ಸಿಇಟಿ ದಾಖಲಾತಿ ಪರಿಶೀಲನೆಗೆ ರಾಜ್ಯಾದ್ಯಂತ 16 ನೋಡಲ್ ಕೇಂದ್ರ
ಬೆಂಗಳೂರು, ಮೇ 09: ದಾಖಲಾತಿ ಪರಿಶೀಲನೆಗೆ ಸಿಇಟಿ ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ತಮ್ಮ ಹೆಸರು ನೋಂದಾಯಿಸಿಕೊಂಡು ರ್ಯಾಂಕ್ ಆಧಾರದ ಮೇಲೆ ಮೂಲ ದಾಖಲೆಗಳನ್ನು ದೃಢೀಕರಿಸಬೇಕಾಗುತ್ತದೆ.
ವಿದ್ಯಾರ್ಥಿಗಳು ಸಿಇಟಿ ರ್ಯಾಂಕ್ ಪಡೆದ ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿಗದಿಪಡಿಸಿರುವ ವೇಳಾಪಟ್ಟಿಗೆ ಅನುಸಾರವಾಗಿ ರಾಜ್ಯದ 16 ನೋಡಲ್ ಕೇಂದ್ರಗಳಿಗೆ ಭೇಟಿ ನೀಡಿ ನೋಂದಣಿ ಮಾಡಿಸಿಕೊಳ್ಳಬೇಕು.
ಮೈಸೂರು, ಮಂಗಳೂರು, ಬೆಂಗಳೂರು, ಶಿವಮೊಗ್ಗ, ಕಾರವಾರ, ಬೆಳಗಾವಿ, ಕಲಬುರಗಿ, ವಿಜಯಪುರ, ರಾಯಚೂರು, ಧಾರವಾಡ, ಬಳ್ಳಾರಿ, ದಾವಣಗೆರೆ, ಬೀದರ್, ಕೊಪ್ಪಳ ಮತ್ತು ತುಮಕೂರಿನಲ್ಲಿ ನೋಡಲ್ ಕೇಂದ್ರಗಳಿವೆ. ವಿದ್ಯಾರ್ಥಿಗಳಿಗೆ ತಮ್ಮ ಇಚ್ಛೆಯನ್ನು ಹೇಗೆ ನಮೂದಿಸಬೇಕು.

ಸೀಟುಗಳ ಆಯ್ಕೆ ವಿಧಾನ ಸೇರಿ ಸಿಇಟಿಯ ಸಂಪೂರ್ಣ ಮಾಹಿತಿಯನ್ನು ನೋಡಲ್ ಕೇಂದ್ರಗಳಲ್ಲಿ ನೀಡಲಾಗುತ್ತದೆ.ದಾಖಲೆಗಳ ಪರಿಶೀಲನೆಯನ್ನು ಈ ವರ್ಷದಿಂದ ಸರ್ಕಾರ ಆನ್ಲೈನ್ ಮಾಡಬೇಕೆಂದುಕಕೊಂಡಿತ್ತು. ಆದರೆ, ಕೆಲವು ಇಲಾಖೆಗಳ ಅಸಹಕಾರದಿಂದ ಇದು ಸಾಧ್ಯವಾಗುತ್ತಿಲ್ಲ.
ಸರ್ಕಾರಿ ಸೀಟುಗಳಿಗೆ ಪ್ರವೇಶ ಕೋರುವ ವಿದ್ಯಾರ್ಥಿಗಳು ಅಗತ್ಯವಿರುವ ದಾಖಲೆಗಳ ಮೂಲಪ್ರತಿಯನ್ನು ಮತ್ತು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿರುವ ದಾಖಲೆಗಳ ಒಂದು ನಕಲು ಪ್ರತಿ ಜತೆಗೆ ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು.
ವಿದ್ಯಾರ್ಥಿಗಳು ನೋಡಲ್ ಕೇಂದ್ರಕ್ಕೆ ಹೋಗುವ ಮುನ್ನ ರ್ಯಾಂಕ್, ದಾಖಲೆಗಳ ಪರಿಶೀಲನೆಯ ದಿನಾಂಕ ಮತ್ತು ಸಮಯವನ್ನು ಖಚಿತಪಡಿಸಿಕೊಳ್ಳಬೇಕು. ಪರಿಶೀಲನೆ ಪ್ರಕ್ರಿಯೆ ದಿನಾಂಕ ಮತ್ತು ಸಮಯಕ್ಕೆ ಸಂಬಂಧಿಸಿದಂತೆ ರ್ಯಾಂಕ್ ಗಳಿಸಿರುವ ಅರ್ಹ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಮಾಹಿತಿ ಕಳಿಸುವುದಿಲ್ಲ.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications