ಹಾವೇರಿ: 17 ವರ್ಷ ಹಿಂದಿನ ಘಟನೆಯಿಂದ ಇಂದಿಗೂ ಪರದಾಡುತ್ತಿರುವ ಜನ
ಹಾವೇರಿ, ಜೂನ್ 29: 'ಸಿಟ್ಟಿನ ಕೈಯಲ್ಲಿ ಬುದ್ದಿ ಕೊಡಬಾರದು' ಎಂಬುದು ನಮ್ಮ ಉತ್ತರ ಕರ್ನಾಟಕದ ಹಿರಿಯರು ಹೇಳುವ ಕಿವಿ ಮಾತು. ಈ ಕಿವಿ ಮಾತು ಈಗ ಯಾಕೆ ಅಂತಿರಾ? ಈ ಮುಂದಿನ ಘಟನೆ ಕೇಳಿದರೆ ನಿಮಗೆ ಅರ್ಥವಾಗುತ್ತದೆ.
ಏಪ್ರಿಲ್ 29, 2000ರಲ್ಲಿ ಹಾವೇರಿ ಜಿಲ್ಲೆಯ ಸವಣೂರಿ ತಹಶೀಲ್ದಾರ್ ಕಚೇರಿ ಎದುರಿನಲ್ಲಿ ಕುಡಿಯುವ ನೀರಿಗಾಗಿ ನಡೆದಿದ್ದ ಪ್ರತಿಭಟನೆಯೊಂದರಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರು ಆಕ್ರೋಶಗೊಂಡು ಕಚೇರಿಯ ಒಂದು ಕೊಠಡಿಗೆ ಬೆಂಕಿ ಇಟ್ಟಿದ್ದರು. ಇದರಿಂದ ಕೊಠಡಿಯಲ್ಲಿದ್ದ ಸವಣೂರು ಹೋಬಳಿ ವ್ಯಾಪ್ತಿಯ ಜನರ ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಸಂಪೂರ್ಣ ಸುಟ್ಟು ಹೋಗಿದ್ದವು.

ಹೀಗೆ ಸಿಟ್ಟಿನ ಕೈಯಲ್ಲಿ ತಮ್ಮ ಬುದ್ದಿ ಕೊಟ್ಟು ಮಾಡಿದ ಅವಾಂತರಕ್ಕೆ ಈ ಹೋಬಳಿಯ 33 ಗ್ರಾಮಗಳ ಜನರು ತಮ್ಮ ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಸಿಗದೇ ಇಂದಿಗೂ ಪರದಾಡುತ್ತಿದ್ದಾರೆ.
ಮುಖ್ಯವಾಗಿ ಇವರು ತಮ್ಮ ಜಮೀನಿನ ಮೇಲೆ ಬ್ಯಾಂಕಿನಿಂದ ಪಡೆದ ಸಾಲ ತೀರಿದ್ದರೂ ಪಹಣಿ ಪತ್ರದಲ್ಲಿ ಅದರ ಭೋಜಾ ತೆಗೆಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಬ್ಯಾಂಕಿನಲ್ಲಿ ಹೊಸ ಸಾಲ ಪಡೆಯದೇ ರೈತರು ಪರದಾಡುವಂತಾಗಿದೆ.
10 ಸಾವಿರಕ್ಕೂ ಅಧಿಕ ರೈತರ ದಾಖಲೆ ನಾಶ
ಘಟನೆಯಲ್ಲಿ ಸವಣೂರು ಕಸಬಾ ಹೋಬಳಿ ವ್ಯಾಪ್ತಿಯ 33 ಕಂದಾಯ ಗ್ರಾಮಗಳಿಗೆ ಸೇರಿದ ಸುಮಾರು 2 ಸಾವಿರಕ್ಕೂ ಹೆಚ್ಚು ಸರ್ವೇ ನಂಬರ್ ಗಳ ವ್ಯಾಪ್ತಿಯಲ್ಲಿನ 10 ಸಾವಿರಕ್ಕೂ ಹೆಚ್ಚು ರೈತರ ಜಮೀನಿನ ಮೂಲ ದಾಖಲೆಗಳು ನಾಶವಾಗಿದ್ದವು. ಇದರಿಂದಾಗಿ ಕಳೆದ 17 ವರ್ಷಗಳಿಂದ ಆ ವ್ಯಾಪ್ತಿಯ ರೈತರು ಕಂದಾಯ ಕಚೇರಿಗೆ ಅಲೆದಾಡುವುದು ತಪ್ಪಿಲ್ಲ. ಆರ್.ಟಿ.ಸಿಯಲ್ಲಿ ತಿದ್ದುಪಡಿ, ಪೋಡಿ ಮಾರ್ಪಾಟು, ಷರತ್ತು ತಿದ್ದುಪಡಿ ಯಾವುದೂ ಆಗುತ್ತಿಲ್ಲ. ಮೂಲ ಕಡತ ಇಲ್ಲದಿರುವುದರಿಂದ ತಹಸೀಲ್ದಾರ ಕಚೇರಿಯಲ್ಲಿ ಯಾವ ತಿದ್ದುಪಡಿಗೂ ಅವಕಾಶ ನೀಡದೇ ರೈತರನ್ನು ವಾಪಸ್ ಕಳುಹಿಸುತ್ತಿದ್ದಾರೆ.
ದೂರು ನೀಡಿ ಕೈ ತೊಳೆದುಕೊಂಡ ಅಧಿಕಾರಿಗಳು
ದಾಖಲೆಗಳ ಕೋಣೆಗೆ ಬೆಂಕಿ ಇಟ್ಟ ಘಟನೆ ನಡೆದು 16 ವರ್ಷವೇ ಕಳೆದಿದೆ. ಒಂದೇ ಹೋಬಳಿಗೆ ಸೇರಿದ ಕಡತಗಳು ಸುಟ್ಟಿರುವುದರಿಂದ ಘಟನೆ ಹಿಂದೆ ಯಾವುದೋ ಒಳ ಸಂಚು ಇರುವ ಶಂಕೆ ವ್ಯಕ್ತಪಡಿಸಿ ಅಧಿಕಾರಿಗಳು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಈ ಕುರಿತು ಸ್ಥಳೀಯ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ. ಆದರೆ, ಇದುವರೆಗೆ ಮುಂದಿನ ಯಾವ ಕ್ರಮವೂ ಆಗಿಲ್ಲ. ಆದರೆ, ಘಟನೆಯಲ್ಲಿ ಸಿಟ್ಟಿನ ಕೈಯಲ್ಲಿ ಬುದ್ದಿ ಕೊಟ್ಟು ದಾಖಲೆಗಳನ್ನು ಸುಟ್ಟಿದ್ದರಿಂದ ಜನ ಈಗಲೂ ಪರದಾಡುವಂತಾಗಿದೆ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications