GIM2025: ಜಾಗತಿಕ ಹೂಡಿಕೆದಾರರ ಸಮಾವೇಶ: ಪ್ರಾರಂಭಕ್ಕೂ ಮುನ್ನವೇ ವಿವಾದ!

2025 Invest karnataka: ಜಾಗತಿಕ ಹೂಡಿಕೆದಾರರ ಸಮಾವೇಶ ಫೆಬ್ರವರಿ 11ರಿಂದ ಪ್ರಾರಂಭವಾಗುತ್ತಿದೆ. ಈ ಹೂಡಿಕೆ ಸಮಾವೇಶದಲ್ಲಿ ಕೋಟ್ಯಾಂತರ ರೂಪಾಯಿ ಹರಿದು ಬರುವ ಸಾಧ್ಯತೆ ಇದೆ. ಆದರೆ ಹೂಡಿಕೆದಾರರ ಸಮಾವೇಶ ಪ್ರಾರಂಭವಾಗುವುದಕ್ಕಿಂತ ಮುಂಚೆಯೇ ವಿವಾದ ಶುರುವಾಗಿದೆ. ಕೇಂದ್ರ ನಾಯಕರನ್ನು ಈ ಸಮಾವೇಶದಲ್ಲಿ ಕಡೆಗಣಿಸಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ವಿರುದ್ಧ ಕೇಳಿ ಬಂದಿರುವ ಗಂಭೀರವಾದ ಆರೋಪವೇನು ಎನ್ನುವ ವಿವರ ಇಲ್ಲಿದೆ.

ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ಆದರೆ ಈ ಸಮಾವೇಶಕ್ಕೆ ಕೇಂದ್ರ ನಾಯಕರನ್ನು ಕಡೆಗಣಿಸಲಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಅವರು ಹೇಳಿದ್ದು. ಈ ಸಂಬಂಧ ಸೋಷಿಯಲ್‌ ಮೀಡಿಯಾದಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ. ಅದರ ವಿವರ ಇಲ್ಲಿದೆ.

2025 Invest karnataka Controversy Before it Even Starts

ಶಿಷ್ಟಾಚಾರ ಪಾಲನೆಯಲ್ಲೂ ಕಾಂಗ್ರೆಸ್ ಸರ್ಕಾರದ ಕೀಳು ರಾಜಕೀಯ ಪ್ರದರ್ಶನ ಮಾಡಿದೆ ಎಂದು ಆರ್‌ ಅಶೋಕ್‌ ಅವರು ಹೇಳಿದ್ದಾರೆ. ಮಂಗವಾರ ಸಂಜೆ ಉದ್ಘಾಟನೆ ಆಗಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಬಗ್ಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ಎಲ್ಲಾ ದಿನಪತ್ರಿಕೆಗಳಲ್ಲೂ ಫುಲ್ ಪೇಜ್ ಜಾಹೀರಾತು ನೀಡಿದೆ. ಸಮಾವೇಶಕ್ಕೆ ನಮ್ಮ ಶುಭ ಹಾರೈಕೆಗಳು. ರಾಜ್ಯಕ್ಕೆ ಹೆಚ್ಚಿನ ಬಂಡವಾಳ ಹರಿದು ಬರಲಿ, ಕಳೆದ 20 ತಿಂಗಳುಗಳಿಂದ ಸಂಪೂರ್ಣವಾಗಿ ಸ್ಥಬ್ಧವಾಗಿರುವ ರಾಜ್ಯದ ಅಭಿವೃದ್ಧಿಗೆ ಇನ್ನು ಮುಂದೆಯಾದರೂ ಚುರುಕು ಸಿಗಲಿ ಎಂದು ಆಶಿಸುತ್ತೇನೆ ಎಂದು ಅವರು ಕಾಂಗ್ರೆಸ್‌ ಕಾಲೆಳೆದಿದ್ದಾರೆ.

ಹೂಡಿಕೆದಾರರ ಸಮಾವೇಶದ ಉದ್ಘಾಟನೆ ನೆರವೇರಿಸಲಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಫೋಟೋ ಜಾಹೀರಾತಿನಲ್ಲಿ ಯಾಕಿಲ್ಲ. ಸಮಾವೇಶದ ಉದ್ಘಾಟನಾ ಕಾರ್ಯಕ್ರಮದ ಉಪಸ್ಥಿತಿ ವಹಿಸಲಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ಫೋಟೋ ಯಾಕೆ ಹಾಕಿಲ್ಲ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಕೇವಲ ಸಿಎಂ, ಡಿಸಿಎಂ ಹಾಗೂ ಕೈಗಾರಿಕಾ ಸಚಿವರ ಫೋಟೋ ಹಾಕಲು ಹೂಡಿಕೆದಾರರ ಸಮಾವೇಶ ರಾಜಕೀಯ ಕಾಂಗ್ರೆಸ್ ಪಕ್ಷದ ರಾಜಕೀಯ ಸಮಾವೇಶವಲ್ಲ. ಇಂತಹ ಜಾಗತಿಕ ಸಮಾವೇಶದ ಜಾಹೀರಾತಿನಲ್ಲೂ ಕ್ಷುಲ್ಲಕ ರಾಜಕೀಯ ಮಾಡುವ ಕರ್ನಾಟಕ ಕಾಂಗ್ರೆಸ್‌ ಪಕ್ಷಕ್ಕೆ ನಿಜಕ್ಕೂ ನಾಚಿಕೆಯಾಗಬೇಕು. ಮಾತೆತ್ತಿದರೆ ಸಂವಿಧಾನ, ಪ್ರಜಾಪ್ರಭುತ್ವ ಅಂತ ಭಾಷಣ ಬಿಗಿಯುವ ಕಾಂಗ್ರೆಸ್ ನಾಯಕರಿಗೆ ರಾಜ್ಯದ ಪ್ರಥಮ ಪ್ರಜೆಯಾಗಿರುವ ರಾಜ್ಯಪಾಲರ ಫೋಟೋ ಹಾಕುವ ಕನಿಷ್ಠ ಶಿಷ್ಟಾಚಾರವನ್ನೂ ಪಾಲನೆ ಮಾಡುವ ಸೌಜನ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಶಿಷ್ಟಾಚಾರದ ಕೀಳು ರಾಜಕೀಯ ಒಂದು ಕಡೆಯಾದರೆ ಮತ್ತೊಂದು ಕಡೆ ಹೂಡಿಕೆದಾರರ ಸಮಾವೇಶಕ್ಕೆ ಪ್ರವೇಶಾತಿ ಶುಲ್ಕ ವಿಧಿಸುವ ಮೂಲಕ ರಾಜ್ಯ ಸರ್ಕಾರ ಎಷ್ಟು ಪಾಪರ್ ಆಗಿದೆ ಎಂದು ಮತ್ತೊಮ್ಮೆ ಪ್ರದರ್ಶನ ಮಾಡಿದೆ. ಇಂಜಿನಿಯರಿಂಗ್, ಮ್ಯಾನೇಜ್ಮೆಂಟ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ನವೋದ್ಯಮ ಪ್ರಾರಂಭಿಸಬೇಕು ಎಂಬ ಉತ್ಸಾಹದಲ್ಲಿರುವ ಯುವಕ, ಯುವತಿಯರಿಗೆ, ವೃತ್ತಿಪರರಿಗೆ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವುದು ಒಂದು ಉತ್ತಮ ಕಲಿಕಾ ಅವಕಾಶವೂ ಹೌದು, ತಮ್ಮ ಕಾರ್ಯ ಕ್ಷೇತ್ರದಲ್ಲಿರುವ ಇತರರನ್ನು ಸಂಪರ್ಕ ಮಾಡಿ ನೆಟ್ವರ್ಕಿಂಗ್ ಮಾಡಿಕೊಳ್ಳುವ ವೇದಿಕೆಯೂ ಹೌದು. ಆದರೆ ಹೂಡಿಕೆದಾರರ ಸಮಾವೇಶಕ್ಕೆ ಪ್ರವೇಶ ಶುಲ್ಕ ವಿಧಿಸುವ ಮೂಲಕ ಇವರೆಲ್ಲರಿಗೂ ಸಮಾವೇಶದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಈ ದರಿದ್ರ ಸರ್ಕಾರ ಕಿತ್ತುಕೊಂಡಿದೆ ಎಂದು ಹೇಳಿದ್ದಾರೆ.

ನಮ್ಮ ರಾಜ್ಯದ ಯುವ ಜನಾಂಗಕ್ಕೆ ಈ ಹೂಡಿಕೆದಾರರ ಸಮಾವೇಶದಲ್ಲಿ ಪ್ರವೇಶ ಇಲ್ಲದ ಮೇಲೆ ಈ ಸಮಾವೇಶ ಮಾಡುತ್ತಿರುವುದಾದರೂ ಯಾರಿಗೋಸ್ಕರ. ಮೂರು ದಿನ ಫೋಟೋ ಶೂಟ್ ಮಾಡಿಸಿಕೊಂಡು ಪುಕ್ಕಟೆ ಪ್ರಚಾರ ಪಡೆಯೋದಕ್ಕಾ ಅಥವಾ ಗ್ಯಾರೆಂಟಿಗಳಿಂದ ದಿವಾಳಿ ಆಗಿರುವ ಸರ್ಕಾರದ ಬೊಕ್ಕಸವನ್ನು ಪ್ರವೇಶ ಶುಲ್ಕ ಮೂಲಕ ವಸೂಲಿ ಮಾಡುವುದಕ್ಕಾ ಎಂದು ಅವರು ಕೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+