ದೊಡ್ಡಬಳ್ಳಾಪುರದಲ್ಲಿ 20 ವರ್ಷದ ಯುವತಿ ಮೇಲೆ ಅತ್ಯಾಚಾರ, ಕೊಲೆ
ದೊಡ್ಡಬಳ್ಳಾಪುರ, ಮಾರ್ಚ್ 13 : ಮದುವೆಯಾಗುವುದಾಗಿ ಯುವತಿಯನ್ನು ನಂಬಿಸಿ, ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಪಚ್ಚಾರಲಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಗೀತಾ (20) ಎಂಬ ಯುವತಿ ಮೇಲೆ ಅದೇ ಗ್ರಾಮದ ಜಯರಾಮ್(30) ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದಾನೆ. ಗೀತಾ ದ್ವಿತೀಯ ಪಿಯುಸಿ ಮುಗಿಸಿದ್ದು ಗೀತಾ ಮನೆಯಲ್ಲಿದ್ದಳು.
ತನ್ನನ್ನು ಪ್ರೀತಿಸುವಂತೆ ಜಯರಾಮ್ ಗೀತಾಳ ಬೆನ್ನು ಬಿದ್ದಿದ್ದ. ಪದೇ-ಪದೇ ಗೀತಾಳ ಮನೆ ಬಳಿಗೆ ಬಂದು ಹೋಗುತ್ತಿದ್ದ. ಜಯರಾಮ್ಗೆ ಮದುವೆ ಆಗಿ ಇಬ್ಬರು ಮಕ್ಕಳು ಇದ್ದಾರೆ. ಗೀತಾ ಮನೆಯವರು ಸಹ ಜಯರಾಮ್ಗೆ ಎರಡು ಬಾರಿ ಎಚ್ಚರಿಕೆ ನೀಡಿದ್ದರು.

ಆರಂಭದಲ್ಲಿ ಗೀತಾ ಜಯರಾಮ್ ಮಾತುಗಳನ್ನು ನಂಬಿರಲಿಲ್ಲ. ನಂತರ ದಿನಗಳಲ್ಲಿ ಆತನ ಬಣ್ಣದ ಮಾತಿಗೆ ಮರುಳಾಗಿದ್ದಾಳೆ. ಶನಿವಾರ ರಾತ್ರಿ ಗೀತಾಳನ್ನು ಯಾರಿಗೂ ತಿಳಿಯದಂತೆ ಜಯರಾಮ್ ಮನೆಯಿಂದ ಕರೆದುಕೊಂಡು ಹೋಗಿದ್ದಾನೆ.
ಊರಿನ ಹೊರವಲಯದ ಗುಡಿಸಿಲಿಗೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ನಮ್ಮ ಪ್ರೀತಿಗೆ ಮನೆಯವರ ಒಪ್ಪಿಗೆ ಇಲ್ಲ, ನಾವಿಬ್ಬರೂ ಸಾಯೋಣ ಎಂದು ಗೀತಾಳಿಗೆ ಮೊದಲು ವಿಷದ ಮಾತ್ರೆ ತಿನ್ನಿಸಿದ್ದಾನೆ.
ಗೀತಾ ಪ್ರಜ್ಞೆ ತಪ್ಪುತ್ತಿದ್ದಂತೆ ಜಯರಾಮ್ ಅಲ್ಲಿಂದ ಪರಾರಿಯಾಗಿದ್ದಾನೆ. ಬೆಳಗ್ಗೆ ಗೀತಾಳನ್ನು ನೋಡಿದ ಜನರು ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗೀತಾ ಮೃತಪಟ್ಟಿದ್ದಾಳೆ.
ಗೀತಾ ಪೋಷಕರು ಜಯರಾಮ್ ವಿರುದ್ಧ ಅತ್ಯಾಚಾರ ಮತ್ತು ಕೊಲೆ ದೂರು ನೀಡಿದ್ದರು. ಆದರೆ, ಪೊಲೀಸರು ಇದು ಅಸಹಜ ಸಾವು ಎಂದು ಪ್ರಕರಣ ದಾಖಲು ಮಾಡಿಕೊಂಡು ಸುಮ್ಮನಾಗಿದ್ದರು. ಪೋಷಕರು ಕೊಲೆ ಪ್ರಕರಣ ದಾಖಲು ಮಾಡುವ ತನಕ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ಜನರ ಮತ್ತು ಪೋಷಕರ ಒತ್ತಾಯಕ್ಕೆ ಮಣಿದ ಪೊಲೀಸರು ಜಯರಾಮ್ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಮಗಳನ್ನು ಶ್ರೀಮಂತ ವರನಿಗೆ ಕೊಟ್ಟು ಮದುವೆ ಮಾಡಬೇಕು ಎಂದು ಕನಸು ಕಂಡಿದ್ದ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications