Breaking: Ola, Uberನ 15 ದಿನದ ಗಡುವು ಅಂತ್ಯ: ಕನಿಷ್ಠ ದರ ನಿಗದಿಗೆ ಮುಂದಾದ ರಾಜ್ಯ ಸರ್ಕಾರ
ಬೆಂಗಳೂರು, ಅಕ್ಟೋಬರ್ 27: ಆಪ್ ಆಧಾರಿತ ಆಟೋ ರಿಕ್ಷಾ ಸೇವೆಗಳಾದ ಓಲಾ, ಉಬರ್ಗಳಿಗೆ ಪ್ರಯಾಣ ದರ ನಿಗದಿಗೆ ಮಾಡುವಂತೆ ಹೈಕೋರ್ಟ್ ನೀಡಿದ್ದ ಗಡುವು ಕೊನೆಗೊಂಡಿದೆ. ಆದಷ್ಟು ಶೀಘ್ರವೇ ಜಿಎಸ್ಟಿ ಸಹಿತ ಕನಿಷ್ಠ ದರ ನಿಗದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಓಲಾ, ಉಬರ್ ಪ್ರಯಾಣ ದರ ಕುರಿತು ಹೈಕೋರ್ಟ್ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಪೀಠ ಪ್ರಯಾಣದ ದರ ನಿಗದಿಪಡಿಸುವಂತೆ 15 ದಿನ ಗಡುವು ನೀಡಿ ಆದೇಶಿಸಿತ್ತು. ಆದರೆ ಗುಡುವು ಮುಗಿದರೂ ಈ ಬಗ್ಗೆ ಕಂಪನಿಗಳು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎನ್ನಲಾಗಿದೆ.
ಈ ಕಾರಣದಿಂದ ರಾಜ್ಯ ಸರ್ಕಾರವೇ ಓಲಾ, ಉಬರ್ ಆಟೋಗಳಿಗೆ ಹೊಸದಾಗಿ ಪ್ರಯಾಣದ ಕನಿಷ್ಠ (ಮಿನಿಮಮ್) ದರ ನಿಗದಿ ಮಾಡಿ ಆದಷ್ಟು ಶೀಘ್ರ ದರಪಟ್ಟಿ ಬಿಡುಗಡೆ ಮಾಡಲಿದೆ. ಈ ದರದಲ್ಲಿ ಸರಕು ಸೇವಾ ತೆರಿಗೆ (ಜಿಎಸ್ಟಿ) ಸಹ ಒಳಗೊಂಡಿರಲಿದೆ.

ಹೆಚ್ಚುವರಿ ಹಣ ವಸೂಲಿ ವಿಚಾರ ತೀವ್ರತೆ ಪಡೆದುಕೊಂಡ ಬಳಿಕ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ 2 ಕಿಲೋ ಮೀಟರ್ ಪ್ರಯಾಣಕ್ಕೆ 30ರೂ. ನಿಗದಿ ಮಾಡಿತ್ತು. ಇದೀಗ ಗುಡುವು ಮುಗಿದ ಹಿನ್ನೆಲೆ ಹೊಸ ದರವನ್ನು ನಿಗದಿ ಮಾಡಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ವಾರದೊಳಗೆ ಓಲಾ ಮತ್ತು ಊಬರ್ ಕಂಪನಿಗಳ ಆಟೋರಿಕ್ಷಾ ಪ್ರಯಾಣಕ್ಕೆ ಹೊಸ ದರ ಫಿಕ್ಸ್ ಮಾಡಲಿದೆ.
ಹೈಕೋರ್ಟ್ ಸೂಚನೆ ಏನು?
ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಉಬರ್ ಇಂಡಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಹೈಕೋರ್ಟ್ಗೆ ಈ ಹಿಂದೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು. ಇವುಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ ಏಕಸದಸ್ಯ ಪೀಠವು ಪ್ರಯಾಣ ಶುಲ್ಕ ನಿಗದಿ ಮಾಡುವಂತೆ ಸೂಚಿಸಿತ್ತು.

ಹೊಸ ದರ ನಿಗದಿ ಮಾಡಲು ಕಂಪನಿಗಳ ಜೊತೆ ಚರ್ಚಿಸಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್ 15 ದಿನ ಗಡುವು ನೀಡಿತ್ತು. ಜೊತೆಗೆ ಕಂಪನಿಗಳಿಗೆ ನಿಗದಿತ ದರ ಮತ್ತು ಹೆಚ್ಚುವರಿ ಶೇ. 10ರಷ್ಟು ಸೇವಾ ತೆರಿಗೆ ಮಾತ್ರ ಪಡೆಯುವಂತೆ ತಿಳಿಸಿತ್ತು. ಆದರೆ ಈ ವರೆಗೆ ಕಂಪನಿಗಳು ಯಾವುದೇ ನಿರ್ಧಾರ ಕೈಗೊಳ್ಳದ ಹಿನ್ನೆಲೆ ರಾಜ್ಯ ಸರ್ಕಾರವೇ ಓಲಾ, ಉಬರ್ ಕಂಪನಿ ಆಟೋ ಗಳಿಗೆ ಪ್ರಯಾಣದ ಕನಿಷ್ಠ ದರ ನಿಗದಿಗೆ ಮುಂದಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications