ಶನಿವಾರ ಸಂಪುಟ ವಿಸ್ತರಣೆ : ಎಚ್ಡಿಕೆ ಸಂಪುಟ ಸೇರಲಿದ್ದಾರೆ 20 ಶಾಸಕರು
ಬೆಂಗಳೂರು, ಜೂನ್ 01 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಯಾಗಿದೆ. ಶನಿವಾರ ಸಂಪುಟ ವಿಸ್ತರಣೆ ನಡೆಯಲಿದ್ದು, ರಾಜಭವನದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಸಚಿವ ಸಂಪುಟ ರಚನೆ: ಇಂದು ಅಂತಿಮ ನಿರ್ಧಾರ
ಮೊದಲ ಹಂತದ ಸಂಪುಟ ವಿಸ್ತರಣೆಯಲ್ಲಿ ಕಾಂಗ್ರೆಸ್ನ 12, ಜೆಡಿಎಸ್ನ 8 ಶಾಸಕರು ಕುಮಾರಸ್ವಾಮಿ ಸಂಪುಟ ಸೇರಲಿದ್ದಾರೆ. ಶುಕ್ರವಾರ ಮಧ್ಯಾಹ್ನ ಎಚ್.ಡಿ.ಕುಮಾರಸ್ವಾಮಿ ರಾಜ್ಯಪಾಲರನ್ನು ಭೇಟಿ ಮಾಡಲಿದ್ದು, ನೂತನ ಸಚಿವರ ಪಟ್ಟಿಯನ್ನು ನೀಡಲಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಸಂಪುಟ : ಯಾವ ಖಾತೆ ಯಾರಿಗೆ?
ಖಾತೆಗಳ ಹಂಚಿಕ ಬಗ್ಗೆ ಇದ್ದ ಗೊಂದಲ ನಿವಾರಣೆಯಾಗಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ನಿವಾಸದಲ್ಲಿ ಇಂದು 12 ಗಂಟೆಗೆ ಅಂತಿಮ ಸುತ್ತಿನ ಸಭೆ ನಡೆಯಲಿದೆ. ಕುಮಾರಸ್ವಾಮಿ, ಜಿ.ಪರಮೇಶ್ವರ, ಕೆ.ಸಿ.ವೇಣುಗೋಪಾಲ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾನೂ ಸಚಿವ ಸ್ಥಾನದ ಆಕಾಂಕ್ಷಿ: ಹೊಸ ಬಾಂಬ್ ಎಸೆದ ಹಿಟ್ನಾಳ್
ಯಾವ ಪಕ್ಷಕ್ಕೆ ಯಾವ ಖಾತೆ : ಕಾಂಗ್ರೆಸ್-ಜೆಡಿಎಸ್ ನಡುವೆ ಖಾತೆ ಹಂಚಿಕೆಯೂ ಅಂತಿಮಗೊಂಡಿದೆ. ಹಣಕಾಸು ಸೇರಿದಂತೆ ಪ್ರಮುಖ ಖಾತೆಗಳನ್ನು ಜೆಡಿಎಸ್ಗೆ ಬಿಟ್ಟಕೊಡಲಾಗಿದೆ. ಗೃಹ ಖಾತೆ ಕಾಂಗ್ರೆಸ್ ಪಕ್ಷದ ಪಾಲಾಗಲಿದೆ.
ಜೆಡಿಎಸ್ : ಹಣಕಾಸು, ಇಂಧನ, ಲೋಕೋಪಯೋಗಿ, ಸಹಕಾರ, ಅಬಕಾರಿ ಸೇರಿದಂತೆ ಪ್ರಮುಖ ಖಾತೆಗಳನ್ನು ತನ್ನ ಬಳಿ ಇಟ್ಟುಕೊಂಡಿದೆ.
ಕಾಂಗ್ರೆಸ್ : ಗೃಹ, ಕಂದಾಯ, ಆರೋಗ್ಯ, ಪಂಚಾಯತ್ ರಾಜ್, ಜಲಸಂಪನ್ಮೂಲ, ವಸತಿ, ಗಣಿ, ಕೃಷಿ, ಸಮಾಜ ಕಲ್ಯಾಣ ಖಾತೆಗಳು ಕಾಂಗ್ರೆಸ್ ಪಾಲಾಗಲಿವೆ.
ಎಚ್.ಡಿ.ದೇವೇಗೌಡರ ಪದ್ಮನಾಭನಗರ ನಿವಾಸದಲ್ಲಿ 12 ಗಂಟೆಗೆ ಕಾಂಗ್ರೆಸ್-ಜೆಡಿಎಸ್ ನಾಯಕರ ಸಭೆ ನಡೆಯಲಿದ್ದು, ಸಭೆಯಲ್ಲಿ ಖಾತೆ, ಸಂಪುಟ ಸೇರುವವರ ಪಟ್ಟಿ ಅಂತಿಮಗೊಳ್ಳಲಿದೆ. ಮಧ್ಯಾಹ್ನ ರಾಜ್ಯಪಾಲರನ್ನು ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಸಚಿವರ ಪಟ್ಟಿಯನ್ನು ನೀಡಲಿದ್ದಾರೆ.