ಮೋದಿ ಸ್ಮಾರ್ಟ್ ಸಿಟಿ ಯೋಜನೆಗೆ ರಾಜ್ಯದ 11 ನಗರ?
ಬೆಂಗಳೂರು, ಡಿ.26: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಸ್ಮಾರ್ಟ್ ಸಿಟಿ ಯೋಜನೆಗೆ ರಾಜ್ಯದಿಂದ 11 ನಗರಗಳನ್ನು ಕರ್ನಾಟಕ ಸರ್ಕಾರ ಆಯ್ಕೆ ಮಾಡಿ ಕೇಂದ್ರ ಸರ್ಕಾರದ ಅನುಮೋದನೆಗೆ ಕಳುಹಿಸಿಕೊಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.
ರಾಮನಗರ, ತುಮಕೂರು, ದೇವನಹಳ್ಳಿ, ಮೈಸೂರು, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು, ಉಡುಪಿ, ಹೊಸಪೇಟೆ ಮತ್ತು ವಿಜಯಪುರಗಳನ್ನು ಆಯ್ಕೆ ಮಾಡಿ ಅನುಮೋದನೆಗಾಗಿ ಕಳುಹಿಸಿಕೊಡಲಾಗಿದೆ ಎಂದು ತಿಳಿದುಬಂದಿದೆ.[ನೂರು ಸ್ಮಾರ್ಟ್ ಸಿಟಿಗಳ ನಿರ್ಮಾಣ ನಾಯ್ಡು ಗುರಿ]
ಆಯ್ಕೆ ಮಾನದಂಡವೇನು?: ಕೇಂದ್ರ ಸರ್ಕಾರ ರೂಪಿಸಿರುವ ಮಾರ್ಗಸೂಚಿ ಪ್ರಕಾರ, ಸ್ಮಾರ್ಟ್ ಸಿಟಿಗೆ ಯಾವುದೇ ನಗರಗಳನ್ನು ಆಯ್ಕೆ ಮಾಡಬೇಕಾದರೆ ಒಂದರಿಂದ ನಾಲ್ಕು ಮಿಲಿಯನ್ ಜನಸಂಖ್ಯೆಯನ್ನು ಹೊಂದಿರಲೇಬೇಕು ಎಂಬ ನಿಯಮವಿದೆ. ಹೀಗಾಗಿ 2011ರ ಜನಗಣತಿ ಪ್ರಕಾರ, ಬೆಂಗಳೂರಿನ ಜನಸಂಖ್ಯೆ 96 ಲಕ್ಷ ಮೀರಿರುವುದರಿದ ಈ ನಗರವನ್ನು ಆಯ್ಕೆ ಮಾಡಲಾಗಿಲ್ಲ.

ಕಳೆದ ಸೆಪ್ಟೆಂಬರ್ನಲ್ಲಿ ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಅವರು ಮಾರ್ಗಸೂಚಿಗಳನ್ನು ಹೊರಡಿಸಿ ಸ್ಮಾರ್ಟ್ ಸಿಟಿ ಯೋಜನೆಗೆ ಆಯಾ ರಾಜ್ಯಗಳು ನಗರಗಳನ್ನು ಆಯ್ಕೆ ಮಾಡಬೇಕೆಂದು ನಗರಾಭಿವೃದ್ಧಿ ಇಲಾಖೆಗೆ ಸೂಚಿಸಿದ್ದರು. ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಕ್ಕ ನಗರಗಳಿಗೆ ರಾಜ್ಯ ಸರ್ಕಾರ ಮೂಲ ಸೌಕರ್ಯ ಒದಗಿಸಬೇಕಾಗುತ್ತದೆ.
ಹೆರಿಟೇಜ್ ಸಿಟಿ: ರಾಮನಗರ, ತುಮಕೂರು ಮತ್ತು ದೇವನಹಳ್ಳಿ ಈ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಉಡುಪಿ, ಹೊಸಪೇಟೆ ಹಾಗೂ ವಿಜಯಪುರವನ್ನು ಪಾರಂಪರಿಕ ನಗರಗಳೆಂದು ಪರಿಗಣಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. [3 ಕೋಟಿ ಜನರಿಗೆ ಸೂರು ಒದಗಿಸಲು ಯೋಜನೆ]
ಮೋದಿಯವರ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಸ್ಮಾರ್ಟ್ ಸಿಟಿಗೆ ದೇಶಾದ್ಯಂತ ರಾಜಧಾನಿ ಹೊರತುಪಡಿಸಿ ಎರಡನೇ ಹಂತದ ಎರಡು ಮತ್ತು ಮೂರನೇ ಹಂತದ ನಗರಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಂದಾಜು ಖರ್ಚು ವೆಚ್ಚ?: 100 ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಸುಮಾರು 10 ವರ್ಷ ಕಾಲಾವಧಿ ಬೇಕಾಗುತ್ತದೆ. ಸುಮಾರು 45 ಲಕ್ಷ ಕೋಟಿ ರು ವ್ಯಯಿಸಬೇಕಾಗುತ್ತದೆ. ಸರ್ಕಾರಿ ಮತ್ತು ಸಾರ್ವಜನಿಕ ಸಹಭಾಗಿತ್ವ(PPP ಮಾದರಿ)ದಲ್ಲಿ ಯೋಜನೆ ಸಾಕಾರಗೊಳ್ಳಲಿದೆ.
ಸಿಂಗಪುರ ಸೇರಿದಂತೆ ಅನೇಕ ಅಭಿವೃದ್ಧಿ ಶೀಲ ದೇಶಗಳು ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಮುಂದಾಗಿವೆ. ಆಂಧ್ರಪ್ರದೇಶದ ಹೊಸ ರಾಜಧಾನಿ ನಿರ್ಮಾಣಕ್ಕೆ ಸಿಂಗಪುರದ ತಾಂತ್ರಿಕ ನೆರವು ಸಿಕ್ಕಿರುವುದನ್ನು ಇಲ್ಲಿ ಸ್ಮರಿಸಬಹುದು ಎಂದು ಕೇಂದ್ರ ನಗರಾಭಿವೃದ್ಧಿ ಸಚಿವ ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications