ಉಡುಪಿ ಕಾಲೇಜು ಪ್ರಕರಣ: ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ: 14 ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್
ಬೆಂಗಳೂರು, ಜುಲೈ 28: ಉಡುಪಿ ಕಾಲೇಜು ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಿದ ಆರೋಪದ ಅಡಿಯಲ್ಲಿ 14 ಮಂದಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಗುರುವಾರ ಸದಾಶಿವನಗರದಲ್ಲಿ ಇರುವ ಗೃಹ ಸಚಿವರ ನಿವಾಸಕ್ಕೆ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮುತ್ತಿಗೆ ಹಾಕಿದ್ದರು. ಅಕ್ರಮವಾಗಿ ಗುಂಪುಗೂಡಿ ಕಾನೂನು & ಸುವ್ಯವಸ್ಥೆಗೆ ಭಂಗವುಂಟಾಗುವ ರೀತಿಯಲ್ಲಿ ಪ್ರತಿಭಟನೆ ಮಾಡಿರುವ 14 ಜನ ಬಿ.ಜೆ.ಪಿ ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನ ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಘಟನೆಯ ಮರುದಿನವೇ 14 ಕಾರ್ಯಕರ್ತರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಮಾಡಲಾಗಿದೆ.

ಉಡುಪಿಯಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋ ಚಿತ್ರೀಕರಣ ಪ್ರಕರಣ ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಕುರಿತು ಬಿಜೆಪಿ ಮಹಿಳಾ ಘಟಕವೂ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿತ್ತು. ಅಲ್ಲದೇ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕುಲು ಯತ್ನಿಸಿದ್ದ ಬಿ.ಜೆ.ಪಿ ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ಕಾರ್ಯಕರ್ತರಾದ ಪ್ರಶಾಂತ್, ನವೀನ್, ಪ್ರಶಾಂತ್, ಅಭಿಲಾಷ್, ವಸಂತ್, ಯತೀಶ್ ಕುಮಾರ್, ಪ್ರಥ್ವಿ,, ವಿಜಯ್, ಭುವನ್ ಕುಮಾರ್, ರಮೇಶ್, ಯಶಸ್ವಿ,, ಯತೀನ್, ಸತೀಶ್ ಹಾಗೂ ಶಿವಪ್ರಸಾದ್ ರವರ ವಿರುದ್ಧ ಎಫ್ ಐ ಆರ್ ದಾಖಲು ಮಾಡಲಾಗಿದೆ.
ಇನ್ನೂ ಈ ವಿಚಾರವಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾತನಾಡಿ, ನಾನು, ನೀವು ಕಾಲೇಜು ಹೋಗಿದ್ದವರು. ಸ್ನೇಹಿತರ ನಡುವೆ ಕೆಲ ಘಟನೆ ನಡೆಯುತ್ತೆ. ಅದನ್ನು ಎಲ್ಲಿಗೋ ತೆಗೆದುಕೊಂಡು ಹೋಗುವುದು ಸರಿಯಲ್ಲ. ಇಂತಹ ಘಟನೆ ನಡೆದರೆ ಅದರ ವಿರುದ್ಧ ಏನು ಕ್ರಮ ಕೈಗೊಳ್ಳಬೇಕು ಎಂಬುದುನ್ನು ಕಾಲೇಜಿನ ಪ್ರಾಂಶುಪಾಲರಿಗೆ ಬಿಡಬೇಕು. ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು ಈಗಾಗಲೇ ಅಮಾನತು ಮಾಡಿದ್ದಾರೆ. ಅದನ್ನು ಮೀರಿದ ಘಟನೆಯಾದ್ರೆ ನಾವು ಮಧ್ಯಪ್ರದೇಶ ಮಾಡಬಹುದು ಎಂದು ಹೇಳಿದ್ದರು.
-
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ











Click it and Unblock the Notifications