Lok Sabha Election 2024: ಮನೆಯಿಂದಲೇ ಮತದಾನ ಮಾಡಲು ಅವಕಾಶ, ಕರ್ನಾಟಕದ ಅಂಕಿ-ಅಂಶ ತಿಳಿಯಿರಿ
ಬೆಂಗಳೂರು, ಏಪ್ರಿಲ್ 08: 2024ರ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ದೇಶದಲ್ಲಿ ಏಪ್ರಿಲ್ 19 ರಿಂದ ಚುನಾವಣೆ ಆರಂಭವಾಗಲಿದ್ದು, ಒಟ್ಟು ಏಳು ಹಂತದಲ್ಲಿ ಜೂನ್ 1ರವೆಗೆ ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳು ಈಗಾಗಲೇ ಭರ್ಜರಿ ಪ್ರಚಾರ ಆರಂಭಿಸಿದ್ದು, ಗೆಲುವಿಗಾಗಿ ಜಿದ್ದಾಜಿದ್ದಿಯ ಹಣಾಹಣಿ ನಡೆಸುತ್ತಿದ್ದಾರೆ.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಒಟ್ಟು 97 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹತೆಯನ್ನು ಹೊಂದಿದ್ದಾರೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗ ವಿಶೇಷ ಅವಕಾಶವೊಂದನ್ನು ನೀಡಿದೆ.

ಪ್ರತಿಯೊಬ್ಬರು ಮತದಾನ ಮಾಡಬೇಕು ಎನ್ನುವ ದೃಷ್ಟಿಯಿಂದ ವಯೋವೃದ್ಧರು ಹಾಗೂ ವಿಶೇಷ ಚೇತನರು ಮತದಾನದ ಕೇಂದ್ರಗಳಿಗೆ ತೆರಳದೇ ಮನೆಯಲ್ಲೇ ಕುಳಿತು ಮತದಾನ ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಒಟ್ಟು 12 ಲಕ್ಷ ಮಂದಿ ಮನೆಯಿಂದಲೇ ಮತದಾನ ಮಾಡುವ ಅವಕಾಶ ಹೊಂದಿದ್ದಾರೆ ಎಂದು ಆಯೋಗ ತಿಳಿಸಿದೆ.
85 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 5.7 ಲಕ್ಷ ಹಿರಿಯ ನಾಗರಿಕರು ಹಾಗೂ 6.13 ಲಕ್ಷ ವಿಕಲಚೇತನರು ಲೋಕಸಭೆ ಚುನಾವಣೆಯಲ್ಲಿ ಮನೆಯಿಂದಲೇ ಮತ ಚಲಾಯಿಸಲಿದ್ದಾರೆ. ಮನೆಯಿಂದಲೇ ಮತದಾನ ಮಾಡಲು ಬೇಕಾದ ಅರ್ಜಿ ನಮೂನೆ 12ಡಿ (12D) ವಿತರಿಸುವ ಪ್ರಕ್ರಿಯೆಯನ್ನು ಚುನಾವಾಣಾ ಆಯೋಗದ ಅಧಿಕಾರಿಗಳು ಈಗಾಗಲೇ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.
2023ರ ಕರ್ನಾಟಕದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಹ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಲಾಗಿತ್ತು. ಈ ವೇಳೆ ಸುಮಾರು ಒಂದು ಲಕ್ಷ ಜನರು ಮನೆಯಿಂದಲೇ ಮತ ಚಲಾಯಿಸಿದ್ದರು. ಸುಮಾರು 80,251 ಹಿರಿಯ ನಾಗರಿಕರ ಪೈಕಿ 76,120 ಮಂದಿ ಹಾಗೂ 19,280 ವಿಕಲಚೇತನರ ಪೈಕಿ 18,811 ಹೆಚ್ಚು ಮಂದಿ ಅಧಿಕಾರಿಗಳ ಸಹಾಯದಿಂದ ಮತನೆಯಿಂದಲೇ ಮತದಾನ ಮಾಡಿದ್ದರು.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್












Click it and Unblock the Notifications