1,750 ಮದ್ಯದಂಗಡಿಗಳಿಗೆ ಲೈಸನ್ಸ್, 17 ಸಾವಿರ ಕೋಟಿ ರು ನಿರೀಕ್ಷೆ!
ಬೆಂಗಳೂರು, ಡಿ. 13: ರಾಜ್ಯದಲ್ಲಿ ಚಿಲ್ಲರೆ ಮದ್ಯ ಮಾರಾಟದ ಅಂಗಡಿಗಳನ್ನು ತೆರೆಯಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಸುಮಾರು 23 ವರ್ಷಗಳ ಬಳಿಕೆ ಹೊಸ ಮದ್ಯದಂಗಡಿಗಳಿಗೆ ಲೈಸನ್ಸ್ ಸಿಗಲಿದೆ.1,750 ಮದ್ಯದಂಗಡಿಗಳಿಗೆ ಲೈಸನ್ಸ್ ನೀಡಿ, 17 ಸಾವಿರ ಕೋಟಿ ರು ನಿರೀಕ್ಷೆ ಇಟ್ಟುಕೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಮನೋಹರ ತಹಶೀಲ್ದಾರ್ ಹೇಳಿದ್ದಾರೆ.
ಬಲಿಜ ಸಂಘದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ವಧು-ವರರ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. [ಕೇರಳ ಮಾದರಿಯಲ್ಲಿ ಕರ್ನಾಟಕದಲ್ಲೂ ಮದ್ಯ ನಿಷೇಧಿಸಿ!]
ರಾಜ್ಯದಲ್ಲಿ 1992ರಿಂದ ಈವರೆಗೂ ಸಿಎಲ್-2 (ರೀಟೈಲ್) ಮತ್ತು ಸಿಎಲ್-9 (ಹೋಲ್ ಸೇಲ್) ಮದ್ಯದಂಗಡಿಗಳಿಗೆ ಪರವಾನಿಗೆ ನೀಡಿಲ್ಲ. ಬದಲಿಗೆ ಬಾರ್ ಅಂಡ್ ರೆಸ್ಟೋರೆಂಟ್ (ಸಿಎಲ್-7)ಗಳಿಗೆ ಮಾತ್ರ ಪರವಾನಿಗೆ ನೀಡಲಾಗುತ್ತಿದೆ. ಈವರೆಗೂ 15 ಸಾವಿರ ಮದ್ಯದಂಗಡಿಗಳಿಗೆ ಪರವಾನಿಗೆ ನೀಡಲಾಗಿದೆ ಎಂದು ವಿವರಿಸಿದರು.

2011ರ ಜನಗಣತಿಯನ್ವಯ ಇನ್ನೂ 1,750 ಮದ್ಯದಂಗಡಿಗಳಿಗೆ ಪರವಾನಿಗೆ ನೀಡಬೇಕಿದೆ. ಮದ್ಯದಂಗಡಿಗಳಿಗೆ ಹೊಸದಾಗಿ ಪರವಾನಿಗೆ ನೀಡುವುದು ಅನಿವಾರ್ಯವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.[ಮದ್ಯಪ್ರಿಯರಿಗೆ ಕಿಕ್ ಕೊಡುವ ಸುದ್ದಿ : ಓಲ್ಡ್ ಮಾಂಕ್ ಅಲೈವ್!]
ಸಾರಾಯಿ ಮುಕ್ತ ರಾಜ್ಯ: ರಾಜ್ಯದಲ್ಲಿ ಸಾರಾಯಿ ಮತ್ತು ಹೆಂಡ ಮರು ಜಾರಿಗೊಳಿಸುವ ಆಲೋಚನೆ ಇಲ್ಲ. ಆದರೆ, ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರದ 'ನೀರಾ' ಮಾರಾಟವನ್ನು ಅಧಿಕೃತಗೊಳಿಸುವ ಚಿಂತನೆ ಇದೆ ಹೊಸ ಮದ್ಯದಂಗಡಿ ಪರವಾನಿಗೆ ವೇಳೆ ಪರಿಶಿಷ್ಟರಿಗೆ ಆದ್ಯತೆ ನೀಡಲಾಗುವುದು ಎಂದರು.
ರಾಜ್ಯದಲ್ಲಿ ಸಾರಾಯಿ ಮತ್ತು ಹೆಂಡ ಮರು ಜಾರಿಗೊಳಿಸುವ ಆಲೋಚನೆ ಇಲ್ಲ. ಆದರೆ, ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರದ 'ನೀರಾ' ಮಾರಾಟವನ್ನು ಅಧಿಕೃತಗೊಳಿಸುವ ಚಿಂತನೆ ಇದೆ ಎಂದು ಅವರು ಸ್ಪಷ್ಟಣೆ ನೀಡಿದರು. [ಬಿಹಾರದಲ್ಲಿ ಮದ್ಯ ಮಾರಾಟಕ್ಕೆ ನಿಷೇಧ]
17 ಸಾವಿರ ಕೋಟಿ ರೂ. ಸಂಗ್ರಹ ಗುರಿ: ಕಳೆದ ವರ್ಷ ಅಬಕಾರಿ ಇಲಾಖೆ 15 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹಿಸುವ ಗುರಿ ಹೊಂದಿತ್ತು. ಪ್ರಸಕ್ತ ವರ್ಷ 17 ಸಾವಿರ ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹಿಸಲು ಉದ್ದೇಶಿಸಲಾಗಿದೆ
ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (ಎಂಎಸ್ಐಎಲ್) ನಿಂದ 456 ಸಗಟು ಮಾರಾಟ ಮಳಿಗೆಗಳನ್ನು ಸ್ಥಾಪಿಸಲು ಮಂಜೂರಾತಿ ನೀಡಿದ್ದು, ಆ ಪೈಕಿ ಈವರೆಗೂ 407 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಅಕ್ರಮವಾಗಿ ಚಿಲ್ಲರೆ ಅಂಗಡಿಗಳಲ್ಲಿ ಮದ್ಯ ಮಾರಾಟ ತಡೆಯಲು ಅಬಕಾರಿ ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ ಎಂದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications