ಹಾವೇರಿ: ಜನವರಿ 11 ರಂದು ಸಂಸದರ ಕ್ರೀಡಾ ಮಹೋತ್ಸವ-2026
ಹಾವೇರಿ: ಕ್ರೀಡಾ ಸಂಸ್ಕೃತಿಯನ್ನು ಪೋಷಿಸುವುದು, ಸ್ಥಳೀಯ (ದೇಶಿಯ) ಮತ್ತು ಮುಖ್ಯವಾಹಿನಿಯ ಕ್ರೀಡೆಗಳನ್ನು ಉತ್ತೇಜಿಸಲು, ಯುವಕರು ಭಾಗವಹಿಸುವಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಹಾವೇರಿ - ಗದಗ ಲೋಕಸಭಾ ವ್ಯಾಪ್ತಿಯಲ್ಲಿ ಸಂಸದರ ಕ್ರೀಡಾ ಮಹೋತ್ಸವ-2026 ಆಯೋಜಿಸಲಾಗುತ್ತಿದೆ. ಇದು ಸಚಿವಾಲಯದ ಮಹತ್ವದ ದೃಷ್ಟಿಕೋನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಸೋಮವಾರ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಂಸದರ ಕ್ರೀಡಾಕೂಟ -2026ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಒಳಗೊಂಡಂತೆ ಕ್ರೀಡಾ ಮಹೋತ್ಸವ-2026, ನ್ನು ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶಿಸಿದರು.

ಗ್ರಾಮೀಣ, ಹೋಬಳಿ ಮಟ್ಟದಲ್ಲಿ ಆಯ್ಕೆಯಾದವರಿಗೆ ಒತ್ತು ನೀಡಿ
ಜನವರಿ 11 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆ ಮಾಡುವಂತೆ ಹಾಗೂ ಉಳಿದ ಕ್ರೀಡೆಗಳನ್ನು ಹೋಬಳಿ, ತಾಲೂಕು ಮತ್ತು ಜಿಲ್ಲಾ ಮಟ್ಟ ಹೀಗೆ ಮೂರು ವಿಭಾಗಗಳಲ್ಲಿ ನಡೆಸಿ, ಹೋಬಳಿ ಮಟ್ಟದಲ್ಲಿ ಆಯ್ಕೆಯಾದವರನ್ನು ತಾಲೂಕ ಮಟ್ಟದಲ್ಲಿ, ತಾಲೂಕ ಮಟ್ಟದಲ್ಲಿ ಆಯ್ಕೆಯಾದವರನ್ನು ಜಿಲ್ಲಾಮಟ್ಟದಲ್ಲಿ ಪರಿಗಣಿಸುವಂತೆ ಸೂಚಿಸಿದರು. ಕ್ರೀಡಾಕೂಟದಲ್ಲಿ ಕಬಡ್ಡಿ, ಖೋಖೊ, ವಾಲಿಬಾಲ್, 100, 200, 400 ಮೀಟರ್ ಓಟ, ರಿಲೇ ಹಾಗೂ ಇನ್ನಿತಿರ ಕ್ರೀಡೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಕ್ರೀಡಾಪಟುಗಳ ನೋಂದಣಿ, ತಂಡಗಳ ರಚನೆ
ಪೂರ್ವ-ಕಾರ್ಯಕ್ರಮ ಯೋಜನೆಗೆ ಸ್ಥಳ ಆಯ್ಕೆ, ಪಾಲುದಾರಿಕೆಗಳು, ಜಾಗೃತಿ ಅಭಿಯಾನ ಕ್ರೀಡಾ ಮೂಲಸೌಕರ್ಯ, ತರಬೇತುದಾರರು ಮತ್ತು ತೀರ್ಪುಗಾರರು ಮೊದಲಾದವುಗಳನ್ನು ಸಿದ್ದಪಡಿಸಿಕೊಂಡು ಮಾಹಿತಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಕ್ರೀಡಾಪಟು ನೋಂದಣಿ ನಿರ್ವಹಣೆಗಾಗಿ ಪ್ರಮುಖ ಸ್ಥಳಗಳಲ್ಲಿ ಆನ್ಲೈನ್ ಮತ್ತು ಆಫ್ಲೈನಗಳ ಮೂಲಕ ಕ್ರೀಡಾಪಟುಗಳು ನೊಂದಣಿ ಆರಂಭಿಸಿ ಕ್ರೀಡಾಪಟುಗಳ ನೋಂದಣಿ ಆಧಾರದ ಮೇಲೆ ತಂಡಗಳನ್ನು ರಚಿಸುವಂತೆ ಅವರು ಸಲಹೆ ನೀಡಿದರು. ಕ್ರೀಡಾಕೂಟದಲ್ಲಿ ಭಾಗ ವಹಿಸುವ ಕ್ರೀಡಾಪಟುಗಳಿಗೆ ಉಟೋಪಚಾರ ಹಾಗೂ ಟಿ ಶರ್ಟ್ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರುಚಿ ಬಿಂದಲ್, ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಪುನೀತ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಲತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಿಡಾಕೂಟ ಯಶಸ್ವಿ ಆಯೋಜನೆ ಹಾಗೂ ಸಿದ್ಧತೆಗಳ ಬಗ್ಗೆ ಚರ್ಚಿಸಿ ಒಂದಷ್ಟು ಮಾಹಿತಿಗಳನ್ನು ಸಂಸದ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications