ಹಳೆಯೂರು ಸಮೀಪ ರೈಲು ಸಂಚರಿಸುವಾಗ ಭೂ ಕುಸಿತ: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

ಚಿಕ್ಕಮಗಳೂರು, ಸೆಪ್ಟೆಂಬರ್.17: ರೈಲು ಸಾಗುವ ವೇಳೆಯಲ್ಲಿಯೇ ರೈಲ್ವೆ ಟ್ರ್ಯಾಕ್ ಅಡಿ ಭೂ ಕುಸಿತ ಸಂಭವಿಸಿದ್ದು, ಕೂದಲೆಳೆಯಲ್ಲಿ ಭಾರಿ ಅನಾಹುತ ತಪ್ಪಿದಂತಾಗಿದೆ. ತರೀಕೆರೆ ಸಮೀಪದ ಹಳೆಯೂರು ಸಮೀಪ ಭಾನುವಾರ(ಸೆ.16)ಸಂಜೆ ಈ ಘಟನೆ ಸಂಭವಿಸಿದೆ.

ರೈಲು ಸಂಚರಿಸುವ ವೇಳೆಯೇ ಸುಮಾರು ಹತ್ತು ಅಡಿ ಭೂಮಿ ಕುಸಿದಿರುವುದು ಬೆಳಕಿಗೆ ಬಂದಿದೆ. ಭೂ ಕುಸಿತ ಉಂಟಾದ ಪರಿಣಾಮ ಕೆಲಕಾಲ ಪ್ರಯಾಣಿಕರು ಹಾಗೂ ಸಾರ್ವಜನಿಕರು ಆತಂಕಗೊಂಡಿದ್ದರು.

ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ರೈಲು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ತಿಂಗಳು ಎನ್.ಆರ್.ಪುರ ತಾಲೂಕಿನ ಖಾಂಡ್ಯ ಬಳಿಯ ಬಿದರೆ ಗ್ರಾಮದಲ್ಲಿ ಭೂ ಕುಸಿತ ಉಂಟಾಗಿತ್ತು.

10 feet of land has collapse during the train is moving.

ಕಳೆದ ತಿಂಗಳು ಮಳೆಯ ನಂತರ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಭೂ ಕುಸಿತ ಉಂಟಾಗುತ್ತಲೇ ಇತ್ತು. ಇದರಿಂದಾಗಿ ಜನ ಯಾವಾಗಾ ಏನಾಗುತ್ತೋ ಅನ್ನೋ ಭಯದ ವಾತಾವರಣದಲ್ಲಿ ಜೀವನ ಸಾಗಿಸುತ್ತಿದ್ದರು.

ಅಷ್ಟೇ ಅಲ್ಲ, ಬಿದಿರೆ ಗ್ರಾಮದ ಸತೀಶ್ ಭಟ್ ಎಂಬವರ ಕಾಫಿ ತೋಟದಲ್ಲಿ ಏಕಾಏಕಿ ಭೂ ಕುಸಿತವುಂಟಾಗಿದ್ದು, ಸುಮಾರು ಒಂದು ಎಕರೆಯಲ್ಲಿ ಬೆಳೆದಿದ್ದ ಅಡಿಕೆ, ಕಾಫಿ ಹಾಗೂ ಮೆಣಸು ಬೆಳೆಗಳು ಸಂಪೂರ್ಣ ನಾಶವಾಗಿ ಹೋಗಿದ್ದವು.

ಭೂ ಕುಸಿತದಿಂದಾಗಿ ರೈತ ಕಂಗಾಲಾಗಿ ಹೋಗಿದ್ದು, ಮತ್ತೆ ಎಲ್ಲಿ ಭೂ ಕುಸಿತವಾಗುತ್ತದೆಯೋ ಎನ್ನುವ ಭೀತಿ ಎದುರಿಸುತ್ತಿದ್ದರು. ಇಷ್ಟು ದಿನ ಜಿಲ್ಲೆಯಲ್ಲಿ ಗದ್ದೆ , ತೋಟ, ರಸ್ತೆಯಲ್ಲಿ ಬಿರುಕು ಬಿಟ್ಟು ಭೂ ಕುಸಿತ ಉಂಟಾಗುತ್ತಿತ್ತು. ಇದೀಗ ರೈಲ್ವೆ ಟ್ರ್ಯಾಕ್ ಅಡಿ ಕುಸಿತ ಸಂಭವಿಸಿರುವುದು ಆತಂಕಕ್ಕೆ ಎಡೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+