ʼಸರ್ಕಾರಿ ಜಾಗದ ಮನೆ ಕುಸಿದರೂ 1 ಲಕ್ಷ ರು. ಪರಿಹಾರʼ: ಶೀಘ್ರದಲ್ಲೇ ಈ ಕುರಿತು ಆದೇಶ
ಚಿಕ್ಕಮಗಳೂರು, ಜುಲೈ 29: ಡೀಮ್ಡ್ ಅರಣ್ಯ ಸೇರಿದಂತೆ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿದ್ದ ಮನೆಗಳು ಮಳೆಯಿಂದ ಕುಸಿದು ಬಿದ್ದರೂ 1 ಲಕ್ಷ ರು. ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದ್ದು, ಇನ್ನೆರಡು ದಿನಗಳಲ್ಲಿ ಆದೇಶ ಹೊರಡಿಸಲಾಗುತ್ತದೆ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಡೀಮ್ಡ್ ಅರಣ್ಯ ಸೇರಿದಂತೆ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿದ್ದ ಮನೆಗಳು ಮಳೆಯಿಂದ ಕುಸಿದು ಬಿದ್ದರೂ 1 ಲಕ್ಷ ರು. ಪರಿಹಾರ ನೀಡುವ ಬಗ್ಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ ಪರಿಹಾರ ವಿತರಿಸಲಾಗುವುದು ಎಂದು ಹೇಳಿದರು.

ಪ್ರಸ್ತುತ ಮಳೆಯಿಂದ ಕುಸಿದ ಮನೆಗಳಿಗೆ ತಕ್ಷಣದ ಪರಿಹಾರವಾಗಿ 1.20 ಲಕ್ಷ ರು. ನೀಡಲಾಗುತ್ತಿದೆ. ಇದರ ಜತೆಗೆ ಇನ್ನೂ 3.80 ಲಕ್ಷ ರೂ. ಪರಿಹಾರ ಒದಗಿಸಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಲಾಗುವುದು ಎಂದು ತಿಳಿಸಿದರು.
ಮಲೆನಾಡು, ಕರಾವಳಿಗೆ ಹೆಚ್ಚಿನ ಗ್ಯಾಂಗ್ ಮೆನ್
ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಮಳೆಯಿಂದ ವಿದ್ಯುತ್ ಮರ ಬಿದ್ದು ವಿದ್ಯುತ್ ತಂತಿಗಳು,ಕಂಬಗಳು, ಟ್ರಾನ್ಸ್ ಫಾರ್ಮರ್ ಗಳು ಹಾನಿಗೊಳಗಗುತ್ತಿವೆ. ಈ ಹಿನ್ನೆಲೆಯಲ್ಲಿ ಈ ಭಾಗಕ್ಕೆ ಹೆಚ್ಚಿನ ಗ್ಯಾಂಗ್ ಮೆನ್ ಗಳನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಗೆ 503 ಗ್ಯಾಂಗ್ ಮೆನ್ ಹುದ್ದೆಗಳು ಮಂಜೂರಾಗಿದ್ದರೂ ಹೆಚ್ಚುವರಿಯಾಗಿ 210 ಗ್ಯಾಂಗ್ ಮೆನ್ ಗಳನ್ನು ಒದಗಿಸಲಾಗಿದೆ. 2,000 ಲೈನ್ ಮೆನ್ ಗಳ ನೇಮಕ ವೇಳೆಯೂ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಈ ಬಾರಿ ಭಾರೀ ಮಳೆಯಾಗಿದ್ದರಿಂದ ಸಮಸ್ಯೆ ಸ್ವಲ್ಪ ಹೆಚ್ಚಾಗಿದೆ. ಭಾರೀ ಮಳೆಯ ಮುನ್ಸೂಚನೆ ಇದ್ದುದರಿಂಂದ ಒಂದು ತಿಂಗಳ ಹಿಂದೆಯೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಲಾಗಿತ್ತು. ಹೀಗಾಗಿ ಸಮಸ್ಯೆ ಎದುರಾದ ತಕ್ಷಣ ಸ್ಪಂದಿಸಲು ಸಾಧ್ಯವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯಿಂದ ಗುಡ್ಡ ಕುಸಿತ, ರಸ್ತೆಗಳ ಹಾನಿ ಕುರಿತಂತೆ ಜಿಲ್ಲಾಧಿಕಾರಿಗಳು ವರದಿ ಸಿದ್ಧಪಡಿಸುತ್ತಿದ್ದಾರೆ. ತುರ್ತು ಕೆಲಸಗಳನ್ನು ಇರುವ ಅನುದಾನದಲ್ಲಿ ಕೈಗೊಳ್ಳುವಂತೆ ಸೂಚಿಸಲಾಗಿದೆ. ಉಳಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಾಕಿ ಇರುವ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Government Employees: ಸರ್ಕಾರಿ ನೌಕರರ ವರ್ಗಾವಣೆ ಕುರಿತು ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications