ಅಟಲ್ ಭೂಜಲ ಯೋಜನೆ; ಕರ್ನಾಟಕದ 14 ಜಿಲ್ಲೆಗಳು ಆಯ್ಕೆ
ಬೆಂಗಳೂರು, ಡಿಸೆಂಬರ್ 24 : 'ಅಟಲ್ ಭೂಜಲ ಯೋಜನೆ'ಗೆ ಕರ್ನಾಟಕದ 14 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಕೇಂದ್ರ ಸರ್ಕಾರ ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ.
ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನವನ್ನು ಕೈಗೊಳ್ಳಲಾಗಿದೆ. ಭೂ-ಜಲ ಸಂಪನ್ಮೂಲ ಸಂರಕ್ಷಣೆ, ಸದ್ಬಳಕೆ ಹಾಗೂ ನಿರ್ವಹಣೆ ಉದ್ದೇಶದಿಂದ 'ಅಟಲ್ ಭೂಜಲ ಯೋಜನೆ' ಜಾರಿಗೊಳಿಸಲಾಗುತ್ತಿದೆ.
20 ವರ್ಷಗಳ ನಂತರ ನೀರು ಕಂಡಿತು ಭೀಮಾ ಜಲಾಶಯ
ಮುಂದಿನ 5 ವರ್ಷಗಳ ಅವಧಿಯಲ್ಲಿ ಈ ಯೋಜನೆಗಾಗಿ 6 ಸಾವಿರ ಕೋಟಿ ವೆಚ್ಚ ಮಾಡಲು ಸಚಿವ ಸಂಪುಟ ಒಪ್ಪಿಗೆ ಕೊಟ್ಟಿದೆ. ಕೇಂದ್ರ ಸರ್ಕಾರ ಮತ್ತು ವಿಶ್ವಬ್ಯಾಂಕ್ 50:50ರ ಅನುಪಾತದಲ್ಲಿ ಯೋಜನೆಗೆ ಅನುದಾನವನ್ನು ನೀಡಲಿವೆ.
ಹುಳಿಮಾವು ಕೆರೆ ಕಟ್ಟೆ ಒಡೆದು, ಲೇಔಟಿಗೆ ನೀರು
ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ರಾಜಸ್ಥಾನ, ಹರ್ಯಾಣ, ಉತ್ತರ ಪ್ರದೇಶ ರಾಜ್ಯಗಳ 8,350 ಗ್ರಾಮಗಳಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ಕರ್ನಾಟಕದ 14 ಜಿಲ್ಲೆಗಳನ್ನು ಯೋಜನೆಗಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.
ಬಾಗಲಕೋಟೆಯಲ್ಲಿ ರಾತ್ರಿ ಮತ್ತೆ ಮಳೆ; ನೀರು ಪಾಲಾದ ಬೆಳೆ
ಅತಿಯಾದ ಅಂತರ್ಜಲ ಬಳಕೆಯಿಂದ ಪ್ಲೋರೈಡ್ಯುಕ್ತ ನೀರಿನ ಸಮಸ್ಯೆ ಎದುರಿಸುತ್ತಿರುವ ರಾಜ್ಯದ 14 ಜಿಲ್ಲೆಗಳ ವಿವಿಧ ತಾಲೂಕುಗಳನ್ನು ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ. 1,199 ಗ್ರಾಮ ಪಂಚಾಯಿತಿಗಳಲ್ಲಿ ಯೋಜನೆ ಜಾರಿಯಾಗಲಿದೆ.
ಯಾವ-ಯಾವ ತಾಲೂಕು: ಪಾವಗಡ, ಮಧುಗಿರಿ, ಕೊರಟಗೆರೆ, ಚಿಕ್ಕನಾಯಕನಹಳ್ಳಿ, ಚಿಕ್ಕಬಳ್ಳಾಪುರ, ಚಿಂತಾಮಣಿ, ಗುಡಿಬಂಡೆ, ಗೌರಿಬಿದನೂರು, ಬಾಗೇಪಲ್ಲಿ, ಶಿಡ್ಲಘಟ್ಟ, ಬಂಗಾರಪೇಟೆ, ಮುಳಬಾಗಿಲು, ಶ್ರೀನಿವಾಸಪುರ, ಕನಕಪುರ ಮತ್ತು ಮಾಗಡಿ ಮುಂತಾದ ತಾಲೂಕುಗಳು ಸೇರಿವೆ.
'ಅಟಲ್ ಭೂಜಲ ಯೋಜನೆ' ಅನ್ವಯ ಜಲ ಬಳಕೆದಾರರ ಸಂಘವನ್ನು ರಚನೆ ಮಾಡಲಾಗುತ್ತದೆ. ಅಂತರ್ಜಲ ದತ್ತಾಂಶದ ಸಂಗ್ರಹ ನಡೆಯಲಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಲ ಸುರಕ್ಷೆ ಯೋಜನೆಗಳ ರಚನೆ ಮತ್ತು ಅನಿಷ್ಠಾನ ಮಾಡಲಾಗುತ್ತದೆ.