Gruhalakshmi Scheme: ಇನ್ಮುಂದೆ ಯಾರಿಗೆಲ್ಲ ಗೃಹಲಕ್ಷ್ಮಿ ಹಣ ಸಿಗಲ್ಲ ಗೊತ್ತಾ?-ಇಲ್ಲಿದೆ ಮಾಹಿತಿ
Gruhalakshmi Scheme: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಂತಹ ಪ್ರಮುಖ 5 ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆಯ ಯಜಮಾನಿಗೆ ಖಾತೆಗೆ 2,000 ರೂಪಾಯಿ ಜಮೆ ಮಾಡುತ್ತಾ ಬಂದಿದೆ. ಆದರೆ, ಇದೀಗ 1.78 ಲಕ್ಷ ಮಹಿಳೆಯರಿಗೆ ಹಣ ಪಾವತಿಗೆ ತಡೆ ಹಾಕಲಾಗಿದೆ ಎಂದು ತಿಳಿದುಬಂದಿದೆ. ಹಾಗಾದರೆ ಕಾರಣ ಏನೆಂದು ಇಲ್ಲಿ ತಿಳಿಯಿರಿ.
ಆದಾಯ ತೆರಿಗೆ ಪಾವತಿದಾರರಾಗಿರುವ ಕಾರಣಕ್ಕೆ 1.78 ಲಕ್ಷ ಗೃಹಿಣಿಯರಿಗೆ ಯೋಜನೆಯ ಹಣ ಪಾವತಿಗೆ ತಡೆ ಹಾಕಲಾಗಿದೆ.
ಆದಾಯ ತೆರಿಗೆ ಪಾವತಿಸುತ್ತಿದ್ದರೂ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿ 2,000 ರೂಪಾಯಿ ಪಡೆಯುತ್ತಿದ್ದಾರೆ. ಅಂತಹವರಿಗೆ ಹಣ ಪಾವತಿ ನಿಲ್ಲಿಸಿ ದಾಖಲೆ ಪರಿಶೀಲನೆ ಮಾಡಲು ಚಾಲನೆ ನೀಡಲಾಗಿದೆ. ಇ-ಗವರ್ನೆನ್ಸ್ ಇಲಾಖೆಗೆ ತನಿಖೆ ನಡೆಸಲು ಮಹಿಳಾ ಮತ್ತು ಮಕ್ಕಳ ಇಲಾಖೆ ಕೋರಿದೆ.

ಆದಾಯ ತೆರಿಗೆ ಪಾವತಿದಾರರು ಗೃಹಲಕ್ಷ್ಮಿ ಯೋಜನೆ ಅರ್ಹರಲ್ಲ. ಆದರೂ ಯೋಜನೆಗೆ ನೋಂದಾಯಿಸಿ 2,000 ಹಣ ಪಡೆಯುತ್ತಿದ್ದ ಹಿನ್ನೆಲೆ 1.78 ಲಕ್ಷ ಮಹಿಳೆಯರ ಹಣ ಪಾವತಿಯನ್ನು ನಿಲ್ಲಿಸಿ ದಾಖಲೆ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಹಾಗೆಯೇ ಮತ್ತೊಂದೆಡೆ ನಕಲಿ ದಾಖಲೆಗಳನ್ನು ಬಿಪಿಎಲ್ ಕಾರ್ಡ್ಗಳನ್ನು ಪಡೆದು ಅನ್ನಭಾಗ್ಯ ಯೋಜನೆಯಡಿ ಪಡಿತರ ಪಡೆಯುವವರ ವಿರುದ್ಧವೂ ಸರ್ಕಾರ ಸಮರ ಸಾರಲು ಮುಂದಾಗಿದೆ. ಈಗಾಗಲೇ ಸರ್ಕಾರ ಜಿಲ್ಲಾವಾರು ಪರಿಶೀಲನೆ ನಡೆಸಿ ಅನರ್ಹರ ಪಡಿತರ ಚೀಟಿಗಳನ್ನು ರದ್ದು ಮಾಡುತ್ತಾ ಬರುತ್ತಿದೆ.
ನಕಲಿ ಕಾರ್ಡ್ಗಳ ರದ್ದು: ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ಗಳನ್ನು ಪಡೆದಿರುವವರನ್ನು ಜಲಾಡಲು ಸರ್ಕಾರ ಮುಂದಾಗಿದೆ. ಇನ್ನು ಇದೀಗ ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ ಎಷ್ಟು ನಕಲಿ ಬಿಎಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲಾಗಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಅಂಕಿಅಂಶಗಳ ಸಮೇತ ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯದಲ್ಲಿ ಅರ್ಹರಿಗಿಂತ ಅನರ್ಹರೇ ಹೆಚ್ಚಾಗಿ ನಕಲಿ ದಾಖಲೆ ನೀಡಿ ಪಡಿತರ ಪಡೆಯುತ್ತಿದ್ದಾರೆ ಎನ್ನುವ ಆರೋಪಗಳು ಮೊದಲಿನಿಂದಲೂ ಕೇಳಿಬಂದಿದ್ದವು. ಆದರೆ ಯಾವುದೇ ಸರ್ಕಾರವ ಬಂದರೂ ಈ ಬಗ್ಗೆ ತಲೆ ಕೆಡಿಸಿಕೊಂಡಿರಲಿಲ್ಲ. ಇದರಿಂದ ಬಡವರಿಗೆ ತುಂಬಾ ಅನ್ಯಾಯ ಆಗುತ್ತಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿರುವ ನಕಲಿ ಬಿಪಿಎಲ್ ಕಾರ್ಡ್ ರದ್ದು ನಿರ್ಧಾರದಿಂದ ಬಡವರಿಗೆ ತುಂಬಾ ಅನುಕೂಲ ಆದಂತಾಗಿದೆ.
ಇನ್ನು ಚಿಕ್ಕಮಗಳೂರಿನಲ್ಲಿ 5,125 ನಕಲಿ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ. ರದ್ದಾಗ ಕಾರ್ಡ್ಗಳ ಪಟ್ಟಿಯನ್ನು ವೆಬ್ ಸೈಟ್ನಲ್ಲಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಂದು ಕಾರ್ಡ್ ನಂಬರ್, ಅವುಗಳ ವಾರಸುದಾರರು, ನ್ಯಾಯಬೆಲೆ ಅಂಗಡಿಯ ಕೋಡ್ ಹಾಗೂ ಕಾರ್ಡ್ದಾರರ ವಿಳಾಸವನ್ನು ಉಲ್ಲೇಖ ಮಾಡಿ ಪಟ್ಟಿಯನ್ನು ಬಿಡುಗಡೆಗೊಳಿದಲಾಗಿದೆ ಎಂದು ತಿಳಿಸಿದೆ.
ನಕಲಿ ದಾಖಲೆ ನೀಡಿ ಬಿಪಿಎಲ್ ಕಗಳನ್ನು ಪಡೆದಿರುವವರ ಪತ್ತೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಬಿಪಿಎಲ್ ಕಾರ್ಡುಗಳಿಗಾಗಿ ಹೊಸ ಮಾನದಂಡ ವಿಧಿಸಿ ಅವುಗಳನ್ನು ಪ್ರಕಟಿಸಿದೆ. ಜೊತೆಗೆ ನಕಲಿ ಬಿಪಿಎಲ್ ಕಾರ್ಡುದಾರರ ಪಟ್ಟಿಯನ್ನೂ ಬಿಡುಗಡೆಗೊಳಿಸಿದ್ದು, ಸದ್ಯ ಇದೀಗ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಕಲಿ ಬಿಪಿಎಲ್ ಕಾರ್ಡು ಹೊಂದಿರುವವರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಅಲ್ಲದೆ, ನಕಲಿ ನಕಲಿ ಬಿಪಿಎಲ್ ಕಾರ್ಡ್ಗಳನ್ನು ರದ್ದುಗೊಳಿಸಿರುವುದಾಗಿ ಸರ್ಕಾರ ಮಾಹಿತಿ ನೀಡಿದೆ.
ಬಿಪಿಎಲ್ ಕಾರ್ಡ್ಗಳಿಗೆ ಈಗಾಗಲೇ ಸರ್ಕಾರ ಹಲವು ನಿಬಂಧನೆಗಳನ್ನು ಅಳವಡಿಕೆ ಮಾಡಿತ್ತು. ಆ ನಿಬಂಧನೆಗಳನ್ನು ಪರಿಷ್ಕರಿಸಿ, ಕೆಲವು ಹೊಸ ನಿಯಮಗಳನ್ನು ಅಳನಡಿಕೆ ಜಾರಿ ತಂದಿದ್ದು, ಅದರನ್ವಯ ಅನರ್ಹರು ಬಿಪಿಎಲ್ ಕಾರ್ಡ್ಗಳನ್ನು ಬಳಕೆ ಮಾಡದಂತೆ ರದ್ದುಪಡಿಸಲು ಸರ್ಕಾರ ಮುಂದಾಗಿತ್ತು. ಅದರಂತೆಯೇ ಇದೀಗ ಹೊಸ, ಪರಿಷ್ಕೃತ ನಿಬಂಧನೆಗಳನ್ನು ಬಿಡುಗಡೆ ಮಾಡಿದೆ.
ಪರಿಷ್ಕೃತ ನಿಬಂಧನೆಗಳಲ್ಲಿ ಇರುವಂತೆ, 1.20 ಲಕ್ಷಕ್ಕೂ ಹೆಚ್ಚು ಆದಾಯ ಹೊಂದಿರುವವರಿಗೆ ಇನ್ಮುಂದೆ ಬಿಪಿಎಲ್ ಕಾರ್ಡ್ ನೀಡಬಾರದು ಎಂದು ಸರ್ಕಾರ ಸೂಚನೆ ನೀಡಿದೆ. ಜೊತೆಗೆ ಹೆಚ್ಚು ವಾರ್ಷಿಕ ಆದಾಯ ಹೊಂದಿರುವವರ ಬಿಪಿಎಲ್ ಕಾರ್ಡ್ಗಳನ್ನು ಹೊಂದಿದ್ದರೆ, ಅವುಗಳನ್ನು ರದ್ದು ಮಾಡಲು ನಿರ್ಧರಿಸಿದೆ.
ಇನ್ನು ಅನರ್ಹರು ಬಿಪಿಎಲ್ ಕಾರ್ಡ್ಗಳ ಮೂಲಕ ಅನ್ನಭಾಗ್ಯ ಗ್ಯಾರಂಟಿ ಯೋಜನೆಯಡಿ ಅಕ್ಕಿಯನ್ನು ಪಡೆದುಕೊಂಡಿದ್ದವರಿಗೆ ದಂಡ ಹಾಕಲು ನಿರ್ಧರಿಸಿದೆ. ಅಕ್ಕಿಯನ್ನು ಪಡೆದ ದಿನದಿಂದ ಒಂದು ಕೆಜಿ ಅಕ್ಕಿಗೆ 33 ರೂಪಾಯಿಗಳಂತೆ ದಂಡ ವಿಧಿಸಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.












Click it and Unblock the Notifications