ಪಂಚಮಸಾಲಿ 2ಎ ಮೀಸಲಾತಿ: ಬೆಳಗಾವಿಯಲ್ಲಿ ಸಿಎಂ ಹೇಳಿದ್ದೇನು?
ಬೆಳಗಾವಿ, ಡಿಸೆಂಬರ್ 16: ಕಳೆದ ಮೂರ ತಿಂಗಳಿಂದ ತಣ್ಣಗಿದ್ದ 2ಎ ಮೀಸಲಾತಿ ಹೋರಾಟ ಬೆಳಗಾವಿ ಅಧಿವೇಶನ ನಡೆಯುವ ವೇಳೆ ಮತ್ತೆ ಮುನ್ನೆಲೆಗೆ ಬಂದಿದೆ.
ಪಂಚಮಸಾಲಿ ಸಮುದಾಯಕ್ಕೆ ಸೆ.15ರೊಳಗೆ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಅ.1ರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು. ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆಯ ಬಳಿಕ 2ಎ ಮೀಸಲಾತಿ ಘೋಷಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಈಗ ಮೂರು ಬಹುತೇಕ ಮೂರು ತಿಂಗಳ ನಂತರವೂ ಸಿಎಂ ಅದನ್ನೇ ಪುನರುಚ್ಚರಿಸಿದ್ದಾರೆ.
ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಕೂಡಲಸಂಗಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳು ಹಾಗೂ ಸಮಾಜದ ಶಾಸಕರೊಂದಿಗೆ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಿದರು.
ಮೀಸಲಾತಿ ನೀಡುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸಂವಿಧಾನಾತ್ಮಕವಾಗಿ ಪರಿಶೀಲಿಸಲಾಗುವುದು. ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಬಗ್ಗೆ ಶಿಫಾರಸ್ಸು ಮಾಡಲಾಗಿದೆ. ವರದಿ ಬಂದ ಕೂಡಲೇ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಲಾಗುವುದು. ಚುನಾವಣೆ ನೀತಿ ಸಂಹಿತೆ ಇದ್ದುದರಿಂದ ಎಲ್ಲೆಡೆಯಿಂದ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಗೊಂಡ, ಟೋಕರಿ ಕೋಳಿ ಜಾತಿಗಳ ಸಿಂಧುತ್ವ ಸಮಸ್ಯೆ
ಎಸ್.ಟಿ ಟೋಕರಿ ಕೋಳಿ, ಎಸ್ಟಿ ಗೊಂಡ ಸೇರಿದಂತೆ ವಿವಿಧ ಜಾತಿಗಳ ಸಿಂಧುತ್ವ ಪ್ರಮಾಣವನ್ನು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ (ಜಾಗೃತಿ ಕೋಶ) ವರದಿ ಪಡೆದ ನಂತರವೇ ನೀಡಬೇಕೆಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಜಿಲ್ಲೆಯ ಗಣ್ಯರ ನೇತೃತ್ವದಲ್ಲಿ ಗೊಂಡ ಮತ್ತು ಟೋಕರಿ ಕೋಳಿ ಸಮಾಜದ ಮುಖಂಡರು ಸಿಎಂ ಬಸವರಾಜ ಬೊಮ್ಮಾಯಿರವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳ ಮುಖಂಡತ್ವದಲ್ಲಿ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಗೊಂಡ ಮತ್ತು ಟೋಕರಿ ಕೋಳಿ ಸಮಾಜದ ಮುಖಂಡರು, ರಾಜ್ಯದಲ್ಲಿ 51 ವಿವಿಧ ಬುಡಕಟ್ಟಿನ ಜಾತಿಗಳು ಪರಿಶಿಷ್ಟ ಪಂಗಡದಲ್ಲಿರುತ್ತವೆ.
ಆದರೆ ಕೇವಲ 12 ಜಾತಿಗಳಿಗೆ ಮಾತ್ರ ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ವರದಿ ಕಡ್ಡಾಯಗೊಳಿಸಿರುವುದರಿಂದ ಗೊಂಡ ಮತ್ತು ಟೋಕರಿ ಕೋಳಿ ಜಾತಿ ಜನಾಂಗಕ್ಕೆ ಅನ್ಯಾಯವಾಗುತ್ತಿದೆ. ಭಾರತ ಸಂವಿಧಾನದ ಪರಿಚ್ಛೇದ 15ರಲ್ಲಿ ಜಾತಿ, ಧರ್ಮ, ಹುಟ್ಟಿದ ಸ್ಥಳ ಮತ್ತು ಲಿಂಗ ಇವುಗಳಲ್ಲಿ ಯಾವುದೇ ತಾರತಮ್ಯ ಮಾಡಲು ಅವಕಾಶ ಇರುವುದಿಲ್ಲ. ಆದರೆ ಉಲ್ಲೇಖಿತ ಆದೇಶದಲ್ಲಿ 51 ಜಾತಿಗಳ ಪೈಕಿ ಕೇವಲ 12 ಜಾತಿಗಳಿಗೆ ಮಾತ್ರ ಸೀಮಿತಗೊಳಿಸಿ, ಸಿಂಧುತ್ವ ಪ್ರಮಾಣ ಪತ್ರಕ್ಕೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ವರದಿ ಕಡ್ಡಾಯಗೊಳಿಸಿ, ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಗಮನಕ್ಕೆ ತರಲಾಯಿತು.
-
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications