'ಮಾನ್ಯ ಸಿದ್ದರಾಮಯ್ಯನವರೇ. ನೀವು ರಾಜೀನಾಮೆ ನೀಡುವುದು ಯಾವಾಗ? ಕುರ್ಚಿ ಬಿಡುವ ಮುನ್ನ ವೇತನ ಕೊಡಿಸಿ'
ಬೆಂಗಳೂರು, ಮೇ 06: ಆರೋಗ್ಯ ಕವಚ 108 ಆಂಬುಲೆನ್ಸ್ ಸಿಬ್ಬಂದಿಗೆ ಕಳೆದ ಮೂರು ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ ಆಂಬುಲೆನ್ಸ್ ಸಿಬ್ಬಂದಿಗಳು ಕುಟುಂಬ ನಿರ್ವಹಣೆಗೂ ಪರದಾಡುತ್ತಿದ್ದಾರೆ. ಜಿವಿಕೆ ಎಂಬ ಸಂಸ್ಥೆಯಡಿ 710 ಆಂಬುಲೆನ್ಸ್ ಕಾರ್ಯನಿರ್ವಹಿಸುತ್ತಿದ್ದು, ಅಂದಾಜು 3,600 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಕೊರೊನಾ ನಂತರ ಸಿಬ್ಬಂದಿಗೆ ಹಲವು ಬಾರಿ ವೇತನ ಪಾವತಿ ಸಮಸ್ಯೆಯಾಗುತ್ತಲೇ ಇತ್ತು. 2022 ಸೆಪ್ಟೆಂಬರ್ನಲ್ಲಿ ಸಿಬ್ಬಂದಿ ನ್ಯಾಯಾಲಯದ ಮೊರೆ ಹೋಗಿದ್ದರು. ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ಜಿವಿಕೆ ಮತ್ತು ಸರ್ಕಾರದ ವಿರುದ್ಧ ಸಿಬ್ಬಂದಿ ತಿರುಗಿಬಿದ್ದಿದ್ದು,ಕರ್ತವ್ಯ ನಿಲ್ಲಿಸಿ ಮುಷ್ಕರ ನಡೆಸಿದ ನಂತರ ಸಂಬಳ ನೀಡಿದ್ದರು. ಆದರೆ, ಮುಂದಿನ ಎರಡು ತಿಂಗಳಲ್ಲಿ ಸರಿಯಾಗಿ ವೇತನ ಪಾವತಿಯಾಯಿತು. ನಂತರ ಮತ್ತೆ ಸಂಬಳ ನೀಡದೆ ಸತಾಯಿಸುತ್ತಿದ್ದಾರೆ ಎಂದು ಸಿಬ್ಬಂದಿ ತಿಳಿಸಿದ್ದಾರೆ. ಅಲ್ಲದೇ ಸಂಬಳ ಆಗದ ಹಿನ್ನೆಲೆ ಇಂದು (ಮೇ 6) ರಂದು ರಾತ್ರಿ 8 ಗಂಟೆಯಿಂದ ಆಂಬ್ಯುಲೆನ್ಸ್ ಸೇವೆ ಸ್ಥಗಿತಗೊಳ್ಳಲಿದೆ.

ಈ ವಿಚಾರ ತಿಳಿಯುತ್ತಿದ್ದಂತೆ ಜೆಡಿಎಸ್ ರಾಜ್ಯ ಘಟಕ ಟ್ವೀಟ್ ಮಾಡಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಜನರಿಗಿಂತ ಜನಪ್ರಿಯತೆಯ ವ್ಯಸನವೇ ಹೆಚ್ಚು. ಬರ ನಿರ್ವಹಣೆಗಿಂತ ಬೇಜವಾಬ್ದಾರಿಯೇ ಜಾಸ್ತಿ. ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡಿದ್ದೇವೆನ್ನುವ ಇವರಿಗೆ 108 ಆಂಬುಲೆನ್ಸ್ ಚಾಲಕರಿಗೆ ಸಂಬಳ ಕೊಡಲಿಕ್ಕೂ ಹಣವಿಲ್ಲ! ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ರಕ್ಷಿಸುವ ಈ ಚಾಲಕರಿಗೆ ಸಂಬಳದ ಗ್ಯಾರಂಟಿ ಕೊಡಲು ಸಾಧ್ಯವಾಗಿಲ್ಲ. 3 ತಿಂಗಳಿಂದ ಅವರಿಗೆ ವೇತನ ಪಾವತಿ ಮಾಡಿಲ್ಲ ಎಂದರೆ ನಾಚಿಕೆಗೇಡು!" ಎಂದು ವಾಗ್ದಾಳಿ ನಡೆಸಿದೆ.
"ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಷಣ ಬಿಗಿದಿದ್ದಾರೆ. "ರಾಜ್ಯದ ಒಬ್ಬನೇ ಒಬ್ಬ ಸರಕಾರಿ ನೌಕರ ನನ್ನ ಬಳಿ ಬಂದು ಸಂಬಳ ಪಾವತಿಯಾಗಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ" ಎಂದು ಗುಡುಗಿದ್ದರು. ಹಾಗಾದರೆ, ಮಾನ್ಯ ಸಿದ್ದರಾಮಯ್ಯನವರೇ.. ನೀವು ರಾಜೀನಾಮೆ ನೀಡುವುದು ಯಾವಾಗ? ಕುರ್ಚಿ ಬಿಡುವ ಮೊದಲು ಆಂಬುಲೆನ್ಸ್ ಚಾಲಕರಿಗೆ ವೇತನ ಕೊಡಿಸಿ" ಎಂದು ಹರಿಹಾಯ್ದರು.
•ರಾಜ್ಯ @INCKarnataka ಸರಕಾರಕ್ಕೆ ಜನರಿಗಿಂತ ಜನಪ್ರಿಯತೆಯ ವ್ಯಸನವೇ ಹೆಚ್ಚು. ಬರ ನಿರ್ವಹಣೆಗಿಂತ ಬೇಜವಾಬ್ದಾರಿಯೇ ಜಾಸ್ತಿ. ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡಿದ್ದೇವೆನ್ನುವ ಇವರಿಗೆ 108 ಆಂಬುಲೆನ್ಸ್ ಚಾಲಕರಿಗೆ ಸಂಬಳ ಕೊಡಲಿಕ್ಕೂ ಹಣವಿಲ್ಲ! ತಮ್ಮ ಜೀವ ಪಣಕ್ಕಿಟ್ಟು ಜನರ ಜೀವ ರಕ್ಷಿಸುವ ಈ ಚಾಲಕರಿಗೆ ಸಂಬಳದ ಗ್ಯಾರಂಟಿ ಕೊಡಲು… pic.twitter.com/wUSkzvcvzt
— Janata Dal Secular (@JanataDal_S) May 6, 2024
ವೇತನ ಪಾವತಿ ಸಂಬಂಧ ಆಂಬ್ಯುಲೆನ್ಸ್ ಸಿಬ್ಬಂದಿ ಜೊತೆ ಆರೋಗ್ಯ ಇಲಾಖೆ ಸಭೆ ನಡೆಸಿದೆ. ಇಲಾಖೆ ಸಂಜೆ 6 ಗಂಟೆಯವರೆಗೂ ಕಾಲಾವಕಾಶ ಕೇಳಿದೆ. ಇಲಾಖೆಯ ಏನು ತೀರ್ಮಾನ ಕೈಗೊಳ್ಳುತ್ತೆ ಅಂತ ನೋಡಿಕೊಂಡು ಆಂಬ್ಯುಲೆನ್ಸ್ ಸಿಬ್ಬಂದಿ ಮುಂದಿನ ಹೆಜ್ಜೆ ಇಡುತ್ತಾರೆ.
-
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications