ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಶುಲ್ಕದಲ್ಲಿ ಗೊಂದಲ ನಿರ್ಮಾಣ!

ಬೆಂಗಳೂರು, ಜೂ. 10: ರಾಜ್ಯದಲ್ಲಿ ಶಾಲಾ ಶುಲ್ಕದ ವಿಚಾರದಲ್ಲಿ ಮತ್ತೊಮ್ಮೆ ಗೊಂದಲ ಏರ್ಪಟ್ಟಿದೆ. 2021-22 ನೇ ಶೈಕ್ಷಣಿಕ ಸಾಲಿನ ದಾಖಲಾತಿ ಪ್ರಕ್ರಿಯೆ ಜೂ. 14 ರಿಂದ ನಡೆಸಲು ಶಿಕ್ಷಣ ಇಲಾಖೆ ಆದೇಶಿಸಿದೆ. ಇದೀಗ ಖಾಸಗಿ ಶಾಲೆಗಳಲ್ಲಿ ಅದಾಗಲೇ ದಾಖಲಾತಿ ಪ್ರತಿಕ್ರಿಯೆ ಆರಂಭವಾಗಿದೆ. ಹಳೇ ಶುಲ್ಕದ ಗೊಂದಲದ ನಡುವೆ ಇದೀಗ ನೂತನ ಶೈಕ್ಷಣಿಕ ವರ್ಷದ ಶಾಲಾ ಶುಲ್ಕದಲ್ಲಿ ಪೋಷಕರು ಹಾಗೂ ಶಾಲೆಗಳ ನಡುವೆ ತಿಕ್ಕಾಟ ಏರ್ಪಟ್ಟಿದೆ.

ಕೋವಿಡ್ 19 ಹಿನ್ನೆಲೆಯಲ್ಲಿ ಶಾಲಾ ಶುಲ್ಕದಲ್ಲಿ ಶೇ. 30 ರಷ್ಟು ಕಡಿತಗೊಳಿಸಬೇಕು ಎಂದು ಶಿಕ್ಷಣ ಸಚಿವರು ಆದೇಶಿಸಿದ್ದರು. ಶಿಕ್ಷಣ ಇಲಾಖೆಯ ಈ ಆದೇಶವನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗಿವೆ. ಪರಿಸ್ಥಿತಿ ಹೀಗಿರುವವಾಗಲೇ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಸಹ ಶೇ. 30 ರಷ್ಟು ಕಡಿಮೆ ಮಾಡಬೇಕಾ? ಬೇಡವೇ? ಎಂಬುದರ ಬಗ್ಗೆ ಮತ್ತೆ ವಿವಾದ ಏರ್ಪಟ್ಟಿದೆ. ಕಳೆದ ವರ್ಷದಂತೆ ಈ ವರ್ಷವೂ ಶಾಲಾ ಶುಲ್ಕದಲ್ಲಿ ಶೇ. 30 ರಷ್ಟು ಕಡಿಮೆ ಮಾಡಲಾಗಿದೆ ಎಂದು ಅಧಿಕಾರಿಗಳು ನೀಡುತ್ತಿರುವ ಹೇಳಿಕೆಗಳ ಬಗ್ಗೆ ಖಾಸಗಿ ಶಾಲಾ ಆಡಳಿತ ಮಂಡಳಿಗಳು ತಿರುಗಿ ಬಿದ್ದಿವೆ. ಮಾತ್ರವಲ್ಲ, ಶಾಲೆ ಆಡಳಿತ ಮಂಡಳಿಗಳ ಮೇಲೆ ಒತ್ತಡ ಹಾಕುತ್ತಿರುವ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘಟನೆಗಳು ಶಿಕ್ಷಣ ಸಚಿವರಿಗೆ ದೂರು ನೀಡಿವೆ. ಈ ಎಲ್ಲಾ ಬೆಳವಣಿಗೆ ರಾಜ್ಯದಲ್ಲಿ ಮತ್ತೆ ಶಾಲಾ ಶುಲ್ಕದಲ್ಲಿ ಗೊಂದಲ ಸೃಷ್ಟಿಸುವ ವಾತಾವರಣ ನಿರ್ಮಾಣವಾಗಿದೆ.

ಶಾಲೆಗಳ ಮುಂದೆ ಗಲಾಟೆ

ಶಾಲೆಗಳ ಮುಂದೆ ಗಲಾಟೆ

ಬೆಂಗಳೂರಿನ ಶಿವಾನಂದ ವೃತ್ತದಲ್ಲಿರುವ ಸಿಂಧಿ ಶಾಲೆಯ ಮುಂದೆ ಜಮಾಯಿಸಿದ ನೂರಾರು ಪೋಷಕರು ಈ ವರ್ಷದಲ್ಲೂ ಶೇ. 30 ರಷ್ಟು ಕಡಿತ ಮಾಡುವಂತೆ ಒತ್ತಾಯಿಸಿದರು. ಹೀಗಾಗಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಾಲಾ ಆಡಳಿತ ಮಂಡಳಿ, ಶೇ. 30 ರಷ್ಟು ಶಾಲಾ ಶುಲ್ಕ ಕಡಿತ ಕಳೆದ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದ್ದು. ಎಲ್ಲಾ ರಂಗದಂತೆ ಶಾಲೆಗಳು ಸಂಕಷ್ಟಕ್ಕೆ ಒಳಗಾಗಿವೆ. ಸರ್ಕಾರದ ಶಾಲಾ ಶುಲ್ಕ ಕಡಿತ ವಿಚಾರ ಈ ವರ್ಷಕ್ಕೆ ಸಂಬಂಧಿಸಿಲ್ಲ ಎಂದು ಸ್ಪಷ್ಡಪಡಿಸಿದರೂ ಅದಕ್ಕೆ ಪೋಷಕರು ಒಪ್ಪಲಿಲ್ಲ. ಹೀಗಾಗಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಇದೇ ರೀತಿ ವಿ.ವಿ. ಪುರಂನಲ್ಲಿರುವ ಜೈನ್ ಸಮುದಾಯದ ಶಾಲೆಯ ಬಳಿಯೂ ಶುಲ್ಕದ ವಿಚಾರವಾಗಿ ಗೊಂದಲ ಏರ್ಪಟ್ಟಿದ್ದು ಪೋಷಕರು ಬೀದಿಗೆ ಇಳಿದಿದ್ದಾರೆ. ಇದೀಗ ಖಾಸಗಿ ಶಾಲೆ ಹಾಗೂ ಪೋಷಕರ ನಡುವೆ ಶುಲ್ಕದ ಗೊಂದಲಕ್ಕೆ ನಾಂದಿ ಹಾಡಿರುವುದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೈಗೊಂಡಿರುವ ತೀರ್ಮಾನ.

ಶಿಕ್ಷಣ ಸಚಿವರ ಗೊಂದಲ ತೀರ್ಮಾನ

ಶಿಕ್ಷಣ ಸಚಿವರ ಗೊಂದಲ ತೀರ್ಮಾನ

ಕೊರೊನಾ ಸೋಂಕುಗೆ ಎಲ್ಲಾ ಕ್ಷೇತ್ರಗಳಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಕೂಡ ಸಂಕಷ್ಟಕ್ಕೆ ಒಳಗಾಗಿದ್ದವು. ದಾಖಲಾತಿ ಇಲ್ಲದೇ, ಶಾಲಾ ಶುಲ್ಕ ಪಾವತಿಸದೇ ಸಂಕಷ್ಟಕ್ಕೆ ಈಡಾಗಿದ್ದವು. ಬದುಕು ಕಳೆದುಕೊಂಡ ಪೋಷಕರು ಕೂಡ ಶಾಲಾ ಶುಲ್ಕ ಕಟ್ಟಲಾರದ ಸ್ಥಿತಿ ತಲುಪಿದರು. ಇದು ರಾಜ್ಯದಲ್ಲಿ ದೊಡ್ಡ ವಿವಾದಕ್ಕೆ ನಾಂದಿ ಹಾಡಿತ್ತು. ಈ ವೇಳೆ ಮಧ್ಯ ಪ್ರವೇಶಿಸಿದ ಶಿಕ್ಷಣ ಸಚಿವರು ಶಾಲೆಗಳು ಬೋಧನಾ ಶುಲ್ಕ ಹೊರತು ಪಡಿಸಿ ಯಾವುದೇ ಶುಲ್ಕ ಸ್ವೀಕರಿಸಬಾರದು. ಬೋಧನಾ ಶುಲ್ಕದಲ್ಲಿ ಶೇ. 30 ರಷ್ಟು ಕಡಿತ ಮಾಡಬೇಕು ಎಂದು ಆದೇಶ ನೀಡಿದರು. ವೈಜ್ಞಾನಿಕ ನೆಲೆಗಟ್ಟಿನಲ್ಲಿ ಶೇ. ಇಂತಿಷ್ಟು ಶುಲ್ಕ ಮನ್ನಾಗೆ ಮನವಿ ಮಾಡಿದ್ದಲ್ಲಿ ಶಾಲಾ ಶುಲ್ಕದಲ್ಲಿ ಗೊಂದಲ ಏರ್ಪಡುತ್ತಿರಲಿಲ್ಲ. ಶಿಕ್ಷಣ ಸಚಿವರು ಯಾವ ಮಾನದಂಡ ಅನುಸರಿಸದೇ ಬೋಧನಾ ಶುಲ್ಕದಲ್ಲಿ ಶೇ. 30 ರಷ್ಟು ಕಡಿತಗೊಳಿಸಬೇಕು ಎಂಬ ತೀರ್ಮಾನ ಪ್ರಕಟಿಸಿದರು. ಈ ತೀರ್ಮಾನದ ವಿರುದ್ಧ ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳು ಹೈಕೋರ್ಟ್ ಮೊರೆ ಹೋದವು.

ಹೈಕೋರ್ಟ್ ತೀರ್ಪು

ಹೈಕೋರ್ಟ್ ತೀರ್ಪು

ಶುಲ್ಕದ ವಿಚಾರವಾಗಿ ಮಧ್ಯಂತರ ತೀರ್ಪು ನೀಡಿರುವ ಹೈಕೋರ್ಟ್, ರಾಜ್ಯದಲ್ಲಿ ಶಾಲಾ ಶುಲ್ಕದ ಬಗ್ಗೆ ಏನೇ ಗೊಂದಲ ಇದ್ದರೆ ಶಾಲಾ ಆಡಳಿತ ಮಂಡಳಿ ಗಮನಕ್ಕೆ ತಂದು ಬಗೆಹರಿಸಿಕೊಳ್ಳಿ. ಅದಕ್ಕೆ ತೃಪ್ತರಾಗದಿದ್ದಲ್ಲಿ ನ್ಯಾಯಾಲಯದ ಗಮನಕ್ಕೆ ತರುವಂತೆ ಸೂಚನೆ ನೀಡಿತು. ಕಳೆದ ವರ್ಷದ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೀಡಿದ್ದ ಆದೇಶದಲ್ಲಿ 2021- 22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಯಾವುದೇ ಸ್ಪಷ್ಟ ಆದೇಶ ಮಾಡಿಲ್ಲ. ಕೇವಲ ಒಂದು ವರ್ಷಕ್ಕೆ ಸೀಮಿತಗೊಳಿಸಿ ಹೊರಡಿಸಿರುವ ಆದೇಶ ಮುಂದಿಟ್ಟುಕೊಂಡು ಶಿಕ್ಷಣ ಇಲಾಖೆ ಅಧಿಕಾರಿಗಳು ಇದೀಗ ಈ ವರ್ಷವೂ ಶೇ. 30 ರಷ್ಟು ಶಾಲಾ ಶುಲ್ಕ ಕಡಿತಗೊಳಿಸಬೇಕೆಂದು ಶಾಲೆಗಳಿಗೆ ಸೂಚನೆ ನೀಡಿದ್ದಾರೆ. ಮಾತ್ರವಲ್ಲದೇ ಮಾಧ್ಯಮಗಳಿಗೆ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ನಾಂದಿ ಹಾಡಿದ್ದಾರೆ.

ಮತ್ತೆ ಕೋರ್ಟ್ ಮೊರೆ

ಮತ್ತೆ ಕೋರ್ಟ್ ಮೊರೆ

2021-22 ನೇ ಶೈಕ್ಷಣಿಕ ಸಾಲಿನ ಶಾಲಾ ಶುಲ್ಕದ ಬಗ್ಗೆ ಸರ್ಕಾರ ಈವರೆಗೂ ಯವುದೇ ತೀರ್ಮಾನ ಪ್ರಕಟಿಸಿಲ್ಲ. ಕಳೆದ ವರ್ಷದ ಆದೇಶದಲ್ಲೂ ಉಲ್ಲೇಖವಿಲ್ಲ. ಸಂಬಂಧವಿಲ್ಲದ ಆದೇಶವನ್ನು ಮುಂದಿಟ್ಟುಕೊಂಡು ಶಾಲಾ ಆಡಳಿತ ಮಂಡಳಿ ವಿರುದ್ಧ ಕೇಸು ದಾಖಲಿಸುವ ಬೆದರಿಕೆ ಹಾಕುತ್ತಿದ್ದಾರೆ. ಯಾವುದೇ ಆದೇಶ ವಿಲ್ಲದಿದ್ದರೂ ಮಾಧ್ಯಮಗಳಿಗೆ ದಿಕ್ಕು ತಪ್ಪಿಸಿ ಪೋಷಕರಲ್ಲಿ ಗೊಂದಲ ಸೃಷ್ಟಿಗೆ ಕಾರಣರಾಗಿದ್ದಾರೆ. ಮೈಸೂರಿನಲ್ಲಿ ಡಿಡಿಪಿಐ ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡುವ ಮೂಲಕ ದೊಡ್ಡ ವಿವಾದ ಸೃಷ್ಟಿಸಿದ್ದಾರೆ. ಯಾವ ಸ್ಪಷ್ಟ ಆದೇಶ ಇಲ್ಲದೇ ಶಿಕ್ಷಣ ಸಂಸ್ಥೆಗಳಿಗೆ ಈವರ್ಷವೂ ಕಿರುಕುಳ ನೀಡುತ್ತಿರುವ ಮೈಸೂರಿನ ಡಿಡಿಪಿಐ ಅವರನ್ನು ಅಮಾನತು ಮಾಡಬೇಕು. ಈ ಕುರಿತು ನ್ಯಾಯಾಲಯದ ಮೊರೆ ಹೋಗುವುದಾಗಿ ಅಸೋಸಿಯೇಟೆಡ್ ಮ್ಯಾನೇಜ್‌ ಮೆಂಟ್ ಆಫ್ ಪ್ರೈಮರಿ ಅಂಡ್ ಸೆಕೆಂಡರಿ ಸ್ಕಲ್ಸ್ ಸಂಸ್ಥೆ ಶಿಕ್ಷಣ ಸಚಿವರಿಗೆ ದೂರು ನೀಡಿದೆ. ಈ ಕುರಿತು ಒನ್ಇಂಡಿಯಾ ಕನ್ನಡ ಜತೆ ಮಾತನಾಡಿದ ಎಂ.ಎ. ಆನಂದ್, ಶಿಕ್ಷಣ ಇಲಾಖೆ ಅಧಿಕಾರಿಗಳು ಮಾಧ್ಯಮಗಳಿಗೆ ತಪ್ಪು ಸಂದೇಶ ರವಾನೆ ಮಾಡಿ ಪೋಷಕರಲ್ಲಿ ಗೊಂದಲ ಏರ್ಪಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Recommended Video

    SSLC ಮಕ್ಕಳಿಗೆ ಸಂಪೂರ್ಣ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವರು | Oneindia Kannada
    ಶಿಕ್ಷಣ ಇಲಾಖೆ ಆಶಕ್ತತೆ

    ಶಿಕ್ಷಣ ಇಲಾಖೆ ಆಶಕ್ತತೆ

    ರಾಜ್ಯದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆಯಿಂದ ಜನ ಸಾಮಾನ್ಯರು ಕೆಲಸ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಒಂದಡೆ ಗುಣಮಟ್ಟದ ಶಿಕ್ಷಣಕ್ಕಾಗಿ ಖಾಸಗಿ ಶಾಲೆಗಳಿಗೆ ಸೇರಿಸಬೇಕೆಂಬ ತವಕ. ಆದರೆ ಶಾಲಾ ಶುಲ್ಕ ಕಟ್ಟಲಾರದ ಪರಿಸ್ಥಿತಿ. ಇಂತಹ ಸಂಕಷ್ಟ ಸ್ಥಿತಿಯಲ್ಲಿ ಶಿಕ್ಷಣ ಸಚಿವರು ತಮ್ಮ ಅತಿ ಕ್ಷಾಣಾಕ್ಷತೆ ಪ್ರಯೋಗಿಸಿ ದೆಹಲಿ ಮಾದರಿಯಲ್ಲಿ ಒಂದು ಸಾವಿರ ಶಾಲೆಗಳನ್ನು ಕರ್ನಾಟಕದಲ್ಲಿ ತೆರೆದು ಗುಣಮಟ್ಟದ ಶಿಕ್ಷಣಕ್ಕೆ ನಾಂದಿಯಾಡಬಹುದಿತ್ತು. ಆದರೆ, ಒಂದು ಶಾಲೆಯನ್ನು ತೆರೆಯುವ ಗೋಜಿಗೆ ಹೋಗಿಲ್ಲ. ಹಾಗಂತ ಇರುವ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಯಾವ ತೀರ್ಮಾನ ತೆಗೆದುಕೊಳ್ಳದೇ, ಅತ್ತ ಖಾಸಗಿ ಶಿಕ್ಷಣ ವ್ಯವಸ್ಥೆಯ ಶತ್ರವೂ ಅಲ್ಲ, ಇತ್ತ ಸರ್ಕಾರಿ ವ್ಯವಸ್ಥೆಯ ಮಿತ್ರನೂ ಆಗದಂತೆ ಅಡ್ಡಗೋಡೆ ಮೇಲೆ ದೀಪ ಇಟ್ಟು ವಿವಾದಗಳಿಗೆ ನಾಂದಿ ಹಾಡುತ್ತಿದ್ದಾರೆ. ಇದೀಗಷ್ಟೇ ಪಿಯುಸಿ ಪರೀಕ್ಷೆ ರದ್ದು ಮಾಡಿ ಎಸ್ಎಸ್ಎಲ್ ಸಿ ಪರೀಕ್ಷೆ ಮಾಡುವುದಾಗಿ ಘೋಷಣೆ ಮಾಡಿ ಟೀಕೆಗೆ ಗುರಿಯಾಗಿದ್ದಾರೆ. ಈ ವರ್ಷದ ಶಾಲಾ ಶುಲ್ಕದ ವಿಚಾರದಲ್ಲಿ ಶಿಕ್ಷಣ ಸಚಿವರದ್ದು ಇನ್ನು ಯಾವ್ಯಾವ ಆದೇಶಗಳು ಹೊರ ಬೀಳುತ್ತವೋ ಕಾದು ನೋಡಬೇಕು.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+