ಹಾವೇರಿ: ಜನವರಿ 11 ರಂದು ಸಂಸದರ ಕ್ರೀಡಾ ಮಹೋತ್ಸವ-2026
ಹಾವೇರಿ: ಕ್ರೀಡಾ ಸಂಸ್ಕೃತಿಯನ್ನು ಪೋಷಿಸುವುದು, ಸ್ಥಳೀಯ (ದೇಶಿಯ) ಮತ್ತು ಮುಖ್ಯವಾಹಿನಿಯ ಕ್ರೀಡೆಗಳನ್ನು ಉತ್ತೇಜಿಸಲು, ಯುವಕರು ಭಾಗವಹಿಸುವಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ಹಾವೇರಿ - ಗದಗ ಲೋಕಸಭಾ ವ್ಯಾಪ್ತಿಯಲ್ಲಿ ಸಂಸದರ ಕ್ರೀಡಾ ಮಹೋತ್ಸವ-2026 ಆಯೋಜಿಸಲಾಗುತ್ತಿದೆ. ಇದು ಸಚಿವಾಲಯದ ಮಹತ್ವದ ದೃಷ್ಟಿಕೋನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಸೋಮವಾರ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಂಸದರ ಕ್ರೀಡಾಕೂಟ -2026ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಒಳಗೊಂಡಂತೆ ಕ್ರೀಡಾ ಮಹೋತ್ಸವ-2026, ನ್ನು ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶಿಸಿದರು.

ಗ್ರಾಮೀಣ, ಹೋಬಳಿ ಮಟ್ಟದಲ್ಲಿ ಆಯ್ಕೆಯಾದವರಿಗೆ ಒತ್ತು ನೀಡಿ
ಜನವರಿ 11 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆ ಮಾಡುವಂತೆ ಹಾಗೂ ಉಳಿದ ಕ್ರೀಡೆಗಳನ್ನು ಹೋಬಳಿ, ತಾಲೂಕು ಮತ್ತು ಜಿಲ್ಲಾ ಮಟ್ಟ ಹೀಗೆ ಮೂರು ವಿಭಾಗಗಳಲ್ಲಿ ನಡೆಸಿ, ಹೋಬಳಿ ಮಟ್ಟದಲ್ಲಿ ಆಯ್ಕೆಯಾದವರನ್ನು ತಾಲೂಕ ಮಟ್ಟದಲ್ಲಿ, ತಾಲೂಕ ಮಟ್ಟದಲ್ಲಿ ಆಯ್ಕೆಯಾದವರನ್ನು ಜಿಲ್ಲಾಮಟ್ಟದಲ್ಲಿ ಪರಿಗಣಿಸುವಂತೆ ಸೂಚಿಸಿದರು. ಕ್ರೀಡಾಕೂಟದಲ್ಲಿ ಕಬಡ್ಡಿ, ಖೋಖೊ, ವಾಲಿಬಾಲ್, 100, 200, 400 ಮೀಟರ್ ಓಟ, ರಿಲೇ ಹಾಗೂ ಇನ್ನಿತಿರ ಕ್ರೀಡೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಕ್ರೀಡಾಪಟುಗಳ ನೋಂದಣಿ, ತಂಡಗಳ ರಚನೆ
ಪೂರ್ವ-ಕಾರ್ಯಕ್ರಮ ಯೋಜನೆಗೆ ಸ್ಥಳ ಆಯ್ಕೆ, ಪಾಲುದಾರಿಕೆಗಳು, ಜಾಗೃತಿ ಅಭಿಯಾನ ಕ್ರೀಡಾ ಮೂಲಸೌಕರ್ಯ, ತರಬೇತುದಾರರು ಮತ್ತು ತೀರ್ಪುಗಾರರು ಮೊದಲಾದವುಗಳನ್ನು ಸಿದ್ದಪಡಿಸಿಕೊಂಡು ಮಾಹಿತಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಕ್ರೀಡಾಪಟು ನೋಂದಣಿ ನಿರ್ವಹಣೆಗಾಗಿ ಪ್ರಮುಖ ಸ್ಥಳಗಳಲ್ಲಿ ಆನ್ಲೈನ್ ಮತ್ತು ಆಫ್ಲೈನಗಳ ಮೂಲಕ ಕ್ರೀಡಾಪಟುಗಳು ನೊಂದಣಿ ಆರಂಭಿಸಿ ಕ್ರೀಡಾಪಟುಗಳ ನೋಂದಣಿ ಆಧಾರದ ಮೇಲೆ ತಂಡಗಳನ್ನು ರಚಿಸುವಂತೆ ಅವರು ಸಲಹೆ ನೀಡಿದರು. ಕ್ರೀಡಾಕೂಟದಲ್ಲಿ ಭಾಗ ವಹಿಸುವ ಕ್ರೀಡಾಪಟುಗಳಿಗೆ ಉಟೋಪಚಾರ ಹಾಗೂ ಟಿ ಶರ್ಟ್ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರುಚಿ ಬಿಂದಲ್, ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಾ. ಪುನೀತ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಲತಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಕ್ರಿಡಾಕೂಟ ಯಶಸ್ವಿ ಆಯೋಜನೆ ಹಾಗೂ ಸಿದ್ಧತೆಗಳ ಬಗ್ಗೆ ಚರ್ಚಿಸಿ ಒಂದಷ್ಟು ಮಾಹಿತಿಗಳನ್ನು ಸಂಸದ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications