ರಾಜ್ಯಪಾಲರು V/S ರಾಜ್ಯ ಸರ್ಕಾರ: ರಾಜ್ಯಪಾಲರು ಸಹಿ ಹಾಕದೇ ಕಳುಹಿಸಿದ 11 ವಿಧೇಯಕಗಳು ಇವೇ ನೋಡಿ!
ಬೆಂಗಳೂರು,ಆಗಸ್ಟ್ 24: ಜನರ ವಿಶ್ವಾಸ ಗಳಿಸಿ, ಜನಪ್ರಿಯವಾದ ಸರ್ಕಾರದ ಕಾರ್ಯಚಟುವಟಿಕೆಗೆ ಅಡಿಗಡಿಗೂ ಅಡ್ಡಿ ಮಾಡುತ್ತಿರುವ ರಾಜ್ಯಪಾಲರ ಕ್ರಮ ರಾಜಕೀಯ ಪ್ರೇರಿತ ಎಂದು ಆರೋಪಿಸಿರುವ ಕಾಂಗ್ರೆಸ್ ಶಾಸಕರು, ಉಭಯ ಸದನಗಳಲ್ಲಿ ಅಂಗೀಕಾರವಾದ ಮಸೂದೆಗಳನ್ನು ವಾಪಸ್ ಮಾಡಿರುವ ರಾಜ್ಯಪಾಲರ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿ, ತೀವ್ರವಾಗಿ ಖಂಡಿಸಿದ್ದಾರೆ.
ಕಾಂಗ್ರೆಸ್ ಶಾಸಕರಾದ ಮಂಜುನಾಥ ಭಂಡಾರಿ, ಎಸ್.ರವಿ, ಅನಿಲ್ ಕುಮಾರ್, ರಾಜೇಂದ್ರ ರಾಜಣ್ಣ, ದಿನೇಶ್ ಗೂಳಿಗೌಡ, ಸುನಿಲ್ ಗೌಡ ಪಾಟೀಲ್, ಚಂದ್ರಶೇಖರ ಪಾಟೀಲ, ಚೆನ್ನರಾಜು, ಮಧು ಮಾದೇಗೌಡ, ಡಾ.ತಿಮ್ಮಯ್ಯ, ರಾಮೋಜಿ ಗೌಡ ,DT ಶ್ರೀನಿವಾಸ, ಶರಣಗೌಡ ಪಾಟೀಲ್, ಭೀಮರಾವ್ ಪಾಟಿಲ. ತಿಪ್ಪಣ್ಣಾ ಕಮಕನೂರು ಅವರು ಜಂಟಿ ಪತ್ರಿಕಾ ಹೇಳಿಕೆ ನೀಡಿ, ರಾಜ್ಯಪಾಲರ ನಡೆಯ ಬಗ್ಗೆ ಧ್ವನಿ ಎತ್ತಿದ್ದಾರೆ. ಆಗಸ್ಟ್ ತಿಂಗಳಲ್ಲಿ ರಾಜ್ಯಪಾಲರು 6 ಪ್ರಮುಖ ಮಸೂದೆಗಳನ್ನು ಹಿಂತಿರುಗಿಸಿದ್ದಾರೆ. ಒಟ್ಟು 11 ವಿಧೇಯಕಗಳನ್ನು ರಾಜ್ಯಪಾಲರು ವಾಪಸ್ ಕಳಿಸಿ ವಿರೋಧ ಪಕ್ಷದ ನಾಯಕರಂತೆ ವರ್ತಿಸುತ್ತಿದ್ದಾರೆ.

ಯಾವೆಲ್ಲಾ ವಿಧೇಯಕ ವಾಪಸ್?
* ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳು (ನೇಮಕಾತಿಯಲ್ಲಿಭ್ರಷ್ಟಾಚಾರ ಮತ್ತಿತರ ಅಕ್ರಮ ತಡೆ) ವಿಧೇಯಕ -2023
* ಕರ್ನಾಟಕ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ಸಂಸ್ಥೆಗಳು ವಿಧೇಯಕ -2024
* ಕರ್ನಾಟಕ ನಗರ ಯೋಜನೆ (ತಿದ್ದುಪಡಿ) ವಿಧೇಯಕ -2024
* ಗದಗ -ಬೆಟಗೇರಿ ವ್ಯಾಪಾರ, ಸಾಂಸ್ಕೃತಿಕ ಮತ್ತು ಪ್ರದರ್ಶನ ಪ್ರಾಧಿಕಾರ ವಿಧೇಯಕ -2023
* ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ -2024
* ಕರ್ನಾಟಕ ಪೌರಸಂಸ್ಥೆಗಳು ಮತ್ತು ಇತರ ಕೆಲವು ಕಾನೂನು (ತಿದ್ದುಪಡಿ) ವಿಧೇಯಕ -2024
* ಕರ್ನಾಟಕ ಚಿತ್ರ ಮತ್ತು ಸಾಂಸ್ಕೃತಿಕ ಕಲಾವಿದರ (ಕಲ್ಯಾಣ) ವಿಧೇಯಕ -2024
* ಕರ್ನಾಟಕ ಸಹಕಾರ ಸೊಸೈಟಿಗಳು (ತಿದ್ದುಪಡಿ) ವಿಧೇಯಕ -2024
* ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ -2024
* ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ -2024
* ಕರ್ನಾಟಕ ವಿಧಾನಮಂಡಲ (ಅನರ್ಹ ತಡೆ) ತಿದ್ದುಪಡಿ ವಿಧೇಯಕ -2024
ಕರ್ನಾಟಕ ಸಾರ್ವಜನಿಕ ಭ್ರಷ್ಟಾಚಾರ ತಡೆ ವಿಧೇಯಕ, ಕರ್ನಾಟಕ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ, ಕರ್ನಾಟಕ ಟೌನ್ ಆಂಡ್ ಕಂಟ್ರೀ ಪ್ಲಾನಿಂಗ್ ವಿಧೇಯಕ, ಕರ್ನಾಟಕ ಶಾಸಕಾಂಗ ಸದಸ್ಯರ ಅನರ್ಹತೆ ತಡೆ ವಿಧೇಯಕ, ಕರ್ನಾಟಕ ಪುರಸಭಗಳು ಮತ್ತು ಇತರೇ ಕೆಲವು ಕಾನೂನು ವಿಧೇಯಕ, ಕರ್ನಾಟಕ ಚಲನಚಿತ್ರ ಮತ್ತು ಸಾಂಸ್ಕೃತಿಕ ಕಲಾವಿದರ ಕಲ್ಯಾಣ ವಿಧೇಯಕ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಗದಗ ಬೆಟಗೇರಿ ವ್ಯಾಪಾರ ಸಂಸ್ಕೃತಿ ಪ್ರದರ್ಶನ ಪ್ರಾಧಿಕಾರ ವಿಧೇಯಕ, ಕರ್ನಾಟಕ ನೋಂದಣಿ ತಿದ್ದುಪಡಿ ವಿಧೇಯಕಗಳನ್ನು ರಾಜ್ಯಪಾಲರು ಇದುವರೆಗೆ ವಾಪಸ್ ಮಾಡಿದ್ದಾರೆ. ಈ ಕ್ರಮ ಸರಿಯಲ್ಲ ಎಂದು ಕಾಂಗ್ರೆಸ್ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ, ವಿಧಾನ ಪರಿಷತ್ನಲ್ಲಿ ಮಸೂದೆಗಳು ಅಂಗೀಕಾರವಾಗಿದ್ದರೂ ಕಾಯ್ದೆಯಲ್ಲಿ ಲೋಪದೋಷಗಳಿದ್ದರೆ, ಸ್ಪಷ್ಟನೆ ಕೇಳುವ ಅಧಿಕಾರ ರಾಜ್ಯಪಾಲರಿಗಿದೆ. ಆದರೆ, ವಿರೋಧಪಕ್ಷದವರು ವಿರೋಧಿಸಿದ್ದಾರೆ ಎಂಬ ಕಾರಣಕ್ಕೆ ಮಸೂದೆಗಳನ್ನು ವಾಪಸ್ ಕಳಿಸುವುದು ಸರಿಯಾದ ಕ್ರಮವಲ್ಲ. ಕಾಲಕಾಲಕ್ಕೆ ಕಾನೂನು ತಿದ್ದುಪಡಿ ಮಾಡುವ ಅವಕಾಶವನ್ನು ಸಂವಿಧಾನವೇ ನೀಡಿದೆ. ಜನಪ್ರತಿನಿಧಿಗಳು, ಬಹುಮತದ ಸರ್ಕಾರ ಶಾಸನ ರೂಪಿಸುತ್ತದೆ. ಅದು, ಕೆಳಮನೆ, ಮೇಲ್ಮನೆಯಲ್ಲಿ ಚರ್ಚೆಯಾಗಿ ಅಂಗೀಕಾರವಾಗಬೇಕು. ಅದನ್ನು ರಾಜ್ಯಪಾಲರು ತಮ್ಮ ಅಂಕಿತದೊಂದಿಗೆ ಅಂಗೀಕರಿಸಬೇಕು, ನಂತರ ಕಾಯ್ದೆ ಜಾರಿಯಾಗಬೇಕು ಎಂಬುದು ಕ್ರಮ. ಅದಕ್ಕೆ ಅಡ್ಡಿಪಡಿಸುವುದು ಸಮಂಜಸವಲ್ಲ. ಈ ರೀತಿ ಮಾಡುವುದರಿಂದ ಶಾಸಕ ಸಭೆಗಳ ಮಹತ್ವ ಕಡಿಮೆ ಆಗುತ್ತದೆ. ಒಕ್ಕೂಟದ ವ್ಯವಸ್ಥೆಗೆ ಧಕ್ಕೆಯಾಗುತ್ತದೆ. ಇದರಲ್ಲಿ ರಾಜಕೀಯದ ದುರುದ್ದೇಶ ಕಾಣುತ್ತದೆ ಎಂದು ಶಾಸಕರು ಆರೋಪಿಸಿದ್ದಾರೆ.
ಕಾನೂನು ಹೋರಾಟದ ಎಚ್ಚರಿಕೆ
ರಾಜ್ಯದಲ್ಲಿ ಏಕ ಕಾಲದಲ್ಲಿ 11 ಮಸೂದೆಗಳಿಗೆ ಅಡ್ಡಿಪಡಿಸುವ ಮೂಲಕ ರಾಜ್ಯಪಾಲರು ಕರ್ನಾಟಕದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಕೇರಳ, ಮಹಾರಾಷ್ಟ್ರ, ಪಂಜಾಬ್ನಲ್ಲಿ ಇದೇ ರೀತಿ ಧೋರಣೆಯನ್ನು ಅಲ್ಲಿನ ರಾಜ್ಯಪಾಲರು ಅನುಸರಿಸಿದ್ದರಿಂದ ಸುಪ್ರೀಂ ಕೋರ್ಟ್ನಲ್ಲಿ ಕಾನೂನು ಸಮರ ಮಾಡಿ ಮಸೂದೆಗಳಿಗೆ ಅಂಗೀಕಾರ ಪಡೆಯಬೇಕಾಯಿತು. ಎಲ್ಲ ನಿರ್ಣಯಗಳೂ ಶಾಸನ ಸಭೆಯಲ್ಲೇ ಆಗಬೇಕು ಎಂದು ಸುಪ್ರೀಂ ಕೋರ್ಟ್ ಕೂಡ ಹೇಳಿದೆ. ಹಾಗಾಗಿ ಕರ್ನಾಟಕದ ರಾಜ್ಯಪಾಲರು ಮತ್ತೊಮ್ಮೆ ತಮ್ಮ ನಿರ್ಧಾರಗಳನ್ನು ಮರುಪರಿಶೀಲಿಸಬೇಕು.
ಸಂವಿಧಾನದ ರಕ್ಷಕರಾದ ತಾವು ಪಕ್ಷಪಾತ ಧೋರಣೆಯನ್ನು ಅನುಸರಿಸಬಾರದು. ಉಭಯ ಸದನಗಳಲ್ಲಿ ಅಂಗೀಕಾರವಾರ ಮಸೂದೆಗಳಿಗೆ ಅಂಕಿತ ಹಾಕಿ ಸುಗಮ ಆಡಳಿತಕ್ಕೆ ಅನುವು ಮಾಡಿಕೊಡಬೇಕು. ಇಲ್ಲವಾದಲ್ಲಿ ಜನರ ಆಶೋತ್ತರಗಳನ್ನು ಈಡೇರಿಸುವ ಸಲುವಾಗಿ ಅನಿವಾರ್ಯವಾಗಿ ಕಾನೂನು ಹೋರಾಟ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಶಾಸಕರು ಎಚ್ಚರಿಸಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications