ರಾಜ್ಯದ 15 ಕಡೆ ಸಣ್ಣ ವಿಮಾನ ನಿಲ್ದಾಣ: ಎಲ್ಲೆಲ್ಲಿ?
Recommended Video
ಬೆಂಗಳೂರು, ಆಗಸ್ಟ್ 26: ರಾಜ್ಯದ ಒಟ್ಟು 15 ಕಡೆ ಸಣ್ಣ ವಿಮಾನ ನಿಲ್ದಾಣಗಳು ತಲೆ ಎತ್ತಲಿವೆ. ಈ ವಿಮಾನ ನಿಲ್ದಾಣಗಳ ಅಭಿವೃದ್ಧಿ ಕಾರ್ಯಕ್ಕೆ ಸಚಿವ ಸಂಪುಟ ಅಸ್ತು ಎಂದಿದೆ.ಇಷ್ಟು ದಿನ ಕಲಬುರಗಿ, ಬೆಂಗಳೂರು ಇನ್ನು ಕೆಲವೇ ಕೆಲವು ಕಡೆ ವಿಮಾನ ನಿಲ್ದಾಣವಿತ್ತು. ಆದರೆ ಇನ್ನುಮುಂದೆ ಪ್ರಯಾಣಿಕರ ಅನುಕೂಲಕ್ಕಾಗಿ ಇನ್ನಷ್ಟು ವಿಮಾನ ನಿಲ್ದಾಣಗಳು ನಿರ್ಮಾಣಾಗಲಿದೆ.
ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರ 38 ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿದೆ. ಈ ಕುರಿತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ(ಎಎಐ) ಜೊತೆ ತಿಳುವಳಿಕ ಪತ್ರಕ್ಕೆ ಸಹಿ ಮಾಡಲಾಗಿದೆ. ಇದರೊಂದಿಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ 181 ಕೋಟಿ ರೂ. ಅನುದಾನ ನೀಡಲಾಗಿದೆ.
ಮೊದಲ ಹಂತದಲ್ಲಿ ಕೆಲವು ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣಗಳ ಕಾರ್ಯ ಆರಂಭಗೊಂಡಿವೆ. ಎರಡನೇ ಹಂತದಲ್ಲಿ ರಾಯಚೂರು, ಹಾಸನ, ಕಾರವಾರ, ವಿರಾಜಪೇಟೆ (ಕೊಡಗು), ಕೋಲಾರ, ಯಾದಗಿರಿ ಮತ್ತು ಬಳ್ಳಾರಿ ನಗರಗಳನ್ನು ಗುರುತಿಸಲಾಗಿದೆ.

ಕನಿಷ್ಠ 15 ಸಣ್ಣ ವಿಮಾನ ನಿಲ್ದಾಣಗಳ ಅಭಿವೃದ್ಧಿಯ ಕುರಿತು ಎಸ್ಪಿವಿ (ಸ್ಪೆಷಲ್ ಪರ್ಪಸ್ ವೆಹಿಕಲ್) ಯೋಜನೆ ಮಾಡಿಕೊಳ್ಳುತ್ತಿದೆ. ಈ ವಿಚಾರವಾಗಿ ಸರ್ಕಾರ ಮತ್ತು ಎಎಐ ಅಧಿಕಾರಿಗಳ ನಡುವೆ ಎರಡು ದಿನಗಳಿಂದ ಮಾತುಕತೆ ನಡೆದಿತ್ತು. ನಾಗರೀಕ ವಿಮಾನಯಾನ ನೀತಿಯನ್ವಯ 15 ಸಣ್ಣ ವಿಮಾನ ನಿಲ್ದಾಣಗಳ ಅಭಿವೃದ್ಧಿ ಮೂಲಕ ಪ್ರಾದೇಶಿಕವಾಗಿ ವಾಯುಯಾನದ ಸೇವೆ ಲಭ್ಯವಾಗಲಿದೆ ಎಂದು ಎಎಐನ ಕಾರ್ಯನಿರ್ವಾಹಕ ನಿರ್ದೇಶಕ ಆನಂದ್ ಜಿ. ಜೋಶಿ ತಿಳಿಸಿದ್ದಾರೆ.
ಮತ್ತು ಮೈಸೂರು ವಿಮಾನ ನಿಲ್ದಾಣಗಳಿಗೆ ಬೇಕಾದ ಜಮೀನು ಪಡೆದುಕೊಳ್ಳಲಾಗಿದೆ. ಈ ವರ್ಷದ ಅಂತ್ಯದಲ್ಲಿ ಈ ಎರಡೂ ವಿಮಾನ ನಿಲ್ದಾಣಗಳ ಕೆಲಸ ಸಂಪೂರ್ಣವಾಗಲಿದೆ.
ಮೈಸೂರು (ಮಂಡಕಳ್ಳಿ), ಬೆಳಗಾವಿ (ಸಾಂಬ್ರಾ) ಮತ್ತು ಹುಬ್ಬಳ್ಳಿ ವಿಮಾನ ನಿಲ್ದಾಣಗಳ ಅಭಿವೃದ್ಧಿ ನಡೆಯುತ್ತಿದ್ದು, ವಿಮಾನಗಳ ಹಾರಾಟ ಸಹ ಆರಂಭಗೊಂಡಿದೆ. ಪ್ರತಿನಿತ್ಯ ಬೆಳಗಾವಿಯಲ್ಲಿ 13 ಮತ್ತು ಮೈಸೂರಿನಲ್ಲಿ 8 ವಿಮಾನಗಳು ಹಾರಾಟ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರು ನಾಗರೀಕ ವಿಮಾನಯಾನ ಮತ್ತು ವಾಣಿಜ್ಯ ಚಟುವಟಿಕೆ ಸೇವೆಯನ್ನು ಹೊಂದಿದೆ. ಕಲಬುರಗಿ ನಿಲ್ದಾಣಕ್ಕೆ ಅಲಯನ್ಸ್ ಏರ್ ಮತ್ತು ಘೋಧ್ವತ್ ಏವಿಯೇಷನ್ ಸೇವೆಯನ್ನು ಆರಂಭಿಸಿವೆ.
ಕಲಬುರಗಿಯಿಂದ ನೇರವಾಗಿ ಬೆಂಗಳೂರು, ಘಾಜಿಯಾಬಾದ್, ಉತ್ತರ ಪ್ರದೇಶ ಮತ್ತು ತಿರುಪತಿಗೆ ವಿಮಾನ ಸಂಪರ್ಕ ಕಲ್ಪಿಸುತ್ತಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣ ರಾಜ್ಯದ ಅತಿ ಹೆಚ್ಚು ಜನಸಂದಣಿ ಹೊಂದಿರುವ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications