ಹೊಸಕೋಟೆ ವೊಲ್ವೋ ಘಟಕ ವಿಸ್ತರಣೆ, 2 ಸಾವಿರ ಉದ್ಯೋಗ ಸೃಷ್ಟಿ
ಬೆಂಗಳೂರು, ಜುಲೈ 14 : ಹೊಸಕೋಟೆಯಲ್ಲಿರುವ ವೊಲ್ವೋ ಘಟಕ ವಿಸ್ತರಣೆಯಾಗಲಿದ್ದು, ಇದರಿಂದ ಸುಮಾರು 2000 ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಘಟಕದಲ್ಲಿ ಉತ್ಪಾದನೆಯಾದ ಬಸ್ಸುಗಳನ್ನು ಯುರೋಪ್ಗೆ ಕಳುಹಿಸಲು ವೊಲ್ವೋ ಸಿದ್ಧತೆ ನಡೆಸಿದೆ.
ಮಂಗಳವಾರ ವಿಧಾನಸೌಧದಲ್ಲಿ ವೊಲ್ವೋ ಕಾರ್ಪೊರೇಷನ್ ಅಧ್ಯಕ್ಷ ಕಾಕನ್ ಅಗ್ನೇವಾಲ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹೊಸಕೋಟೆಯ ವೊಲ್ವೋ ಘಟಕ ವಿಸ್ತರಣೆ ಬಗ್ಗೆ ಮಾತುಕತೆ ನಡೆಸಿದರು. ಸ್ವಿಡನ್ಗೆ ಬರುವಂತೆ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದರು. [ಬೆಂಗಳೂರು ರಸ್ತೆಗಿಳಿದ ಯುಡಿ ವೋಲ್ವೊ ಬಸ್ ವಿಶೇಷತೆ ಏನು?]

ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ಸಿದ್ದರಾಮಯ್ಯ ಅವರು, 'ಹೊಸಕೋಟೆಯಲ್ಲಿ 150 ಎಕರೆ ಪ್ರದೇಶದಲ್ಲಿ ವೊಲ್ವೋ ಘಟಕವಿದೆ. ಇದನ್ನು ಇನ್ನೂ 90 ಎಕರೆಗೆ ವಿಸ್ತರಣೆ ಮಾಡಲು ಕಂಪನಿ ಸಿದ್ಧತೆ ನಡೆಸಿದೆ. ಇಲ್ಲಿ ಉತ್ಪಾದನೆಯಾದ ಬಸ್ಸುಗಳನ್ನು ಯುರೋಪ್ಗೆ ರಫ್ತು ಮಾಡಲಾಗುತ್ತದೆ' ಎಂದು ಹೇಳಿದರು. [ಐರಾವತ ಡೈಮಂಡ್ ಕ್ಲಾಸ್ ಬಸ್ ಹೇಗಿದೆ?]
975 ಕೋಟಿ ವೆಚ್ಚದಲ್ಲಿ ಘಟಕವನ್ನು ವೊಲ್ವೋ ವಿಸ್ತರಣೆ ಮಾಡುತ್ತಿದೆ. ಘಟಕ ವಿಸ್ತರಣೆಗೊಂಡರೆ 2125 ಜನರಿಗೆ ಉದ್ಯೋಗ ದೊರೆಯಲಿದೆ. ಸರ್ಕಾರ ಘಟಕವನ್ನು ವಿಸ್ತರಣೆ ಮಾಡಲು ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ಜುಲೈ 21ರಂದಯ ಯುರೋಪ್ಗೆ ವೊಲ್ವೋ ತನ್ನ ಮೊದಲ ಬಸ್ಅನ್ನು ಕಳುಹಿಸುತ್ತಿದೆ. ಸ್ವಿಡನ್ಗೆ ಬರುವಂತೆ ಅವರು ಆಹ್ವಾನ ನೀಡಿದ್ದಾರೆ. ಆಗಸ್ಟ್ ನಂತರ ಈ ಕುರಿತು ತೀರ್ಮಾನ ಕೈಗೊಳ್ಳುತ್ತೇನೆ. ಸರ್ಕಾರ ನಡೆಸಲು ಉದ್ದೇಶಿಸಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ವೋಲ್ವೊ ಮುಖ್ಯಸ್ಥರಿಗೆ ಆಹ್ವಾನ ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್












Click it and Unblock the Notifications