ಹೋರಾಟ ನಿರತ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ
ಬೆಂಗಳೂರು, ಏಪ್ರಿಲ್, 01: ದ್ವಿತೀಯ ಪಿಯಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಬೆಂಗಳೂರಿನ ಮಲ್ಲೇಶ್ವರಂ ಪಿಯು ಬೋರ್ಡ್ ಎದುರು ನಡೆಯುತ್ತಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ತಹಬದಿಗೆ ತರಲು ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ.
ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಏಪ್ರಿಲ್ 12 ಕ್ಕೆ ಮರುಪರೀಕ್ಷೆ ಮಾಡುತ್ತೇನೆ ಎಂದು ಹೇಳಿತ್ತು. ಆದರೆ ವಿದ್ಯಾರ್ಥಿಗಳು ನಾವು ಮತ್ತೆ ಪರೀಕ್ಷೆ ಬರೆಯುವುದಿಲ್ಲ. ಸರ್ಕಾರ ಮಾಡಿದ ತಪ್ಪಿಗೆ ನಾವು ಹೊಣೆಗಾರರಾಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.[ಪಿಯುಸಿ ಪ್ರತಿಭಟನೆ ಚಿತ್ರಗಳು]
ರಸಾಯನಶಾಸ್ತ್ರ ಪರೀಕ್ಷೆ ರದ್ದಾದ ನಂತರ ಪಿಯು ಬೋರ್ಡ್ ಗೆ ಸಾಗರೋಪಾದಿಯಲ್ಲಿ ನುಗ್ಗಿದ ವಿದ್ಯಾರ್ಥಿಗಳು ಪ್ರತಿಭಟನೆ ಆರಂಭಿಸಿದ್ದರು. ಗುರುವಾರ ಸ್ಥಳಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ, ಬಿಜೆಪಿ ಮುಖಂಡರಾದ ಸುರೇಶ್ ಕುಮಾರ್, ಆರ್. ಅಶೋಕ್, ಸಿಟಿ ರವಿ ಭೇಟಿ ನೀಡಿ ನಾವು ವಿದ್ಯಾರ್ಥಿಗಳ ಪರವಾಗಿ ಸದನದಲ್ಲಿ ಹೋರಾಟ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು.

ಎರಡನೇ ಬಾರಿ ಪರೀಕ್ಷೆ
ನಿಗದಿಯಂತೆ ಮಾರ್ಚ್ 31ರಂದು ನಡೆಯಬೇಕಿದ್ದ ಪರೀಕ್ಷೆ ಪತ್ರಿಕೆ ಸೋರಿಕೆಯಾದ ಕಾರಣ ರದ್ದಾಗಿತ್ತು. ಹಿಂದೆ ಒಮ್ಮೆ ವಿದ್ಯಾರ್ಥಿಗಳು ಕೆಮೆಸ್ಟ್ರಿ ಪರೀಕ್ಷೆ ಬರೆದಿದ್ದರೂ ಆ ಪತ್ರಿಕೆ ಸಹ ಲೀಕ್ ಎಂದು ಹೇಳಿ ರದ್ದು ಮಾಡಲಾಗಿತ್ತು.

ವಿದ್ಯಾರ್ಥಿಗಳ ಬಂಧನ
ಆಕ್ರೋಶಗೊಂಡ ಕೆಲ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಬಿವಿಪಿ ಕಾರ್ಯಕರ್ತರನ್ನು ಸಹ ಬಂಧಿಸಲಾಗಿದ್ದು ಪಿಯು ಬೋರ್ಡ್ ಗೆ ಮತ್ತು ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಲಾಠಿ ಚಾರ್ಜ್
ಕೆರಳಿದ ವಿದ್ಯಾರ್ಥಿಗಳು ಮತ್ತು ಪಾಲಕರು ಮಲ್ಲೇಶ್ವರಂನ ಪಿಯು ಬೋರ್ಡ್ ಗೆ ನುಗ್ಗಿ ಆಕ್ರೋಶ ಹೊರ ಹಾಕುತ್ತಿದ್ದ ವೇಳೆ ಪರಿಸ್ಥಿತಿ ನಿಯಂತ್ರಣ ಮಾಡಲು ಲಾಠಿ ಚಾರ್ಜ್ ಮಾಡಲಾಗಿದೆ. ಇನ್ನೊಂದೆಡೆ ಪತ್ರಿಕೆ ಸೋರಿಕೆ ಸಂಬಂಧ ಸಿಐಡಿ ತನಿಖೆ ನಡೆಸುತ್ತಿದೆ.

ಮುಗಿಯದ ಗೊಂದಲ
ಒಂದೆಡೆ ಸರ್ಕಾರ ಇನ್ನೊಮ್ಮೆ ಪರೀಕ್ಷೆ ಮಾಡಲು ಸಿದ್ಧವಾಗಿದೆ. ಎರಡು ಬಾರಿ ಪರೀಕ್ಷೆಗೆ ಸಿದ್ಧರಾಗಿ ಬೇಸರಗೊಂಡಿರುವ ವಿದ್ಯಾರ್ಥಿಗಳು ಯಾವ ಕಾರಣಕ್ಕೂ ಪರೀಕ್ಷೆ ಬರೆಯಲ್ಲ ಎಂದು ಹೇಳುತ್ತಿದ್ದಾರೆ. ಒಟ್ಟಿನಲ್ಲಿ ಸದ್ಯಕ್ಕೆ ಯಾವ ಗೊಂದಲಗಳು ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ?












Click it and Unblock the Notifications