ಕೃಷಿ ತಂತ್ರಜ್ಞಾನಗಳ ಬಗ್ಗೆ 10 ಸಾವಿರ ರೈತರಿಗೆ ತರಬೇತಿ: ಸಚಿವ ಕೃಷ್ಣಬೈರೇಗೌಡ
ಬೆಂಗಳೂರು, ಜುಲೈ 14: ಕೃಷಿ ತಂತ್ರಜ್ಞಾನದ ಬಗ್ಗೆ ಪ್ರಸಕ್ತ ವರ್ಷ 10,300 ರೈತರಿಗೆ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ಅವರು ಸದನದಲ್ಲಿ ತಿಳಿಸಿದ್ದಾರೆ.
ವಿಧಾನ ಪರಿಷತ್ತಿನಲ್ಲಿ ಸದಸ್ಯ ಬಸನಗೌಡ ಆರ್. ಪಾಟೀಲ್ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಕೃಷಿ ಸಚಿವ ಕೃಷ್ಣ ಬೈರೇಗೌಡ ಉತ್ತರಿಸಿದರು.
ನೂತನ ಕೃಷಿ ತಂತ್ರಜ್ಞಾನಗಳ ಬಗ್ಗೆ ಕೃಷಿ ಇಲಾಖೆಯಿಂದ ತರಬೇತಿ, ಪ್ರವಾಸ, ಕೃಷಿ ಅಭಿಯಾನ, ಪ್ರಾತ್ಯಕ್ಷಿಕೆಗಳು, ಕೃಷಿ ಮೇಳ ಮುಖಾಂತರ ರೈತರಿಗೆ ಮಾಹಿತಿ ತಲುಪಿಸಲಾಗುತ್ತದೆ. ಭೂ ಸಮೃದ್ಧಿ ಯೋಜನೆಯಡಿ ಕಳೆದ ಮೂರು ವರ್ಷ ಗಳಲ್ಲಿ 7,441 ರೈತರಿಗೆ ತರಬೇತಿ ನೀಡಲಾಗಿದೆ. ಜಿಲ್ಲಾ ಕೃಷಿ ತರಬೇತಿ ಕೇಂದ್ರಗಳು ಮತ್ತು ಕೃಷಿ ವಿಜ್ಞಾನ ಕೇಂದ್ರಗಳಿಂದ ಈ ವರ್ಷ 12,810 ರೈತ/ರೈತ ಮಹಿಳೆಯರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.
Promoting mechanisation in agri. Paddy transplanter campaign, Udupi, costal K'taka. Cutting cultivation costs by 50% pic.twitter.com/aL4Cb0JH3I
— Krishna Byre Gowda (@krishnabgowda) July 10, 2016
ಕೃಷಿ ಯಂತ್ರೋಪಕರಣಗಳಿಗೆ 1,66,922 ಹಾಗೂ ಟಾರ್ಪಲಿನ್ಸ್ಗಳಿಗೆ 3,73,986 ಮತ್ತು ಕೃಷಿ ಘಟಕಗಳಿಗೆ 4,052 ರೈತರಿಂದ ಅರ್ಜಿ ಸಲ್ಲಿಕೆ ಯಾಗಿವೆ. ಅನುದಾನ ಲಭ್ಯತೆ ಆಧರಿಸಿ ಉಪಕರಣಗಳನ್ನು ಪೂರೈಕೆ ಮಾಡಲಾಗುವುದು ಎಂದಿದ್ದಾರೆ.
Paddy transplanter campaign, Udupi, costal Karnataka pic.twitter.com/Wbxa7soNjV
— Krishna Byre Gowda (@krishnabgowda) July 11, 2016
ಕೃಷಿ ಯಂತ್ರೋಪಕರಣಗಳ ಪೂರೈಕೆಗಾಗಿ 2015-16ನೇ ಸಾಲಿನಲ್ಲಿ 359.60 ರು ಕೋಟಿ ನಿಗದಿ ಮಾಡಲಾಗಿತ್ತು. ಪ್ರಸಕ್ತ ವರ್ಷ ಅದನ್ನು 432.43 ಕೋಟಿ ರು ಗೆ ಹೆಚ್ಚಿಸಲಾಗಿದೆ ಎಂದು ಅವರು ವಿವರಿಸಿದರು.