ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕಕ್ಕೆ ಸಿಹಿಸುದ್ದಿ: ಕೊರೊನಾವೈರಸ್ ಸಾವಿನ ಸಂಖ್ಯೆ ಇಷ್ಟಾಯ್ತಾ!?

|
Google Oneindia Kannada News

ಬೆಂಗಳೂರು, ಜುಲೈ 28: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಡುತ್ತಿರುವವರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಹೊಸ ಪ್ರಕರಣಗಳ ಸಂಖ್ಯೆ 1,600ಕ್ಕೂ ಕಡಿಮೆಯಾಗಿದ್ದರೆ, ಸಾವಿನ ಸಂಖ್ಯೆ 20ಕ್ಕೂ ಕಡಿಮೆಯಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.03ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.24ರಷ್ಟಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 19 ಮಂದಿ ಕೊರೊನಾವೈರಸ್ ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36456 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ 1531 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1430 ಸೋಂಕಿತರು ಗುಣಮುಖರಾಗಿದ್ದಾರೆ.

ವಿಶೇಷ ವರದಿ: ಭಾರತದಲ್ಲಿ ಮಕ್ಕಳಿಗೆ ಯಾವಾಗ ಸಿಗುತ್ತೆ ಕೊರೊನಾವೈರಸ್ ಲಸಿಕೆ?ವಿಶೇಷ ವರದಿ: ಭಾರತದಲ್ಲಿ ಮಕ್ಕಳಿಗೆ ಯಾವಾಗ ಸಿಗುತ್ತೆ ಕೊರೊನಾವೈರಸ್ ಲಸಿಕೆ?

ಬುಧವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 2899195ಕ್ಕೆ ಏರಿಕೆಯಾಗಿದೆ. ಒಟ್ಟು 2840147 ಸೋಂಕಿತರು ಗುಣಮುಖರಾಗಿದ್ದು. 22569 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಸಿಲಿಕಾನ್ ಸಿಟಿಯಲ್ಲಿ ಕೊವಿಡ್-19 ಸೋಂಕಿತರ ಸಂಖ್ಯೆ

ಬೆಂಗಳೂರಿನಲ್ಲಿ ಕಳೆದ ಒಂದು ದಿನದಲ್ಲಿ 376 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1225957ಕ್ಕೆ ಏರಿಕೆಯಾಗಿದೆ. 3 ಮಂದಿ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 15843ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ ಜಿಲ್ಲೆಯಲ್ಲಿ 8176 ಸಕ್ರಿಯ ಪ್ರಕರಣಗಳಿವೆ.

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ರಾಜ್ಯದಲ್ಲಿ ಎಷ್ಟು ಮಂದಿಗೆ ಕೊವಿಡ್-19 ಪರೀಕ್ಷೆ?

ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕೂಡ ತಗ್ಗಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 29,795 ಮಂದಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಹಾಗೂ 1,18,524 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಒಟ್ಟು 1,48,319 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ. ರಾಜ್ಯದಲ್ಲಿ ಈವರೆಗೂ 70,51,141 ಜನರಿಗೆ ರಾಪಿಡ್ ಆಂಟಿಜೆನಿಕ್ ಟೆಸ್ಟ್ ಮಾಡಲಾಗಿದೆ. ಇದರ ಹೊರತಾಗಿ 3,11,65,767 ಮಂದಿಗೆ RT-PCR ಟೆಸ್ಟ್ ನಡೆಸಲಾಗಿದ್ದು, ಈವರೆಗೂ ಒಟ್ಟು 3,82,16,908 ಮಂದಿಗೆ ಕೊವಿಡ್-19 ಪರೀಕ್ಷೆ ನಡೆಸಲಾಗಿದೆ.

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ಜಿಲ್ಲಾವಾರು ಕೊರೊನಾವೈರಸ್ ಸೋಂಕಿತರ ಸಂಖ್ಯೆ

ರಾಜ್ಯದಲ್ಲಿ ಒಟ್ಟು 1531 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 3, ಬಳ್ಳಾರಿ 7, ಬೆಳಗಾವಿ 24, ಬೆಂಗಳೂರು ಗ್ರಾಮಾಂತರ 21, ಬೆಂಗಳೂರು 376, ಬೀದರ್ 2, ಚಾಮರಾಜನಗರ 29, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 51, ಚಿತ್ರದುರ್ಗ 18, ದಕ್ಷಿಣ ಕನ್ನಡ 337, ದಾವಣಗೆರೆ 15, ಧಾರವಾಡ 3, ಗದಗ 0, ಹಾಸನ 97, ಹಾವೇರಿ 2, ಕಲಬುರಗಿ 19, ಕೊಡಗು 78, ಕೋಲಾರ 9, ಕೊಪ್ಪಳ 0, ಮಂಡ್ಯ 38, ಮೈಸೂರು 93, ರಾಯಚೂರು 1, ರಾಮನಗರ 0, ಶಿವಮೊಗ್ಗ 86, ತುಮಕೂರು 39, ಉಡುಪಿ 109, ಉತ್ತರ ಕನ್ನಡ 57, ವಿಜಯಪುರ 4, ಯಾದಗಿರಿ 1 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.

Recommended Video

ಸೂಪರ್ CM ಟ್ಯಾಗ್ ಕಳಚಿ ಬಿದ್ದಿದ್ದಕ್ಕೆ ವಿಜಯೇಂದ್ರ ಫುಲ್ ಖುಷ್ | Oneindia Kannada
ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ರಾಜ್ಯದಲ್ಲಿ ಈವರೆಗೂ 7,58,808 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 5,38,902 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 9,14,280 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 3,27,668 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಇದರ ಹೊರತಾಗಿ 45 ವರ್ಷಕ್ಕಿಂತ ಮೇಲ್ಪಟ್ಟ 1,18,45,387 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 49,26,987 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ರಾಜ್ಯದಲ್ಲಿ ಈವರೆಗೂ 2,33,27,848 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 62,32,224 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
19 New Coronavirus Death Cases Reported in Karnataka Today, State Tally Rise to 36456.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X