ರಾಜ್ಯದಲ್ಲಿ ವಾಸವಿದ್ದ 24 ಪಾಕ್ ಮತ್ತು 159 ಬಾಂಗ್ಲಾದೇಶ ಮೂಲದವರ ಬಂಧನ: ಪರಮೇಶ್ವರ್
ಬೆಳಗಾವಿ,ಡಿಸೆಂಬರ್19: ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರ ಮತ್ತು ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್ ಮತ್ತು 159 ಬಾಂಗ್ಲಾದೇಶ ಮೂಲದವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.
ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಿ. ಎಸ್. ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ, ರಾಜ್ಯಕ್ಕೆ ಪದೇ ಪದೇ ಅನಧಿಕೃತವಾಗಿ ಪ್ರವೇಶಿಸುವ ಇಂತಹ ಪ್ರಕರಣಗಳ ಬಗ್ಗೆ ನಿಗಾವಹಿಸಲು ಬೆಂಗಳೂರು ನಗರದಲ್ಲಿ ನಗರ ವಿಶೇಷ ಘಟಕವಿದ್ದು, ನಗರಕ್ಕೆ ಪ್ರವೇಶಿಸುವ ಯಾವುದೇ ವಿದೇಶಿಯರ ಬಗ್ಗೆ ಪೊಲೀಸ್ ಠಾಣೆಗಳ ಮೂಲಕ, ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್. ಆರ್. ಆರ್. ಓ ) ಬೆಂಗಳೂರು ರವರಿಂದ ಮಾಹಿತಿಯನ್ನು ಪಡೆದು, ಪ್ರತಿ ವಿಭಾಗೀಯ ಡಿಸಿಪಿಗಳ ಮುಖಾಂತರ ವಿಶೇಷ ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ.

ಅಲ್ಲದೆ, ಸಿ.ಸಿ.ಬಿಯ ಸಂಘಟಿತ ಅಪರಾಧ ದಳ ಕೂಡ ಕಾರ್ಯಾಚರಣೆ ನಡೆಸುತ್ತಿದೆ. ಇತರೆ ನಗರ /ಜಿಲ್ಲೆಗಳಲ್ಲಿ ಅನಧಿಕೃತವಾಗಿ ಪ್ರವೇಶಿಸುವ ವಿದೇಶಿಯರುಗಳ ಪತ್ತೆಯ ಬಗ್ಗೆ Special Task force ರಚಿಸಿದ್ದು, ಅದು ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಗ್ಯಾರಂಟಿಗಳಿಂದ ಕ್ಷೇತ್ರಗಳ ಅಭಿವೃದ್ಧಿಗೆ ಕೊರತೆಯಾಗಿಲ್ಲ: ಸಿಎಂ
ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಆಯವ್ಯಯದಲ್ಲಿಯೇ ಸೂಕ್ತ ಅನುದಾನವನ್ನು ಕಲ್ಪಿಸಿರುತ್ತದೆ ಹಾಗೂ ರಾಜ್ಯದ ಸರ್ವತೋಮುಖ ಅಭಿವೃದ್ದಿಗೆ ಎಲ್ಲಾ ಕ್ಷೇತ್ರಗಳಿಗೂ ಅಗತ್ಯ ಅನುದಾನವನ್ನು ಆಯವ್ಯಯದಲ್ಲಿ ಒದಗಿಸಿರುತ್ತದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಕ್ಷೇತ್ರಗಳ ಅಭಿವೃದ್ಧಿಗೆ ಯಾವುದೇ ಕೊರತೆಯಾಗಿರುವುದಿಲ್ಲ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಸದಸ್ಯರಾದ ಸಿ.ಟಿ.ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿಗಳು, ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸಲು ಸರ್ಕಾರವು ಯಾವುದೇ ನಿರ್ಧಾರ ತೆಗೆದುಕೊಂಡಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳು ಅಸ್ತಿತ್ವಕ್ಕೆ ಬಂದಾಗಿನಿಂದ 2024ರ ನವೆಂಬರ್ ಅಂತ್ಯದವರೆಗೆ ಗೃಹಲಕ್ಷ್ಮಿ ಯೋಜನೆಗೆ 32,817 ಕೋಟಿ ರೂ., ಅನ್ನ ಭಾಗ್ಯ ಯೋಜನೆಗೆ 8,931 ಕೋಟಿ ರೂ., ಗೃಹಜ್ಯೋತಿಗೆ 14,869 ಕೋಟಿ ರೂ., ಶಕ್ತಿ ಯೋಜನೆಗೆ 6,543 ಕೋಟಿ ರೂ., ಯುವನಿಧಿ ಯೋಜನೆಗೆ 221.3 ಕೋಟಿ ರೂ. ವೆಚ್ಚವಾಗಿದೆ. ಜಿಲ್ಲಾಮಟ್ಟದಲ್ಲಿ 30 ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸಿ ಆದೇಶಿಸಲಾಗಿದೆ.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಅವರ ಆಪ್ತ ಸಿಬ್ಬಂದಿ ಮತ್ತು ಪ್ರಾಧಿಕಾರದ ಸದಸ್ಯರುಗಳ ವೇತನ ಹಾಗೂ ಇತರೆ ಸವಲತ್ತುಗಳನ್ನು ನಿಗದಿಪಡಿಸಲಾಗಿದೆ.
ಅದೇ ರೀತಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಬಿಬಿಎಂಪಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳಿಗೆ ಗೌರವಧನ ಸಭಾ ಭತ್ಯೆ ನಿಗದಿಪಡಿಸಿ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಲಿಖಿತ ಉತ್ತರ ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications