ಲೋಕಸಭಾ ಚುನಾವಣೆ 2019 : ಕರ್ನಾಟಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ
ಬೆಂಗಳೂರು, ಮಾರ್ಚ್ 21 : 2019ರ ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ಸಿಕ್ಕಿದೆ.
ಬಿಜೆಪಿ ನಾಯಕ ಜೆ.ಪಿ.ನಡ್ಡಾ ಅವರು ಗುರುವಾರ ಸಂಜೆ 182 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು. ಕರ್ನಾಟಕದ 21 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಹಾಲಿ ಸಂಸದರಿಗೆ ಬಿಜೆಪಿ ಈ ಬಾರಿಯೂ ಟಿಕೆಟ್ ನೀಡಿದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಶೋಭಾ ಕರಂದ್ಲಾಜೆ, ದಕ್ಷಿಣ ಕನ್ನಡದಿಂದ ನಳೀನ್ ಕುಮಾರ್ ಕಟೀಲ್ ಅಭ್ಯರ್ಥಿಯಾಗಿದ್ದಾರೆ. ಬೆಂಗಳೂರು ಉತ್ತರದಲ್ಲಿ ಡಿ.ವಿ.ಸದಾನಂದ ಗೌಡ, ಬೆಂಗಳೂರು ಕೇಂದ್ರದಲ್ಲಿ ಪಿ.ಸಿ.ಮೋಹನ್ ಅಭ್ಯರ್ಥಿಗಳು.
ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಚಿಕ್ಕೋಡಿ, ಕೋಲಾರ, ರಾಯಚೂರು, ಕೊಪ್ಪಳ, ಮಂಡ್ಯ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಚಿಂಚೋಳಿ ಶಾಸಕ ಡಾ.ಉಮೇಶ್ ಜಾಧವ್, ಮಾಜಿ ಸಚಿವ ಎ.ಮಂಜು ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ಬಿಜೆಪಿ ಪಟ್ಟಿ
* ಬೆಳಗಾವಿ - ಸುರೇಶ್ ಅಂಗಡಿ
* ಬಾಗಲಕೋಟೆ - ಪಿ.ಸಿ.ಗದ್ದಿಗೌಡರ್
* ವಿಜಯಪುರ - ರಮೇಶ್ ಜಿಗಜಿಣಗಿ
* ಕಲಬುರಗಿ - ಡಾ.ಉಮೇಶ್ ಜಾಧವ್

ಕರ್ನಾಟಕ ಬಿಜೆಪಿ ಪಟ್ಟಿ
* ಬೀದರ್ - ಭಗವಂತ ಖೂಬಾ
* ಬಳ್ಳಾರಿ - ದೇವೇಂದ್ರಪ್ಪ
* ಹಾವೇರಿ - ಶಿವಕುಮಾರ್ ಉದಾಸಿ
* ಧಾರವಾಡ - ಪ್ರಹ್ಲಾದ್ ಜೋಶಿ

ಬಿಜೆಪಿ ಅಭ್ಯರ್ಥಿಗಳು
* ಉತ್ತರ ಕನ್ನಡ - ಅನಂತ್ ಕುಮಾರ್ ಹೆಗಡೆ
* ದಾವಣಗೆರೆ - ಜಿ.ಎಂ.ಸಿದ್ದೇಶ್ವರ್
* ಶಿವಮೊಗ್ಗ - ಬಿ.ವೈ.ರಾಘವೇಂದ್ರ
* ಉಡುಪಿ-ಚಿಕ್ಕಮಗಳೂರು - ಶೋಭಾ ಕರಂದ್ಲಾಜೆ

ಯಾರು ಅಭ್ಯರ್ಥಿಗಳು
* ಹಾಸನ - ಎಂ.ಮಂಜು
* ದಕ್ಷಿಣ ಕನ್ನಡ - ನಳೀನ್ ಕುಮಾರ್ ಕಟೀಲ್
* ಚಿತ್ರದುರ್ಗ - ಎ.ನಾರಾಯಣಸ್ವಾಮಿ
* ತುಮಕೂರು - ಜಿ.ಎಸ್.ಬಸವರಾಜ್

ಬೆಂಗಳೂರು, ಮೈಸೂರು
* ಮೈಸೂರು-ಕೊಡಗು : ಪ್ರತಾಪ್ ಸಿಂಹ
* ಬೆಂಗಳೂರು ಉತ್ತರ : ಡಿ.ವಿ.ಸದಾನಂದ ಗೌಡ
* ಬೆಂಗಳೂರು ಕೇಂದ್ರ : ಪಿ.ಸಿ.ಮೋಹನ್
* ಚಿಕ್ಕಬಳ್ಳಾಪುರ - ಬಿ.ಎನ್.ಬಚ್ಚೇಗೌಡ
* ಚಾಮರಾಜನಗರ - ವಿ.ಶ್ರೀನಿವಾಸ ಪ್ರಸಾದ್
-
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ಇನ್ಮುಂದೆ KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಕೃಷ್ಣ ಬೈರೇಗೌಡ ಸ್ಪಷ್ಟನೆ -
ಔಷಧಿ ಪೂರೈಸುವ ಕೆಸ್ಎಂಸಿಎಲ್ಗೆ ಐಎಎಸ್ ಅಧಿಕಾರಿ ಮುಖ್ಯಸ್ಥ, ಇ-ಔಷಧಿ ಸಾಫ್ಟವೇರ್ ಜಾರಿ: ದಿನೇಶ್ ಗುಂಡೂರಾವ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ












Click it and Unblock the Notifications