2011ನೇ ಸಾಲಿನ ಕೆಎಎಸ್ ಅಧಿಕಾರಿಗಳ ನೇಮಕ; ಕೆಎಟಿಯಲ್ಲಿ ಮಾ.28ಕ್ಕೆ ವಿಚಾರಣೆ
ಬೆಂಗಳೂರು ಮಾ.26: 2011ನೇ ಸಾಲಿನ ಕೆಎಎಸ್ ನೇಮಕದಲ್ಲಿ 362 ಅಭ್ಯರ್ಥಿಗಳ ಆಯ್ಕೆ ಸಿಂಧುಗೊಳಿಸುವ ಸಂಬಂಧ ಕಾಯಿದೆ ಜಾರಿಗೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳು ಸೋಮವಾರ (ಮಾ.28) ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ) ಮುಂದೆ ವಿಚಾರಣೆಗೆ ಬರಲಿವೆ.
ಆ ಹಿನ್ನೆಲೆಯಲ್ಲಿ ಹೈಕೋರ್ಟ್ ಶುಕ್ರವಾರ ಈ ಹಿಂದೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಏ.4ರವರೆಗೆ ವಿಸ್ತರಣೆ ಮಾಡಿ ಮೌಖಿಕ ಆದೇಶವನ್ನು ನೀಡಿದೆ. ಈಗಾಗಲೇ ಎರಡು ಸುತ್ತಿನ ಕಾನೂನು ಸಮರ ಮುಗಿಸಿರುವ ವಿವಾದ, ಇದೀಗ ಮೂರನೇ ಸುತ್ತಿನ ಹೋರಾಟ ನಡೆಯುತ್ತಿದೆ.
ಕೆಎಟಿ ಮಧ್ಯಂತರ ಆದೇಶ ನೀಡಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಎ.ಟಿ.ಶ್ರೀನಿವಾಸ್ ಮತ್ತಿತರರು ಸಲ್ಲಿಸಿದ್ದ ಅರ್ಜಿ ನ್ಯಾ.ಜಿ.ನರೇಂದರ್ ಮತ್ತು ನ್ಯಾ.ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತು.

ಆಗ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಸರ್ಕಾರದ ಪರ ವಾದ ಮಂಡಿಸಿದ ಇದೇ ವಿಚಾರದ ಅರ್ಜಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ) ಮುಂದೆ ಇದ್ದು, ಅಲ್ಲಿ ಸೋಮವಾರ ವಿಚಾರಣೆಗೆ ಬರಲಿವೆ. ಹಾಗಾಗಿ ಇಲ್ಲಿ ಮತ್ತೆ ಅದೇ ವಿಚಾರದ ವಿಚಾರಣೆ ಸರಿಯಲ್ಲ. ಮೊದಲು ಕೆಎಟಿ ಅರ್ಜಿಗಳನ್ನು ತೀರ್ಮಾನಿಸಲಿ, ಆನಂತರ ಹೈಕೋರ್ಟ್ ಆ ಬಗ್ಗೆ ವಿಚಾರಣೆ ಕೈಗೆತ್ತಿಕೊಳ್ಳುವುದು ಸೂಕ್ತ ಎಂದರು.
ಅದನ್ನು ಮಾನ್ಯ ಮಾಡಿದ ನ್ಯಾಯಪೀಠ, ಕೆಎಟಿಯಲ್ಲಿ ಸೋಮವಾರ(ಮಾ.28)ವಿಚಾರಣೆ ಆರಂಭವಾಗಲಿದ್ದು,ಅದು ಮಧ್ಯಂತರ ಆದೇಶದ ಬಗ್ಗೆ ನಿರ್ಧರಿಸುವವರೆಗೆ ಸರ್ಕಾರ ಆಯ್ಕೆಯಾಗಿದ್ದಾರೆಂದು ಪರಿಗಣಿಸಲಾಗಿರುವ ಅಭ್ಯರ್ಥಿಗಳಿಗೆ ನೇಮಕ ಪತ್ರ ವಿತರಿಸಬಾರದು, ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಮೌಖಿಕ ಸೂಚನೆಯನ್ನೂ ನೀಡಿ ವಿಚಾರಣೆಯನ್ನು ಏ.4ಕ್ಕೆ ಮುಂದೂಡಿತು.
"ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ಅರ್ಜಿದಾರರು ಕೋರಿರುವಂತೆ ಸಂಬಂಧಿಸಿದ ಎಲ್ಲ ವಾದಿಗಳು-ಪ್ರತಿವಾದಿಗಳ ವಾದ ಆಲಿಸಿ ಬಳಿಕ ಸೂಕ್ತ ರೀತಿಯಲ್ಲಿ ಪರಿಶೀಲಿಸಿ ಮಧ್ಯಂತರ ಆದೇಶ ಹೊರಡಿಸಬೇಕು"ಎಂದು ನಿರ್ದೇಶನ ನೀಡಿತು.
ಅಲ್ಲಿಯವರೆಗೆ ಕರ್ನಾಟಕ ಸಿವಿಲ್ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ಕಾಯಿದೆ ಜಾರಿಗೆ ಸಂಬಂಧಿಸಿದಂತೆ ನೀಡಿರುವ ಮಧ್ಯಂತರ ತಡೆ ಮುಂದುವರಿಸಲಾಗುವುದು. ಸರ್ಕಾರ ಯಾವುದೇ ಅಭ್ಯರ್ಥಿಗಳಿಗೆ ನೇಮಕ ಪತ್ರಗಳನ್ನು ನೀಡಬಾರದು ಎಂದು ಮೌಖಿಕವಾಗಿ ಸೂಚಿಸಿತು.
ಅರ್ಜಿದಾರರ ಆಕ್ಷೇಪವೇನು?
ಅರ್ಜಿದಾರರು, ಸಿಐಡಿ ವರದಿ ಆಧರಿಸಿ ಹೈಕೋರ್ಟ್ ನೇಮಕ ರದ್ದುಗೊಳಿಸಿತ್ತು. ಅದನ್ನು ಸುಪ್ರೀಂಕೋಟ್ ಕೂಡ ಎತ್ತಿಹಿಡಿದಿದೆ. ಆದರೂ ಸಹ ನ್ಯಾಯಾಲಯ ಆದೇಶವನ್ನು ಬದಿಗೊತ್ತಿ 362 ಅಭ್ಯರ್ಥಿಗಳ ಅಕ್ರಮ ನೇಮಕ ಸಕ್ರಮಗೊಳಿಸಲು ರೂಪಿಸಿರುವ ಕಾಯಿದೆ ಕಾನೂನು ಬಾಹಿರವಾದುದು. ಹಾಗಾಗಿ ರದ್ದುಗೊಳಿಸಬೇಕು ಎಂದು ಕೋರಿದ್ದಾರೆ.
ನೇಮಕ ಸಿಂಧುಗೊಳಿಸುವ ಸರಕಾರದ ಕ್ರಮ ಪ್ರಶ್ನಿಸಿ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲೂ ಅರ್ಜಿ ಸಲ್ಲಿಸಲಾಗಿತ್ತು, ಕೆಎಟಿ ಯಾವುದೇ ಮಧ್ಯಂತರ ಆದೇಶ ನೀಡದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು.
ಪ್ರಕರಣದ ಹಿನ್ನೆಲೆ:
ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗೆ 201ರಲ್ಲಿ ನಡೆಸಿದ್ದ ಪರೀಕ್ಷೆಯಲ್ಲಿ ಅಂತಿಮ ಪಟ್ಟಿಯಲ್ಲಿದ್ದ 363 ಅಭ್ಯರ್ಥಿಗಳ ಆಯ್ಕೆ ಸಿಂಧುಗೊಳಿಸಿ ನೇಮಕ ಆದೇಶ ನೀಡುವ ಸಂಬಂಧ ಕರ್ನಾಟಕ ಸಿವಿಲ್ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ವಿಧೇಯಕಕ್ಕೆ ರಾಜ್ಯಪಾಲರು ಕಳೆದ ವಾರ ಅಂಕಿತ ಹಾಕಿದ್ದರು.
ಯಾವುದೇ ನ್ಯಾಯಾಲಯ, ನ್ಯಾಯಮಂಡಳಿ ಅಥವಾ ಪ್ರಾಕಾರದ ಯಾವುದೇ ತೀರ್ಪು, ಡಿಕ್ರಿ ಇಲ್ಲವೇ ಆದೇಶದಲ್ಲಿ ಅ'ರ್ಥಿಗಳ ಅಂತಿಮ ಆಯ್ಕೆ ವಿರುದ್ಧವಾಗಿ ಏನೇ ಒಳಗೊಂಡಿದ್ದರೂ ಅಭ್ಯರ್ಥಿಗಳ ಯಾವುದೇ ಲೋಪಗಳಿಲ್ಲದ ಕಾರಣಕ್ಕೆ ನ್ಯಾಯ ಒದಗಿಸಲು ಸರ್ಕಾರ ನಿರ್ಧರಿಸಿತ್ತು. ಕಳೆದ ಫೆಬ್ರವರಿಯಲ್ಲಿ ವಿಧಾನಮಂಡಲದ ಉಭಯ ಸದನಗಳಲ್ಲಿ ವಿಧೇಯಕಕ್ಕೆ ಅನುಮೋದನೆ ಪಡೆದಿತ್ತು.
Recommended Video
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications