ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

14 ನಿವೃತ್ತ ಅಧಿಕಾರಿಗಳನ್ನು ಬಿಡುಗಡೆಗೊಳಿಸಿದ ಯಡಿಯೂರಪ್ಪ

|
Google Oneindia Kannada News

Recommended Video

ಅಧಿಕಾರಿಗಳನ್ನು ಬಿಡುಗಡೆಗೊಳಿಸಿದ ಯಡಿಯೂರಪ್ಪ | B. S. Yeddyurappa | Oneindia Kannada

ಬೆಂಗಳೂರು, ಆಗಸ್ಟ್ 01 : ಮುಖ್ಯಮಂತ್ರಿಗಳು ಮತ್ತು ಇತರ ಸಚಿವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ನಿವೃತ್ತ ನೌಕರರನ್ನು ಬಿಡುಗಡೆ ಮಾಡಲಾಗಿದೆ. ಎಚ್. ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಿವೃತ್ತ ಅಧಿಕಾರಿಗಳ ನೇಮಕ ಗುತ್ತಿಗೆ ಆಧಾರದಲ್ಲಿ ನಡೆದಿತ್ತು.

ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿರುವ ಬಿ. ಎಸ್. ಯಡಿಯೂರಪ್ಪ 14 ನಿವೃತ್ತ ಅಧಿಕಾರಿಗಳನ್ನು ಬಿಡುಗಡೆ ಮಾಡಿದ್ದಾರೆ. ಕೆಲವರು ಸಿಎಂ ಗೃಹ ಕಚೇರಿಯಲ್ಲಿ, ಕೆಲವರು ವಿವಿಧ ಸಚಿವರ ಕಚೇರಿಯಲ್ಲಿ ಕೆಲಸಕ್ಕೆ ನಿಯೋಜನೆಗೊಂಡಿದ್ದರು.

ವಿಧಾನಸೌಧದ ಸಿಬ್ಬಂದಿಗೆ ಬಿಸಿ ಮುಟ್ಟಿಸಿದ ಸಿಎಂ ಯಡಿಯೂರಪ್ಪವಿಧಾನಸೌಧದ ಸಿಬ್ಬಂದಿಗೆ ಬಿಸಿ ಮುಟ್ಟಿಸಿದ ಸಿಎಂ ಯಡಿಯೂರಪ್ಪ

ಮುಖ್ಯಮಂತ್ರಿಗಳ ಕಚೇರಿ ಮತ್ತು ಸಚಿವರ ಆಪ್ತ ಶಾಖೆಗಳಲ್ಲಿ ಇದ್ದ 23 ಅಧಿಕಾರಿಗಳನ್ನು ಮಾತೃ ಇಲಾಖೆಗೆ ವಾಪಸ್ ಕಳಿಸಲಾಗಿದೆ. ಈ ಮೂಲಕ ಯಡಿಯೂರಪ್ಪ ಆಡಳಿತಯಂತ್ರವನ್ನು ಚುರುಕುಗೊಳಿಸುವ ಕಾರ್ಯವನ್ನು ಆರಂಭಿಸಿದ್ದಾರೆ.

ಯಡಿಯೂರಪ್ಪ ಸಂಪುಟ : ಉಪ ಮುಖ್ಯಮಂತ್ರಿ ಹುದ್ದೆ ಇಲ್ಲಯಡಿಯೂರಪ್ಪ ಸಂಪುಟ : ಉಪ ಮುಖ್ಯಮಂತ್ರಿ ಹುದ್ದೆ ಇಲ್ಲ

14 Retired Officers Relieved From Duty

ನಿವೃತ್ತ ಐಎಎಸ್ ಅಧಿಕಾರಿ ಎಸ್‌. ಸುಬ್ರಮಣ್ಯ, ಬಿ. ಎನ್. ಕೃಷ್ಣಯ್ಯ, ಕೆ. ವಿಶ್ವನಾಥರೆಡ್ಡಿ ಸೇರಿದಂತೆ ಪ್ರಮುಖ ಅಧಿಕಾರಿಗಳನ್ನು ಸೇವೆಯಿಂದ ಬಿಡುಗಡೆಗೊಳಿಸಲಾಗಿದೆ.

2 ಹಂತದಲ್ಲಿ ಸಂಪುಟ ವಿಸ್ತರಣೆ; ಸಿಎಂ ಯಡಿಯೂರಪ್ಪ ಲೆಕ್ಕಾಚಾರ2 ಹಂತದಲ್ಲಿ ಸಂಪುಟ ವಿಸ್ತರಣೆ; ಸಿಎಂ ಯಡಿಯೂರಪ್ಪ ಲೆಕ್ಕಾಚಾರ

ಎಂ. ನಾರಾಯಣಪ್ಪ, ಕೆ.ಆರ್.ಶಿವಕುಮಾರ್, ಎಲ್.ಚನ್ನಕೇಶವಮೂರ್ತಿ, ಎಂ. ಜಿ. ಗೂಳಿಗೌಡ, ಎಂ. ಸಿ. ನಾಗರಾಜ್ ಸೇರಿದಂತೆ ಹಲವು ಅಧಿಕಾರಿಗಳು ಈ ಪಟ್ಟಿಯಲ್ಲಿದ್ದಾರೆ.

ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಗಳ ಕಚೇರಿ ಸೇರಿದಂತೆ ಹಲವು ಇಲಾಖೆಗಳಲ್ಲಿ ವರ್ಗಾವಣೆ ನಡೆಯಲಿದೆ.

English summary
14 retired officers who working in Chief Minister and various minister offices relieved from duty after B.S.Yediyurappa takes charge as Chief Minister of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X