆರಂಭಿಸಿದೆ. ಕಳೆದ ಚುನಾವಣೆಯಲ್ಲಿ ಬೆಂಗಳೂರು ಮೂಲದ ಮಂಜುನಾಥ್ ಸ್ಪರ್ಧಿಸಿ ಸೋಲುಕಂಡಿದ್ದರು. ಈ ಬಾರಿ ಸಿ.ಎಚ್ ವಿಜಯಶಂಕರ್, ಕೌದಹಳ್ಳಿ ಸೋಮಶೇಖರ್, ಬಿಜೆಪಿ ತಾಲೂಕು ಅಧ್ಯಕ್ಷ ಆರ್.ಟಿ ಸತೀಶ್ ಮಾಜಿ ಸೈನಿಕ ವಿಕ್ರಂಗೌಡ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಪಿರಿಯಾಪಟ್ಟಣ ವಿಧಾನಸಭಾ ಚುನಾವಣಾ 2018ರ ಫಲಿತಾಂಶ
2018 ಚುನಾವಣೆಯಲ್ಲಿ ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಕೆ.ಮಹದೇವ್ ಸ್ಪರ್ಧಿಸಿದ್ದು, 77,770 ಮತಗಳನ್ನು ಪಡೆದಿದ್ದರು. ಇನ್ನು ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದ ಕೆ.ಮಹದೇವ್ 70,277 ಮತಗಳನ್ನು ಪಡೆದು 7,493 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications