ಉಡುಪಿಯಲ್ಲಿ 1,894 ಮಕ್ಕಳು ಭಾಗ್ಯಲಕ್ಷ್ಮೀಯರಲ್ಲ
ಉಡುಪಿ, ಜೂನ್ 2 : ಉಡುಪಿಯಲ್ಲಿ 1,894 ಮಕ್ಕಳು ಸರ್ಕಾರದ ಭಾಗ್ಯಲಕ್ಮ್ಮೀ ಯೋಜನೆಯಿಂದ ವಂಚಿತರಾಗುತ್ತಿದ್ದಾರೆ. ಸರ್ಕಾರ ನಿಯಮವನ್ನು ಮೀರಿ ಭಾಗ್ಯಲಕ್ಷ್ಮೀ ಬಾಂಡ್ ಪಡೆದವರು ಬಾಂಡ್ ವಾಪಸ್ ನೀಡುವಂತೆ ಆಡಿಟರ್ ಜನರಲ್ ಆದೇಶ ನೀಡಿದ್ದಾರೆ. ಬಡ ಕುಟುಂಬದವರಿಗೆ ಇದು ಹೊಸ ಸಂಕಷ್ಟ ತಂದೊಡ್ಡಿದೆ.
ಬಡ ಕುಟುಂಬದಲ್ಲಿ ಜನಿಸುವ ಹೆಣ್ಣು ಮಕ್ಕಳ ವಿದ್ಯಾಭ್ಯಾಸ, ವಿವಾಹಕ್ಕೆ ಆರ್ಥಿಕ ಸಹಾಯ ನೀಡುವ ಮಹತ್ವದ ಗುರಿಯೊಂದಿಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಾಗ ಭಾಗ್ಯಲಕ್ಮೀ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ, ಉಡುಪಿಯ ಜಿಲ್ಲೆಯಲ್ಲಿ ಹಲವಾರು ಗೊಂದಲಗಳಿಂದಾಗಿ 1,864 ಮಕ್ಕಳು ಬಾಂಡ್ ನಿಂದ ವಂಚಿತರಾಗುತ್ತಿದ್ದಾರೆ.

ಮೊದಲು 'ಭಾಗ್ಯಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವಾಗ ಫಲಾನುಭವಿಯಾಗುವ ಮಗುವಿನ ತಂದೆಯ ಭಾವಚಿತ್ರ ಕೂಡ ಪಡಿತರ ಚೀಟಿಯಲ್ಲಿ ಇರಬೇಕು ಎಂಬ ನಿಯಮವನ್ನು ಸರ್ಕಾರ ಜಾರಿಗೆ ತಂದಿತ್ತು. ನಂತರ 2006ರಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ನಲ್ಲಿ ಈ ಬಗ್ಗೆ ಚರ್ಚೆ ನಡೆದು, ಪಡಿತರ ಚೀಟಿಯಲ್ಲಿ ತಾಯಿಯ ಹೆಸರು ಮತ್ತು ಭಾವಚಿತ್ರವಿದ್ದರೂ ಭಾಗ್ಯಲಕ್ಷ್ಮೀ ಬಾಂಡ್ ನೀಡಬೇಕು ಎಂದು ನಿರ್ಣಯ ಕೈಗೊಳ್ಳಲಾಗಿತ್ತು. [ಭಾಗ್ಯಲಕ್ಷ್ಮೀ ಯೋಜನೆಗೆ ವಿವಾಹ ನೋಂದಣಿ ಕಡ್ಡಾಯ]
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈ ನಿಯಮದ ಅನ್ವಯವೇ ಭಾಗ್ಯಲಕ್ಷ್ಮೀ ಬಾಂಡ್ ಗಳನ್ನು ಒದಗಿಸಿತ್ತು. ಆದರೆ, ಸದ್ಯ ನವದೆಹಲಿಯ ಆಡಿಟರ್ ಜನರಲ್ ತಂದೆಯ ಭಾವಚಿತ್ರವಿಲ್ಲದ ಬಾಂಡ್ ಗಳನ್ನು ಹಿಂಪಡೆಯುವಂತೆ ಆದೇಶ ನೀಡಿದ್ದಾರೆ. ಆದ್ದರಿಂದ ಜಿಲ್ಲೆಯ 1,894 ಮಕ್ಕಳು ಭಾಗ್ಯಲಕ್ಷ್ಮೀ ಯೋಜನೆಯಿಂದ ವಂಚಿತರಾಗುತ್ತಿದ್ದಾರೆ.
ಉಡುಪಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರಿಗೆ ಆದೇಶ ನೀಡಿರುವ ಆಡಿಟರ್ ಜನರಲ್, ಬಾಂಡ್ ವಾಪಸ್ ಪಡೆದುಕೊಳ್ಳಲು ಸೂಚನೆ ನೀಡಿದ್ದಾರೆ. ಅದರಂತೆ ಕುಂದಾಪುರ ತಾಲೂಕಿನ 10, ಕಾರ್ಕಳದ 88, ಬ್ರಹ್ಮಾವರದ 1,226 ಮತ್ತು ಉಡುಪಿ ತಾಲೂಕಿನ 574 ಮಂದಿಯ ಬಾಂಡ್ ಹಿಂದಿರುಗಿಸಬೇಕಾಗಿದೆ.
ಮೇ 30ರಂದು ನಡೆದ ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಬಾಂಡ್ ವಾಪಸ್ ಕುರಿತು ಚರ್ಚೆ ನಡೆಯಿತಾದರೂ ಯಾವ ಸದಸ್ಯರು ಈ ಕುರಿತು ಹೆಚ್ಚಿನ ಚರ್ಚೆ ನಡೆಸಲಿಲ್ಲ. ಆದರೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಉಪೇಂದ್ರ ನಾಯಕ್ ಈ ಬಗ್ಗೆ ಸರ್ಕಾರಕ್ಕೆ ಮತ್ತೊಮ್ಮೆ ಮನವಿ ಮಾಡಿ, 1,894 ಬಾಂಡ್ ಗಳನ್ನು ಪುನರ್ ಪರಿಶೀಲನೆ ಮಾಡುವಂತೆ ಕೋರಲು ತೀರ್ಮಾನಿಸಿದ್ದಾರೆ. ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ? ಎಂದು ಕಾದು ನೋಡಬೇಕು.
-
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Ugadi 2026: ಹಬ್ಬದ ಕಳೆ ಹೆಚ್ಚಿಸುವ ಸುಂದರ ರಂಗೋಲಿಗಳು; ಸರಳ, ಚುಕ್ಕಿ ಹಾಗೂ ಬಣ್ಣದ ರಂಗೋಲಿ ಐಡಿಯಾ ಇಲ್ಲಿದೆ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral












Click it and Unblock the Notifications