ಕರ್ನಾಟಕದಾದ್ಯಂತ ಬಿಜೆಪಿಯಿಂದ 150 ನಾಯಕರೊಂದಿಗೆ 2 ದಿನಗಳ ಮಹಾಪ್ರಚಾರ
ಬೆಂಗಳೂರು, ಏಪ್ರಿಲ್ 25: ಬಿಜೆಪಿ ತನ್ನ ಎರಡು ದಿನಗಳ ಮಹಾಪ್ರಚಾರ ಅಭಿಯಾನವನ್ನು (ಮೆಗಾ ಪ್ರಚಾರ) ಏಪ್ರಿಲ್ 25 ರಂದು ಪ್ರಾರಂಭಿಸಲಿದೆ. ಇದರಲ್ಲಿ ರಾಜ್ಯ ಮತ್ತು ಕೇಂದ್ರದ 150 ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದಾರೆ, ಅವರು ಪಕ್ಷದ ಪರವಾಗಿ ಮನೆ ಮನೆಗೆ ತೆರಳಿ ಪ್ರಚಾರ ಮಾಡಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿಯಾನದಲ್ಲಿ ಎಲ್ಲಾ ಸಂಸದರು, ರಾಜ್ಯ ನಾಯಕರು ಮತ್ತು ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ, ಅವರು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋಗಳನ್ನು ನಡೆಸುವುದರ ಜೊತೆಗೆ ಪತ್ರಿಕಾಗೋಷ್ಠಿಗಳು, ಬೀದಿ ಮೂಲೆ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

ಮೇ 10 ರಂದು ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಪಕ್ಷದ ಮಹಾಪ್ರಚಾರ ಅಭಿಯಾನದಲ್ಲಿ ಪಾಲ್ಗೊಳ್ಳಲು 98 ಕೇಂದ್ರ ನಾಯಕರು ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ಅಭಿಯಾನಗಳನ್ನು ಮಾಡಲಿದ್ದಾರೆ. ನಾಯಕರು ಪ್ರಭಾವಿಗಳ ಸಣ್ಣ ಗುಂಪುಗಳು ಮತ್ತು ಬುದ್ಧಿಜೀವಿಗಳ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಕಟೀಲ್ ತಿಳಿಸಿದ್ದಾರೆ.
ಚುನಾವಣಾ ಸಹ ಪ್ರಭಾರಿ ಕೆ.ಅಣ್ಣಾಮಲೈ ಮಾತನಾಡಿ, ದಲಿತರ ಕಾಲೋನಿ, ತಾಂಡಾಗಳು, ನಾಯಕ, ಗೊಲ್ಲ, ಕುರುಬ ಹಟ್ಟಿಗಳಿಗೆ ಮುಖಂಡರು ಭೇಟಿ ನೀಡಿ ವಿವಿಧ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳದ ನಿರ್ಧಾರದಿಂದ ಆಗುವ ಪ್ರಯೋಜನಗಳ ಕುರಿತು ವಿವರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 35 ರಿಂದ 40 ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕರಾವಳಿ ಪ್ರದೇಶ, ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ತೀವ್ರ ಪ್ರಚಾರ ನಡೆಸಲಿದ್ದಾರೆ ಎಂದು ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದರೊಂದಿಗೆ ಬಿಜೆಪಿ ಸ್ಟಾರ್ ಪ್ರಚಾರಕರೂ ಆಗಿರುವ ಎಲ್ಲರೂ ಈ ಭರ್ಜರಿ ಪ್ರಚಾರ ಕೈಗೊಳ್ಳಲಿದ್ದಾರೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಂಡ್ಲುಪೇಟೆ ಹಾಗೂ ಮೈಸೂರಿನಲ್ಲಿ ಪ್ರಚಾರ ನಡೆಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ಅವರೂ ಕೂಡ ರಾಜ್ಯದ ವಿವಿಧೆಡೆ ಪ್ರಚಾರ ಕೈಗೊಳ್ಳಲಿದ್ದಾರೆ.












Click it and Unblock the Notifications