Rail Museum: ನಂದಿ ಹಾಲ್ಟ್ ನಿಲ್ದಾಣದಲ್ಲಿ ರೈಲು ಮ್ಯೂಸಿಯಂ, ರೈಲು ಪಾರ್ಕ್ ನಿರ್ಮಾಣ ಆರಂಭ
ಬೆಂಗಳೂರು, ಏಪ್ರಿಲ್. 11: ನಂದಿ ಬೆಟ್ಟ, ಚಿಕ್ಕಬಳ್ಳಾಪುರ ಕಡೆಗೆ ಹೋಗುವ ಪ್ರವಾಸ ಪ್ರಿಯರಿಗೆ ಖುಷಿ ಸಂಗತಿಯೊಂದಿದೆ. 107 ವರ್ಷ ಹಳೆಯದಾದ ಯಲುವಹಳ್ಳಿಯ ನಂದಿ ಹಾಲ್ಟ್ ರೈಲು ನಿಲ್ದಾಣದ ಆವರಣದೊಳಗೆ 7 ಎಕರೆ ವಿಸ್ತೀರ್ಣದಲ್ಲಿ ಬೆಂಗಳೂರು ರೈಲ್ವೆ ವಿಭಾಗದ ಮೊದಲ ರೈಲು ಮ್ಯೂಸಿಯಂ ಮತ್ತು ರೈಲು ಪಾರ್ಕ್ ನಿರ್ಮಾಣ ಪ್ರಾರಂಭವಾಗಿದೆ.
ನಂದಿ ಹಾಲ್ಟ್ ರೈಲು ನಿಲ್ದಾದಿಂದ ಸುಮಾರು 20 ಕಿ.ಮೀ ದೂರದಲ್ಲಿರುವ ನಂದಿ ಬೆಟ್ಟ ಮತ್ತು ಇತ್ತೀಚೆಗೆ ಚಿಕ್ಕಬಲ್ಳಪುರದ ಬಳಿ ಅನಾವರಣಗೊಂಡ ಆದಿಯೋಗಿ ಶಿವನ ಪ್ರತಿಮೆ ಪ್ರಮುಖ ಪ್ರವಾಸಿ ತಾಣಗಳಾಗಿವೆ. ಹೀಗಾಗಿ ಸಂಪ್ರದಾಯ ಮತ್ತು ಆಧುನಿಕತೆಯೊಂದಿಗೆ ಹೆಣೆದುಕೊಂಡಿರುವ ಇಲ್ಲಿನ ಸ್ಥಳ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಬೆಂಗಳೂರು ರೈಲ್ವೆ ವಿಭಾಗದ ಆಡಳಿತದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕಿ ಕುಸುಮಾ ಹರಿಪ್ರಸಾದ್ ಅವರು ಅವರನ್ನು ಉಲ್ಲೇಖಿಸಿರುವ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್, "ಮೊದಲ ಹಂತವನ್ನು 2.38 ಕೋಟಿ ರೂಪಾಯಿ ವೆಚ್ಚದಲ್ಲಿ ಸಿದ್ಧಪಡಿಸಲಾಗುತ್ತಿದೆ. ಈಗಾಗಲೇ ಕಾಮಗಾರಿ ಆರಂಭವಾಗಿದ್ದು, ವರ್ಷಾಂತ್ಯಕ್ಕೆ ಸಾರ್ವಜನಿಕರಿಗೆ ಮುಕ್ತವಾಗುವ ನಿರೀಕ್ಷೆ ಇದೆ. ನೈಋತ್ಯ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಅವರು ಔಟ್ ಆಫ್ ಟರ್ನ್ ಪಾವತಿಯನ್ನು ಬಿಡುಗಡೆ ಮಾಡಲು ಒಪ್ಪಿಕೊಂಡಿದ್ದಾರೆ" ಎಂದು ಮಾಹಿತಿ ನೀಡಿದ್ದಾರೆ.
"ಈಗಾಗಲೇ ಮೈಸೂರು ಮತ್ತು ಹುಬ್ಬಳ್ಳಿ ತಮ್ಮದೇ ಆದ ರೈಲು ವಸ್ತು ಸಂಗ್ರಹಾಲಯಗಳನ್ನು ಹೊಂದಿವೆ. ಆದರೆ, ಇದು ಬೆಂಗಳೂರಿಗೆ ಮೊದಲನೆಯದು. ನಗರ ಮೂಲದ ಬಿಂದು ಏಜೆನ್ಸಿ ಮ್ಯೂಸಿಯಂ ಗುತ್ತಿಗೆಯನ್ನು ಪಡೆದುಕೊಂಡಿದೆ. ಹಳೆಯ ಕೋಚ್ಗಳಿಂದ ರಚಿಸಲಾದ ಮಿನಿ ರೆಸ್ಟೋರೆಂಟ್, ಕಬ್ಬನ್ ಪಾರ್ಕ್ನಲ್ಲಿರುವಂತಹ ಆಟಿಕೆ ರೈಲು, 3D ಆರ್ಟ್ ಗ್ಯಾಲರಿ ಮತ್ತು QR ಸಕ್ರಿಯಗೊಳಿಸಿದ ಚಿತ್ರಗಳ ಪೋಸ್ಟ್ಕಾರ್ಡ್ಗಳು ಇಲ್ಲಿನ ಪ್ರಮುಖ ಆಕರ್ಷಣೆಗಳಾಗಿವೆ" ಎಂದು ಕುಸುಮಾ ಹರಿಪ್ರಸಾದ್ ವಿವರಣೆ ನೀಡಿದ್ದಾರೆ.
ಇವುಗಳೆಲ್ಲವನ್ನು ಹಳೆಯ ಬೆಂಚುಗಳು, ಹಳಿಗಳು, ಕೋಚ್ಗಳು ಮತ್ತು ವಿವಿಧ ನಿಲ್ದಾಣಗಳಿಂದ ಸಂಗ್ರಹಿಸಲಾದ ವಸಾಹತುಶಾಹಿ ಕಾಲದ ಪೀಠೋಪಕರಣಗಳೊಂದಿಗೆ ಜೋಡಿಸಲಾಗಿದೆ. ನಂದಿ ಬೆಟ್ಟದಲ್ಲಿ ಹುಟ್ಟಿ ಚಿಕ್ಕಬಳ್ಳಾಪುರ ಮತ್ತು ಹೊಸಕೋಟೆ ಮೂಲಕ ಹರಿಯುವ ಶುಷ್ಕವಾಗಿರು ದಕ್ಷಿಣ ಪಿನ್ನಾಕಿನಿ ನದಿಯನ್ನು ಪುನರುಜ್ಜೀವನಗೊಳಿಸುವುದು ಈ ಕಾರ್ಯಾಚರಣೆಯ ಪ್ರಮುಖ ಅಂಶವಾಗಿದೆ ಎಂದು ಎಡಿಆರ್ಎಂ ತಿಳಿಸಿದೆ.

ಮುಮದುವರೆದು, "ನಾವು ಈ ಮೊದಲು ಈ ವಸ್ತು ಸಂಗ್ರಹಾಲಯವನ್ನು ಕೆಎಸ್ಆರ್ ( ಕಾಂತ್ರಿವೀರ ಸಂಗೋಳ್ಳಿ ರಾಯಣ್ಣ) ರೈಲು ನಿಲ್ದಾಣದ ಒಳಗೆ ಮಾಡಬೇಕು ಎಂದು ಯೋಜಿಸಿದ್ದೇವು. ಆದರೆ ಸೀಮಿತ ಜಾಗದ ಲಭ್ಯತೆ ಮತ್ತು ದೊಡ್ಡ ವೆಚ್ಚ ಇದಕ್ಕೆ ಕಡಿವಾಣ ಹಾಕಿತು. ಹೀಗಾಗಿ 15 ಎಕರೆ ಭೂಮಿಯನ್ನು ಹೊಂದಿರುವ ನಂದಿ ಹಾಲ್ಟ್ ಸ್ಟೇಷನ್ ಕ್ಯಾಂಪಸ್ ಅನ್ನು ಆಯ್ಕೆ ಮಾಡಲಾಯಿತು. 15 ಎಕರೆಯಲ್ಲಿ ಕೇವಲ ಅರ್ಧದಷ್ಟು ಜಾಗವು ವಸ್ತುಸಂಗ್ರಹಾಲಯಕ್ಕೆ ಬೇಕಾಗುತ್ತದೆ" ಎಂದು ಕುಸುಮಾ ಹರಿಪ್ರಸಾದ್ ಹೇಳಿದ್ದಾರೆ.
ಉಪಯೋಗವಿಲ್ಲ ಎಂದು ಇಡಲಾಗಿದ್ದ ವಸ್ತುಗಳು ರೈಲ್ವೆಗೆ ಹೆಚ್ಚಿನ ಐತಿಹಾಸಿಕ ಮಹತ್ವವನ್ನು ಹೊಂದಿವೆ ಎಂದು ಕುಸುಮಾ ಹರಿಪ್ರಸಾದ್ ತಿಳಿಸಿದ್ದಾರೆ. ಚನ್ನಪಟ್ಟಣ, ಮದ್ದೂರು ಮತ್ತು ಹೆಜ್ಜಾಲದಿಂದ ಹಳೆಯ ಡ್ರೆಸ್ಸಿಂಗ್ ಟೇಬಲ್ ಮತ್ತು ಡೈನಿಂಗ್ ಟೇಬಲ್ ಜೊತೆಗೆ ಸಿಗ್ನಲಿಂಗ್ ವ್ಯವಸ್ಥೆಗಳು ಮತ್ತು ಇತರ ಹಳೆಯ ವಸ್ತುಗಳನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು, 108 ವರ್ಷಗಳಷ್ಟು ಹಳೆಯದಾದ ಬೆಂಗಳೂರು-ದೇವನಹಳ್ಳಿ-ಚಿಕ್ಕಬಳ್ಳಾಪುರ ಪಾರಂಪರಿಕ ರೈಲು ಮಾರ್ಗದಲ್ಲಿ ಮೊದಲ ಬಾರಿಗೆ ನೈಋತ್ಯ ರೈಲ್ವೆ (ಎಸ್ಡಬ್ಲ್ಯುಆರ್) ಒಂದು ದಿನದ ಪ್ರವಾಸ ಪ್ಯಾಕೇಜ್ ಪರಿಚಯಿಸಲು ಯೋಜನೆ ನಡೆಸಿದೆ. ಯೋಜನೆಯ ಭಾಗವಾಗಿ, ಈ ರೈಲು ಮಾರ್ಗದ ಉದ್ದಕ್ಕೂ ಶಿಥಿಲಗೊಂಡ ಪಾರಂಪರಿಕ ನಿಲ್ದಾಣಗಳನ್ನು ಪುನಃಸ್ಥಾಪಿಸಲಾಗುತ್ತಿದೆ. ಈ ಒಂದು ದಿನದ ಪ್ರವಾಸ ಪ್ಯಾಕೇಜ್ನಲ್ಲಿ ಪ್ರವಾಸಿಗರು ನಂದಿ ಬೆಟ್ಟದಲ್ಲಿ ಸೂರ್ಯೋದಯವನ್ನು ಕಣ್ತುಂಬಿಕೊಳ್ಳಬಹುದು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications