ಯಾದಗಿರಿ: ಕಾಲು ಜಾರಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವು

ಯಾದಗಿರಿ, ಮೇ 12 : ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬಿರನಕಲ್ ಗ್ರಾಮದಲ್ಲಿ ನಡೆದಿದೆ.

ಶರಣಮ್ಮ (10) ಹಾಗೂ ನಾಗಮ್ಮ (11) ಮೃತ ಬಾಲಕಿಯರು. ಬಿರನಕಲ್ ಗ್ರಾಮದ ಹೊರ ಭಾಗದಲ್ಲಿ ಬಾಲಕಿಯರು ನೀರು ಕುಡಿಯಲು ಹೊಲದಲ್ಲಿನ ಕೃಷಿ ಹೊಂಡಕ್ಕಿಳಿದಾಗ ಕಾಲು ಜಾರಿ ಬಿದ್ದು ಈ ಅವಘಡ ಸಂಭವಿಸಿದೆ. ಈ ಬಗ್ಗೆ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2 girls dies after falling into a pond in Beranakal Yadgir district

ಜೆಸಿಬಿ ಹರಿದು ಮಗು ಸಾವು: ಬಾಗಲಕೋಟೆಯ ಮುಧೋಳ ನಗರದ ಹೌಸಿಂಗ್ ಕಾಲೋನಿಯಲ್ಲಿ ಜೆಸಿಬಿ ಹರಿದು 1 ವರ್ಷ 4 ತಿಂಗಳ ಕೀರ್ತಿ ಎನ್ನುವ ಮಗು ಸಾವನ್ನಪ್ಪಿದೆ.

ಬಿಸಿಲಿನ ಝಳಕ್ಕೆ ಮರದ ಕೆಳಗೆ ಮಲಗಿಸಿದ್ದ ಸಂದರ್ಭದಲ್ಲಿ ಮಗುವಿನ ಮೇಲೆ ಜೆಸಿಬಿ ಹರಿದಿದೆ. ಈ ಬಗ್ಗೆ ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+