247 ಇಂದಿರಾ ಕ್ಯಾಂಟೀನ್ ಸ್ಥಾಪನೆ, ಯಾವ ನಗರಕ್ಕೆ ಎಷ್ಟು?
ಬೆಂಗಳೂರು, ನವೆಂಬರ್ 06 : ಇಂದಿರಾ ಕ್ಯಾಂಟೀನ್ ಯೋಜನೆ ವಿಸ್ತರಣೆ ಬಗ್ಗೆ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದಂತೆ ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಕ್ಯಾಂಟೀನ್ ನಿರ್ಮಾಣವಾಗಲಿದೆ. ಕ್ಯಾಂಟೀನ್ ನಿರ್ವಹಣೆಗಾಗಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ 10 ಅಧಿಕಾರಿಗಳ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ.
ಸರ್ಕಾರ ಕೆಲವು ದಿನಗಳ ಹಿಂದೆ ಘೋಷಣೆ ಮಾಡಿದಂತೆ 247 ಕ್ಯಾಂಟೀನ್ಗಳು ಸ್ಥಾಪನೆಯಾಗಲಿವೆ. ಒಂದು ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ನಗರದಲ್ಲಿ ಪ್ರತಿ ಲಕ್ಷ ಜನಸಂಖ್ಯೆಗೆ ಒಂದು ಕ್ಯಾಂಟೀನ್ ಹೆಚ್ಚುವರಿಯಾಗಿ ನಿರ್ಮಾಣ ಮಾಡಬೇಕು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಒಂದು ಅಥವ ಎರಡು ಕ್ಯಾಂಟೀನ್ ಅಗತ್ಯ ಇರುವ ನಗರದಲ್ಲಿ ಅಡುಗೆ ಕೋಣೆ ಹೊಂದಿರುವ ಕ್ಯಾಂಟೀನ್, 2ಕ್ಕೂ ಹೆಚ್ಚಿನ ಕ್ಯಾಂಟೀನ್ ಅಗತ್ಯವಿದ್ದರೆ ಪ್ರತ್ಯೇಕ ಅಡುಗೆ ಮನೆ ನಿರ್ಮಿಸಲು ನಿರ್ಧರಿಸಲಾಗಿದೆ. ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟೀನ್ಗಳ ಅನುಷ್ಠಾನಕ್ಕೆ ಪೌರಾಡಳಿತ ನಿರ್ದೇಶನಾಲಯ ರಾಜ್ಯ ಮಟ್ಟದ ನೋಡೆಲ್ ಸಂಸ್ಥೆ ಕಾರ್ಯ ನಿರ್ವಹಣೆ ಮಾಡಲಿದೆ.
ಊಟ, ಉಪಹಾರದ ಮಿತಿ
* 25 ಸಾವಿರ ಜನಸಂಖ್ಯೆ ಹೊಂದಿರುವ ಪಟ್ಟಣದಲ್ಲಿ ಒಂದು ಹೊತ್ತಿಗೆ 200 ಜನ
* 45 ಸಾವಿರ ಜನಸಂಖ್ಯೆ ಹೊಂದಿದ್ದರೆ 300 ಜನ
* 45 ಸಾವಿರದಿಂದ 1 ಲಕ್ಷ ಜನಸಂಖ್ಯೆ ಇದ್ದರೆ 500 ಜನರಿಗೆ ಊಟ, ಉಪಹಾರ ನೀಡಬೇಕು
ಯಾವ ನಗರಕ್ಕೆ ಎಷ್ಟು ಕ್ಯಾಂಟೀನ್? : ಮೈಸೂರು 11, ತುಮಕೂರು 4, ದಾವಣಗೆರೆ 8, ಶಿವಮೊಗ್ಗ 4, ಮಂಗಳೂರು 5, ಬೆಳಗಾವಿ 6, ವಿಜಯಪುರ 4, ಧಾರವಾಡ 12, ಕಲಬುರಗಿ 7, ರಾಯಚೂರು 3, ಬೀದರ್ 3, ಬಳ್ಳಾರಿ 5, ಹೊಸಪೇಟೆಯಲ್ಲಿ 3 ಇಂದಿರಾ ಕ್ಯಾಂಟೀನ್ ತೆರೆಯಲಾಗುತ್ತದೆ. ಈ ಕ್ಯಾಂಟೀನ್ಗಳಲ್ಲಿ ಪ್ರತ್ಯೇಕ ಅಡುಗೆ ಕೋಣೆಗಳನ್ನು ನಿರ್ಮಿಸಿ ಕ್ಯಾಂಟೀನ್ಗೆ ಆಹಾರ ಪೂರೈಕೆ ಮಾಡಲಾಗುತ್ತದೆ.
ಹಾಸನ, ರಾಮನಗರ, ಚಿತ್ರದುರ್ಗ, ಮಂಡ್ಯ, ಚಿಕ್ಕಮಗಳೂರು, ಉಡುಪಿ, ಬಾಗಲಕೋಟೆ, ಗದಗ ಮತ್ತು ಭದ್ರಾವತಿಯಲ್ಲಿ 2 ಅಡುಗೆ ಮನೆ ಸಹಿತ ಇಂದಿರಾ ಕ್ಯಾಂಟೀನ್ ನಿರ್ಮಾಣವಾಗಲಿದೆ. ಉಳಿದ ಎಲ್ಲಾ ನಗರ ಮತ್ತು ಪಟ್ಟಣಗಳಲ್ಲಿ ತಲಾ 1 ಅಡುಗೆ ಮನೆ ಸಹಿತ ಕ್ಯಾಂಟೀನ್ ನಿರ್ಮಾಣವಾಗಲಿದೆ.
ಕ್ಯಾಂಟೀನ್ಗಳಿಗೆ ಆಹಾರ ಸರಬರಾಜುದಾರರ ಆಯ್ಕೆಗೆ ಟೆಂಡರ್ ಪ್ರಕ್ರಿಯೆ ನಡೆಸಲು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಆಹಾರ ಪೂರೈಕೆಗೆ ತಗಲುವ ಸಹಾಯಧನದ ಮೊತ್ತದಲ್ಲಿ ಶೇ 30ರಷ್ಟನ್ನು ಕಾರ್ಮಿಕ ಇಲಾಖೆ, ಶೇ 70ರಷ್ಟನ್ನು ನಗರ ಸ್ಥಳೀಯ ಸಂಸ್ಥೆಗಳ ಅನುದಾನದಲ್ಲಿ ಭರಿಸಲಾಗುತ್ತದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ












Click it and Unblock the Notifications