ಕಲಬುರಗಿ ಬಳಿ ಹಳಿ ತಪ್ಪಿದ ರೈಲು, 2 ಸಾವು

ಕಲಬುರಗಿ, ಸೆಪ್ಟೆಂಬರ್, 12 : ಮುಂಬೈಗೆ ತೆರಳುತ್ತಿದ್ದ ರೈಲು ಹಳಿ ತಪ್ಪಿ ಉರುಳಿ ಬಿದ್ದು ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಚಿತ್ತಾಪುರ ತಾಲೂಕಿನ ಮುರ್ತೂರು ಬಳಿ ನಡೆದಿದೆ. ಅಘಘಾತದಲ್ಲಿ 9 ಜನರು ಗಾಯಗೊಂಡಿದ್ದಾರೆ.

ಶನಿವಾರ ಮುಂಜಾನೆ 2.30ರ ಸುಮಾರಿಗೆ ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್ ರೈಲು ಕಲಬುರಗಿ ಜಿಲ್ಲೆಯ ಮುರ್ತೂರು ಬಳಿ ಹಳಿ ತಪ್ಪಿದ್ದರಿಂದ ಈ ಅಪಘಾತ ನಡೆದಿದೆ. ಹಳಿ ತುಂಡಾಗಿದ್ದರಿಂದ ರೈಲು ಹಳಿ ತಪ್ಪಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. [ಶಾಸಕರನ್ನು ಬಲಿ ಪಡೆದ ರೈಲು ದುರಂತದ ಚಿತ್ರಗಳು]

rail

ಈ ಅಪಘಾತದಿಂದ ನಾಲ್ಕು ಹಳಿಗಳ ರೈಲು ಸಂಚಾರಕ್ಕೆ ತೊಂದರೆ ಉಂಟಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸೊಲ್ಲಾಪುರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉರುಳಿ ಬಿದ್ದಿರುವ 9 ಬೋಗಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ. [ರೈಲ್ವೆ ಟಿಕೆಟ್ ಕನ್ ಫರ್ಮ್ ಆಗಿಲ್ಲವೇ? ಚಿಂತೆ ಬಿಡಿ]

ಈ ರೈಲು ಸಿಕಂದರಾಬಾದ್‌ನಿಂದ ಮುಂಬೈಗೆ ತೆರಳುತ್ತಿತ್ತು. ಅಪಘಾತದಲ್ಲಿ ಮೃತಪಟ್ಟವರನ್ನು ಹೈದ್ರಾಬಾದ್ ಪುಷ್ಪಲತಾ (28) ಹಾಗೂ ಜ್ಯೋತಿ (40) ಎಂದು ಗುರುತಿಸಲಾಗಿದೆ.

ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಘಟನೆ ಬಗ್ಗೆ ತನಿಖೆಗೆ ಆದೇಶ ನೀಡಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರಿಗೆ 2 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ಮತ್ತು ಚಿಕ್ಕ ಪುಟ್ಟ ಗಾಯಗಳಾದವರಿಗೆ 25 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ.

ಅಪಘಾತದ ಬಗ್ಗೆ ಮಾಹಿತಿ ಪಡೆಯಲು ಇಲಾಖೆ ಸಹಾಯವಾಣಿಯನ್ನು ಆರಂಭಿಸಿದೆ. ಕಲಬುರಗಿ ಸಹಾಯವಾಣಿ ಸಂಖ್ಯೆ 0847-2255066/2255067, ಸಿಕಂದರಾಬಾದ್ 040-27700968, ಸೊಲ್ಲಾಪುರ 0217-2313331, ಛತ್ರಪತಿ ಶಿವಾಜಿ ಟರ್ಮಿನಲ್ 022-22694040.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+