ಕೈಗಾದಲ್ಲಿ ಆರಂಭವಾಗುತ್ತೆ ಇನ್ನೆರಡು ಘಟಕ
ಕಾರವಾರ, ನ. 29: ಕೈಗಾದಲ್ಲಿ ಈಗಾಗಲೇ 4 ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಜೊತೆಗೆ ಇನ್ನೂ ಎರಡು ಘಟಕಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಕೇಂದ್ರ ಸಚಿವ ಸಂಪುಟದ ಒಪ್ಪಿಗೆಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಕೈಗಾ ಸ್ಥಾವರದ ನಿರ್ದೇಶಕ ಎಚ್.ಎನ್. ಭಟ್ ತಿಳಿಸಿದ್ದಾರೆ. [ಅಣು ಮಾಹಿತಿ ಸೋರಿಕೆಯಾಗಿಲ್ಲ]
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಈಗಿರುವ ನಾಲ್ಕು ಘಟಕಗಲಿಂದ 880 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿವೆ. ಈಗ ಸ್ಥಾಪಿಸಲು ಉದ್ದೇಶಿಸಿರುವ 5 ಮತ್ತು 6ನೇ ಘಟಕವು ತಲಾ 700 ಮೆ. ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೊಂದಿರುತ್ತವೆ ಎಂದು ತಿಳಿಸಿದರು. [ಕೈಗಾ ಭಯ ಬೇಡ]

ಈಗಿರುವ 1 ಮತ್ತು 2ನೇ ಘಟಕದಲ್ಲಿ ಶೇ. 95ರಷ್ಟು ಹಾಗೂ 3 ಮತ್ತು 4ನೇ ಘಟಕದಲ್ಲಿ ಶೇ. 88ರಷ್ಟು ವಿದ್ಯುತ್ ಉತ್ಪಾದನೆಯಾಗುತ್ತಿದೆ. ಇದರಲ್ಲಿ ಕರ್ನಾಟಕಕ್ಕೆ ಶೇ. 28ರಷ್ಟು ವಿದ್ಯುತ್ ಸಿಗುತ್ತಿದೆ. ಆದರೆ, ಈಗ ಜಾರಿಗೆ ಬಂದಿರುವ ಹೊಸ ನೀತಿಯಂತೆ 5 ಮತ್ತು 6ನೇ ಘಟಕದಲ್ಲಿ ಉತ್ಪಾದನೆಯಾಗುವ ವಿದ್ಯುತ್ನಲ್ಲಿ ಶೇ. 50ರಷ್ಟು ರಾಜ್ಯಕ್ಕೇ ಸಿಗಲಿದೆ ಎಂದು ತಿಳಿಸಿದರು. [ವಿದ್ಯುತ್ ಹಂಚಿಕೆ ಅನ್ಯಾಯ: ಎಚ್ಚರಿಕೆ]
ನೂತನ ಘಟಕಗಳ ಆರಂಭಕ್ಕೆ ಅಗತ್ಯ ಭೂಮಿ ಹಾಗೂ ಮೂಲಸೌಕರ್ಯಗಳು ಲಭ್ಯವಿದೆ. ಪುನರ್ವಸತಿ ಸಮಸ್ಯೆ ಇಲ್ಲ. ಆದ್ದರಿಂದ 2015ರಲ್ಲಿ ಘಟಕಗಳ ನಿರ್ಮಾಣಕ್ಕೆ ಮಣ್ಣು ಪರೀಕ್ಷೆ ನಡೆಸುವ ಉದ್ದೇಶವಿದೆ. 8ರಿಂದ 10 ಸಾವಿರ ಕೋಟಿ ರೂ. ವೆಚ್ಚವಾಗುವ ನಿರೀಕ್ಷೆಯಿದೆ ಎಂದರು.
ಕ್ಯಾನ್ಸರ್ನಿಂದ 10 ಜನರ ಸಾವು: ಕೈಗಾ ಕೇಂದ್ರದ ಮುಖ್ಯ ಆರೋಗ್ಯ ತಜ್ಞ ಆರ್.ಟಿ. ಸ್ಕಾಚಡೋ ಮಾತನಾಡಿ, ಇಲ್ಲಿನ ಜನರ ಆರೋಗ್ಯದ ಅಧ್ಯಯನವನ್ನು ಟಾಟಾ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ಸಂಸ್ಥೆ ನಡೆಸುತ್ತಿದೆ. 1998-99ರಲ್ಲಿ ಕೈಗಾ ಕೇಂದ್ರದ ಸುತ್ತಲಿನ 43 ಹಳ್ಳಿಗಳಲ್ಲಿ ಕೇವಲ 10 ಜನ ಕ್ಯಾನ್ಸರ್ನಿಂದ ಮೃತಪಟ್ಟಿದ್ದಾರೆ. ಈ ಪೈಕಿ ನಾಲ್ವರಿಗೆ ವಂಶಪಾರಂಪರ್ಯದಿಂದ ಕ್ಯಾನ್ಸರ್ ಬಂದಿತ್ತು. ಇನ್ನೂ 57 ಅನುಮಾನಾಸ್ಪದ ಪ್ರಕರಣಗಳು ಪತ್ತೆಯಾಗಿವೆ. 111 ಗರ್ಭಪಾತಗಳು ಸಂಭವಿಸಿವೆ ಎಂದು ವಿವರಿಸಿದರು. [ಕೈಗಾ ಸ್ಥಾವರದ ಕುಡಿಯುವ ನೀರಲ್ಲಿ ವಿಷ]
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications