ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರವಾಹ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಸಾವಿರ ಕೋಟಿ ಬಿಡುಗಡೆ

|
Google Oneindia Kannada News

Recommended Video

ಪ್ರವಾಹ ಸಂತ್ರಸ್ತರ ಮನೆ ನಿರ್ಮಾಣಕ್ಕೆ ಸಾವಿರ ಕೋಟಿ ಬಿಡುಗಡೆ | Oneindia Kannada

ಬೆಂಗಳೂರು, ಸೆಪ್ಟೆಂಬರ್ 18: ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಶೀಘ್ರವಾಗಿ ಮನೆ ನಿರ್ಮಿಸಿ ಕೊಡಲು ರಾಜ್ಯ ಸರ್ಕಾರವು ಒಂದು ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿದೆ.

ಸಂತ್ರಸ್ತರ ಮನೆ ನಿರ್ಮಾಣಕ್ಕೆ 5 ಲಕ್ಷ: ಯಡಿಯೂರಪ್ಪ ಭರವಸೆಸಂತ್ರಸ್ತರ ಮನೆ ನಿರ್ಮಾಣಕ್ಕೆ 5 ಲಕ್ಷ: ಯಡಿಯೂರಪ್ಪ ಭರವಸೆ

ಸಾವಿರ ಕೋಟಿ ಬಿಡುಗಡೆ ಮಾಡಲು ಸಂಪುಟ ಸಭೆಯು ತೀರ್ಮಾನ ತೆಗೆದುಕೊಂಡಿದ್ದು, ಈ ಬಗ್ಗೆ ಸಚಿವ ಮಾಧುಸ್ವಾಮಿ ಅವರು ಮಾಧ್ಯಮಗಳಿಗೆ ತಿಳಿಸಿದರು.

ಬಿಎಸ್‌ವೈ ಭೇಟಿಗೆ ಸಮಯ ನೀಡದ ಮೋದಿ, ದೆಹಲಿಗೆ ಪ್ರಯಾಣ ಮುಂದೂಡಿಕೆಬಿಎಸ್‌ವೈ ಭೇಟಿಗೆ ಸಮಯ ನೀಡದ ಮೋದಿ, ದೆಹಲಿಗೆ ಪ್ರಯಾಣ ಮುಂದೂಡಿಕೆ

ಸಂಚಾರಿ ನಿಯಮ ಉಲ್ಲಂಘನೆ ದಂಡ ಪ್ರಮಾಣ ಇಳಿಕೆ ಮಾಡುವುದಕ್ಕೆ ಕಾನೂನು ತೊಡಕಿದ್ದು, ಇಂದು ಸಂಜೆ ಅಥವಾ ನಾಳೆ ಕಾನೂನು ಇಲಾಖೆಯ ಸಲಹೆ ನೀಡುತ್ತೇವೆ, ಆ ನಂತರ ದಂಡ ಇಳಿಕೆ ಬಗ್ಗೆ ಸರ್ಕಾರವು ನಿರ್ಣಯ ತೆಗೆದುಕೊಳ್ಳಲಿದೆ ಎಂದು ಮಾಧುಸ್ವಾಮಿ ಹೇಳಿದರು.

1000 Crore To Build Home To Flood Victims

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಚಿಕ್ಕಬಳ್ಳಾಪುರ, ಮಂಗಳೂರು, ಹಾವೇರಿ, ಕೋಲಾರ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ವಿಜಯಪುರ, ತುಮಕೂರು ಜಿಲ್ಲಾ ಆಸ್ಪತ್ರೆಗಳಿಗೆ ಒಂದು ಕೋಟಿ ರೂಪಾಯಿ ಹಣ ನೀಡಲು ಸಂಪುಟ ಒಪ್ಪಿಗೆ ನೀಡಿದೆ.

ರಾಜ್ಯ ಮತ್ತು ಕೇಂದ್ರ ಎರಡಲ್ಲೂ ಬಿಜೆಪಿ ಸರ್ಕಾರವಿದ್ದರೂ ಬೀದಿ ಪಾಲಾದ ಕನ್ನಡ ಜನರಾಜ್ಯ ಮತ್ತು ಕೇಂದ್ರ ಎರಡಲ್ಲೂ ಬಿಜೆಪಿ ಸರ್ಕಾರವಿದ್ದರೂ ಬೀದಿ ಪಾಲಾದ ಕನ್ನಡ ಜನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸೇವಾ ನಿಯಮಗಳ ಪರಿಷ್ಕರಣೆ ಮಾಡಲು ಸಹ ಸಂಪುಟ ಒಪ್ಪಿದೆ, ಮಹಿಳೆ ಆರೋಗ್ಯ ಸಮಸ್ಯೆ ಪತ್ತೆ ಮತ್ತು ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡುವ ನಿರ್ಧಾರ ಮಾಡಲಾಗಿದೆ. ಜೊತೆಗೆ ವಿಜಯನಗರ ಹಳೆಕಾಲುವೆ ದುರಸ್ತಿ ಮತ್ತು ಅಭಿವೃದ್ಧಿಗೆ ಹಣ ಬಿಡುಗಡೆಗೂ ಸಂಪುಟ ಒಪ್ಪಿದೆ ಎಂದು ಮಾಧುಸ್ವಾಮಿ ಮಾಹಿತಿ ನೀಡಿದರು.

English summary
State Government had cabinet meeting today. And cabinet decide to release 1000 crore rupees to build home to flood victims.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X