ಪಿ. ಎಸ್. ಹರ್ಷ ಸೇರಿ 13 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಜೂನ್ 26 : ಕರ್ನಾಟಕ ಸರ್ಕಾರ 13 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಮಂಗಳೂರು ಪೊಲೀಸ್ ಆಯುಕ್ತ ಪಿ. ಎಸ್. ಹರ್ಷ ಸೇರಿದಂತೆ ಹಲವು ಅಧಿಕಾರಿಗಳು ವರ್ಗಾವಣೆಗೊಂಡಿದ್ದಾರೆ.
ಬಿ. ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಪಿ. ಎಸ್. ಹರ್ಷರನ್ನು ಬೆಂಗಳೂರಿನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ. ವಿಕಾಸ್ ಕುಮಾರ್ ಮಂಗಳೂರು ನಗರದ ನೂತನ ಆಯುಕ್ತಾಗಿದ್ದಾರೆ.

2019 ಆಗಸ್ಟ್ 9ರಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಡಾ. ಪಿ. ಎಸ್. ಹರ್ಷ ಅಧಿಕಾರ ವಹಿಸಿಕೊಂಡಿದ್ದರು. ಸಿಎಎ ವಿರೋಧಿಸಿ ಮಂಗಳೂರು ನಗರದಲ್ಲಿ ನಡೆದ ಗಲಭೆ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪತ್ತೆಯಾದ ಪ್ರಕರಣ ಸೇರಿದಂತೆ ಹಲವು ಗಂಭೀರ ಪರಿಸ್ಥಿತಿಗಳಲ್ಲಿ ನಗರದಲ್ಲಿ ಅವರು ಕಾರ್ಯ ನಿರ್ವಹಣೆ ಮಾಡಿದ್ದರು.
ಹೊಸ ಎಸ್ಪಿ ನೇಮಕ : ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹರೀಶ್ ಪಾಂಡೆ ವರ್ಗಾವಣೆಯಾಗಿದ್ದಾರೆ. ಗುಪ್ತಚರ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಅಕಾಯ್ ಅಕ್ಷಯ್ ಮಚ್ಚಿಂದ್ರ ಚಿಕ್ಕಮಗಳೂರು ನೂತನ ಎಸ್ಪಿಯಾಗಿದ್ದು, ಅವರ ಸ್ಥಾನಕ್ಕೆ ಹರೀಶ್ ಪಾಂಡೆ ವರ್ಗಾವಣೆಗೊಂಡಿದ್ದಾರೆ.












Click it and Unblock the Notifications