Bengaluru Second Airport: ಎರಡನೇ ಏರ್ಪೋರ್ಟ್ ಬಗ್ಗೆ ಬಿಗ್ ಅಪ್ಡೇಟ್; ಗೊಂದಲಕ್ಕೆ ತೆರೆ ಎಳೆದ ಎಂ ಬಿ ಪಾಟೀಲ್!
ಬೆಂಗಳೂರು, ನವೆಂಬರ್ 26: ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಬಿಗ್ ಅಪ್ಡೇಟ್ ಒಂದು ಬಂದಿದೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ವರದಿ ಬೆನ್ನಲ್ಲೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಸ್ಥಳವನ್ನು ಫೈನಲ್ ಮಾಡಿದೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಹೊಸ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಎರಡನೇ ವಿಮಾನ ನಿಲ್ದಾಣದ ಕುರಿತು ಎಂ ಬಿ ಪಾಟೀಲ್ ಬಿಗ್ ಅಪ್ಡೇಟ್ ನೀಡಿದ್ದಾರೆ.
ಎರಡನೇ ವಿಮಾನ ನಿಲ್ದಾಣದ ಕುರಿತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಅವರು ಮಾತನಾಡಿ, ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣವನ್ನು ಸ್ಥಾಪಿಸಲು ಗುರುತಿಸಿರುವ ಮೂರು ಸ್ಥಳಗಳ ಕುರಿತು ವಿವರವಾದ ಅಧ್ಯಯನವನ್ನು ನಡೆಸಲು ಕರ್ನಾಟಕ ಸರ್ಕಾರ ಟೆಂಡರ್ಗಳನ್ನು ಕರೆಯಲಿದೆ ಎಂದು ಹೇಳಿದ್ದಾರೆ. ಗುರುತಿಸಲಾದ ಸ್ಥಳಗಳ ಆರ್ಥಿಕ ಕಾರ್ಯಸಾಧ್ಯತೆ ಮತ್ತು ತಾಂತ್ರಿಕ ಕಾರ್ಯಸಾಧ್ಯತೆಯಂತಹ ಅಂಶಗಳನ್ನು ಅಧ್ಯಯನವು ಅನ್ವೇಷಿಸುತ್ತದೆ. ಇನ್ನೂ ನಾವು ಒಂದು ವಾರದಲ್ಲಿ ಟೆಂಡರ್ಗಳನ್ನು ಕರೆಯುತ್ತೇವೆ ಎಂದು ಹೇಳಿದರು.

ಸ್ಥಳ ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಆರಂಭಿಸುವುದಕ್ಕಾಗಿ, ಸರ್ಕಾರ ಶೀಘ್ರದಲ್ಲೇ ಸಲಹಾ ಸಂಸ್ಥೆಗಳಿಗೆ ಟೆಂಡರ್ ಆಹ್ವಾನಿಸಲಿದೆ. ಈ ತಿಂಗಳ ಆರಂಭದಲ್ಲಿ ಭಾರತೀಯ ವಿಮಾನಯಾನ ಪ್ರಾಧಿಕಾರ (AAI) ಹೇಳಿರುವ ಕೆಲವು ಪ್ರಕ್ರಿಯೆಗಳನ್ನು ಸಲಹಾ ಸಂಸ್ಥೆಗಳು ಮುಗಿಸಲಿದೆ ಎಂದು ಹೇಳಿದರು. ಪ್ರಸ್ತುತ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕಾಗಿ ಮೂರು ಸ್ಥಳಗಳನ್ನು ಪರಿಗಣಿಸಲಾಗಿದೆ ಎಂದು ತಿಳಿಸಿದ್ದಾರೆ. ಕನಕಪುರ ರಸ್ತೆಯ ಸಮೀಪದ ಸೋಮನಹಳ್ಳಿ ಮತ್ತು ಚೂಡಹಳ್ಳಿ ಬಳಿಯ ಎರಡು ಭೂಮಿಗಳು, ಹಾಗೂ ನೆಲಮಂಗಲದ ಬಳಿಯ ಕುಣಿಗಲ್ ರಸ್ತೆಯೊಂದನ್ನು ಇದಕ್ಕಾಗಿ ಗುರುತಿಸಲಾಗಿದೆ.
ಇನ್ನೂ ಉಪಮುಖ್ಯಮಂತ್ರಿ ಡಿ ಕೆ ಶೀವಕುಮಾರ್ ಮಾತಿನ ಸುಳಿಯಲ್ಲಿ ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ಮಾತ್ರ ಹೇಳಿದ್ದಾರೆ. ಪ್ರಸ್ತುತ ಯಾವುದೇ ನಿರ್ದಿಷ್ಟ ಸ್ಥಳದ ಬಗ್ಗೆ ನಿರ್ಧಾರಕ್ಕೆ ಬಂದಿಲ್ಲ. ಸ್ಥಳವನ್ನು ಅಂತಿಮಗೊಳಿಸುವ ಮೊದಲು ಹಲವಾರು ಪ್ರಕ್ರಿಯೆಗಳನ್ನು ಸಂಪೂರ್ಣಗೊಳಿಸಬೇಕು ಎಂದು ಪಾಟೀಲ್ ಹೇಳಿದ್ದಾರೆ.
ಟೆಂಡರ್ ಪ್ರಕ್ರಿಯೆಯ ನಂತರ ಆಯ್ಕೆ ಮಾಡಲಾದ ಸಲಹಾ ಸಂಸ್ಥೆಗೆ ವರದಿಯನ್ನು ಸಲ್ಲಿಸುವ ಕಾರ್ಯವನ್ನು ವಹಿಸಲಾಗುವುದು ಎಂದು ಪಾಟೀಲ್ ಹೇಳಿದರು. ಇದು ವಿಮಾನ ನಿಲ್ದಾಣಕ್ಕೆ ಸ್ಥಳವನ್ನು ಅಂತಿಮಗೊಳಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ಮತ್ತು ಕೇಂದ್ರ ಸರ್ಕಾರದ ನಡುವಿನ ಒಪ್ಪಂದವು 2033 ರವರೆಗೆ ದೇವನಹಳ್ಳಿಯಲ್ಲಿ ನಡೆಸುತ್ತಿರುವ ಒಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ 150 ಕಿಮೀ ವೈಮಾನಿಕ ವ್ಯಾಪ್ತಿಯೊಳಗೆ ಮತ್ತೊಂದು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಭಿವೃದ್ಧಿಯನ್ನು ತಡೆಯುತ್ತದೆ.
ಬೆಂಗಳೂರಿನಿಂದ ನೈರುತ್ಯಕ್ಕೆ 40 ಕಿಮೀ ದೂರದಲ್ಲಿರುವ ಹೊಸೂರಿನಲ್ಲಿ ವಿಮಾನ ನಿಲ್ದಾಣಕ್ಕಾಗಿ ತಮಿಳುನಾಡು ಯೋಜನೆಗಳನ್ನು ಘೋಷಿಸಿದ ಕೂಡಲೇ, ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣಕ್ಕಾಗಿ ಸ್ಥಳಗಳನ್ನು ಗುರುತಿಸಲು ಪ್ರಾರಂಭಿಸುವುದಾಗಿ ರಾಜ್ಯ ಘೋಷಿಸಿತ್ತು. ಈ ತಿಂಗಳ ಆರಂಭದಲ್ಲಿ ತಮಿಳುನಾಡು ಹೊಸೂರು ವಿಮಾನ ನಿಲ್ದಾಣಕ್ಕಾಗಿ ಸೈಟ್-ಕ್ಲಿಯರೆನ್ಸ್ ಅರ್ಜಿಯನ್ನು ಸಲ್ಲಿಸಿದೆ ಎಂದು ತಿಳಿದುಬಂದಿದೆ.
ಈ ವರ್ಷದ ಆರಂಭದಲ್ಲಿ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸ್ಥಳವನ್ನು ಅಂತಿಮಗೊಳಿಸುವ ಪ್ರಕ್ರಿಯೆಯ ಭಾಗವಾಗಿ ಮೂರು ಸ್ಥಳಗಳ ಪರಿಶೀಲನೆ ನಡೆಸಿತು. ಕೈಗಾರಿಕಾ ಇಲಾಖೆಯ ಮೂಲಗಳ ಪ್ರಕಾರ, AAI ಮೂರು ಸ್ಥಳಗಳಲ್ಲಿ ಪ್ರತಿಯೊಂದರಲ್ಲೂ ವಿವಿಧ ಸವಾಲುಗಳನ್ನು ಗುರುತಿಸಿದೆ ಮತ್ತು ವಿಮಾನಗಳ ಚಲನೆಗೆ ಇರುವ ಯಾವುದೇ ಅಡೆತಡೆಗಳನ್ನು ತೆಗೆದುಹಾಕಲು ಕ್ರಮಗಳನ್ನು ಶಿಫಾರಸು ಮಾಡಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications